Home Latest News ಸಿ.ಟಿ.ರವಿ ಹೇಳಿಕೆಯನ್ನು ತಿರುಚಿ ಸಾಮಾಜಿಕ ಜಾಲತಾಣ ಹರಿಬಿಡಲಾಗಿದೆ
Latest NewschikamagalurHomenamma chikmagalur

ಸಿ.ಟಿ.ರವಿ ಹೇಳಿಕೆಯನ್ನು ತಿರುಚಿ ಸಾಮಾಜಿಕ ಜಾಲತಾಣ ಹರಿಬಿಡಲಾಗಿದೆ

Share
Share

ಚಿಕ್ಕಮಗಳೂರು: ಸಿ.ಟಿ.ರವಿ ಅವರ ಜನಪ್ರಿಯತೆ ಮತ್ತು ಜನಪರ ಕಾಳಜಿ ಸಹಿಸದ ಕಾಂಗ್ರೆಸ್‌ ಮುಖಂಡರು ಅವರ ಹೇಳಿಕೆಯನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್. ದೇವರಾಜಶೆಟ್ಟಿ ಹೇಳಿದರು.

‘ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸುವ ಸಂದರ್ಭದಲ್ಲಿ ಕಾಲೇಜಿನ ಡೀನ್ ಗೈರಾಗಿದ್ದರು. ಅವರ ವಿರುದ್ಧ ದೂರವಾಣಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿ ದ್ದರು. ಆದರೆ, ಸಿ.ಟಿ.ರವಿ ಅವರ ಮಾತುಗಳನ್ನು ಸವಿತಾ ಸಮಾಜಕ್ಕೆ ಅವಮಾನಕರವಾಗಿ ಮಾತನಾಡಿದ್ದಾರೆ ಎಂಬಂತೆ ತಿರುಚಿ ವಿಡಿಯೊ ಹರಿಬಿಟ್ಟಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಹೇಳಿದರು.

ನಿಷೇಧಿತ ಪದ ಬಳಕೆ ಮಾಡಿದ್ದಾರೆ ಎಂಬುದು ಸುಳ್ಳು. ಅವರ ಭೇಟಿ ವೇಳೆ ಡೀನ್‌ ಅವರನ್ನು ತಮ್ಮ ಮನೆಯಲ್ಲಿ ಕೂರಿಸಿಕೊಂಡಿದ್ದವರೇ ಈ ರೀತಿ ತಿರುಚಿ ವಿಡಿಯೊ ಹರಿಬಿಟ್ಟಿದ್ದಾರೆ ಎಂದರು.

ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಮುಖ್ಯಮಂತ್ರಿ ಬದಲಾವಣೆ ಮತ್ತು ಮಂತ್ರಿಮಂಡಲ ಪುನರ್ ರಚನೆಯ ಗುಂಗಿನಲ್ಲಿ ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಇದ್ದಾರೆ. ರಾಜ್ಯದ ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಮರೆತಿದ್ದಾರೆ ಎಂದು ಹೇಳಿದರು.

ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಜಸಂತಾ ಅನಿಲಕುಮಾರ್ ಮಾತನಾಡಿ, ‘ಕರ್ನಾಟಕ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ, ಹಲ್ಲೆ, ಕೊಲೆ ಪ್ರಕರಣಗಳು ಹೆಚ್ಚಾಗಿವೆ’ ಎಂದರು.

ರಾಜ್ಯದಲ್ಲಿ 65ಕ್ಕೂ ಹೆಚ್ಚು ಮಹಿಳೆಯರ ಹತ್ಯೆಯಾಗಿದೆ. ಹುಬ್ಬಳ್ಳಿಯ ನೇಹಾ ಹಿರೇಮರ್, ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಯಾದಗಿರಿ ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. 1,300ಕ್ಕಿಂತ ಹೆಚ್ಚು ಮಹಿಳಾ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಮೈಸೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್, ಕಾಲೇಜು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಸೇರಿ ಹಲವಾರು ಪ್ರಕರಣಗಳು ದಾಖಲಾಗಿವೆ. ಗೃಹ ಸಚಿವರು ಕಣ್ಣು ಮುಚ್ಚಿ ಕುಳಿತಿರುವುದು ವಿಪರ್ಯಾಸ ಎಂದರು.

ರಾಜ್ಯ ಸರ್ಕಾರದ ಕಮಿಷನ್ ಕಾಟಕ್ಕೆ 7 ಅಧಿಕಾರಿಗಳು ಹಾಗೂ 20ಕ್ಕೂ ಹೆಚ್ಚು ಸರ್ಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಸರ್ಕಾರದ ಒತ್ತಡದಿಂದ 6 ಜನ ಪ್ರಾಣ ತೆತ್ತಿದ್ದಾರೆ. 15ಕ್ಕಿಂತ ಹೆಚ್ಚು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದು, ದಯಾಮರಣ ಕೇಳಿ ಗುತ್ತಿಗೆದಾರರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಪುಷ್ಪರಾಜ್, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಮುಖಂಡರಾದ ವೀಣಾ, ಕವಿತಾ ಶೇಖರ್, ಪ್ರೀತಿ ಯೋಗೇಶ್, ರಾಜೇಶ್ವರಿ  ಭಾಗವಹಿಸಿದ್ದರು.

CT Ravi’s statement has been distorted and circulated on social media.

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...