Home namma chikmagalur ಅ.29ಕ್ಕೆ ಮನೆ ಮನಗಳಲ್ಲಿ ಕನ್ನಡ ಅಭಿಯಾನ
namma chikmagalurchikamagalurHomeLatest News

ಅ.29ಕ್ಕೆ ಮನೆ ಮನಗಳಲ್ಲಿ ಕನ್ನಡ ಅಭಿಯಾನ

Share
Share

ಚಿಕ್ಕಮಗಳೂರು: ರಾಜ್ಯದಲ್ಲಿ ಪ್ರಪ್ರಥಮ ಭಾರಿಗೆ ಮನೆ ಮನಗಳಲ್ಲಿ ಕನ್ನಡ ಅಭಿಯಾನವನ್ನು ಅ.೨೯ ರಂದು ಬುಧವಾರ ಚಿಕ್ಕಮಗಳೂರು ನಗರದಲ್ಲಿ ಚಾಲನೆ ನೀಡಲಾಗುತ್ತಿದೆ ಎಂದು ಐಸಿರಿ ಫೌಂಡೇಶನ್ ಅಧ್ಯಕ್ಷ ಹಾಗೂ ಕ.ಸಾ.ಪ ತಾಲ್ಲೂಕು ಯುವಘಟಕದ ಅಧ್ಯಕ್ಷ ರೋಹನ್ ಭಾರ್ಗವಪುರಿ ತಿಳಿಸಿದರು.

ಅವರು ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಐಸಿರಿ ಫೌಂಡೇಶನ್ ಮತ್ತು ಕ.ಸಾ.ಪ ತಾಲ್ಲೂಕು ಯುವ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ೬೯ ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮನೆ ಮನಗಳಲ್ಲಿ ಕನ್ನಡ ಅಭಿಯಾನ ಚಾಲನೆಗೊಳ್ಳಲಿದೆ ಎಂದರು.

ನಟ ಪುನೀತ್ ರಾಜ್ ಕುಮಾರವರ ಪುಣ್ಯಸ್ಮರಣೆಯ ದಿನದಂದು ಅಭಿಯಾನಕ್ಕೆ ಚಾಲನೆ ನೀಡಲಾಗುವುದು ನಗರದ ನಾಗರೀಕರು ತಮ್ಮ ಕನ್ನಡಾಭಿಮಾನವನ್ನು ತಮ್ಮ ಮನೆಮನೆಗಳಲ್ಲಿ ಕುಟುಂಬ ಸಮೇತರಾಗಿ ಕನ್ನಡ ಧ್ವಜ ಹಾರಿಸಿ ಫೋಟೋ ಅಥವಾ ವೀಡೀಯೋವನ್ನು ಐಸಿರಿ ಕಛೇರಿಯ ವಾಟ್ಸಪ್ ಸಂಖ್ಯೆ:೭೯೭೫೪೦೮೧೬೨ ಕ್ಕೆ ಸ್ವ-ವಿವರ ಹಾಗೂ ಸ್ಥಳದೊಂದಿಗೆ ಕಳಿಸಿಕೊಡುವಂತೆ ಮನವಿ ಮಾಡಿದರು .

ಐಸಿರಿ ಫೌಂಡೇಶನ್ ಸಂಸ್ಥೆಯು ಭರವಸೆ ಮತ್ತು ಸುಧಾರಣೆ ಕಾರ್ಯದ ಜವಾಬ್ದಾರಿಯನ್ನು ತನ್ನ ಹೆಗಲಿಗೇರಿಸಿಕೊಂಡಿದ್ದು ವಿವಿಧ ಆಯಾಮಗಳಲ್ಲಿ ಈಗಾಗಲೆ ಸಮಾಜಮುಖಿ ಕಾರ್ಯಗಳಲ್ಲಿ ದಿಟ್ಟ ಹೆಜ್ಜೆಗಳನಿಟ್ಟು ಯೋಜನೆಯತ್ತ ಮುನ್ನೆಡೆಸುತ್ತಿದೆ ಐಸಿರಿ ಪರ್ಸ್ಪೆಕ್ಟಿವ್ ಎಂಬ ಆಯಾಮದಡಿಯಲ್ಲಿ ಜ್ಞಾನ ಶಿಬಿರ ನಡೆಸಿಕೊಂಡು ಬರುತ್ತಿದೆ ಎಂದರು.

ಐಸಿರಿ ಸಸ್ಟೇನೆಬಿಲಿಟಿ ಎಂಬ ಆಯಾಮದಡಿಯಲ್ಲಿ ಹಸಿರು ಸಮರ್ಥನೆಯ ಭವಿಷ್ಯಕ್ಕೆ ಮತ್ತು ಐಸಿರಿ ಇಂಡಿಯಾ ಆಯಾಮದಡಿಯಲ್ಲಿ ನಾಗರೀಕ ನಿರ್ಮಾಣ ಎಂಬ ಧ್ಯೇಯದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಮಾಹಿತಿ ನೀಡಿದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆಸುತ್ತಿರುವ ಮನೆಮನಗಳಲ್ಲಿ ಕನ್ನಡ ಅಭಿಯಾನ ಕಾರ್ಯಕ್ರಮವನ್ನು ಸರ್ವರೂ ಆಚರಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.ಪತ್ರಿಕಾಗೋಷ್ಠಿಯಲ್ಲಿ ಕ.ಸಾ.ಪ ತಾಲ್ಲೂಕು ಯುವಘಟಕದ ಮುಖಂಡರುಗಳಾದ ವೀಣಾ ಮಲ್ಲಿಕಾರ್ಜುನ್ , ವಿಜಯಲಕ್ಷ್ಮೀ, ರೂಪ ನಾಯಕ್ , ಸಚಿನ್ ಸಿಂಗ್ ಉಪಸ್ಥಿತರಿದ್ದರು.

Kannada campaign in homes on October 29th

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...