Home Latest News ಇಂದಿರಾಗಾಂಧಿ-ಸರ್ದಾರ್ ವಲ್ಲಭಬಾಯಿ ಪಟೇಲರ ಸ್ಮರಣೆ
Latest NewschikamagalurHomenamma chikmagalur

ಇಂದಿರಾಗಾಂಧಿ-ಸರ್ದಾರ್ ವಲ್ಲಭಬಾಯಿ ಪಟೇಲರ ಸ್ಮರಣೆ

Share
Share

ಚಿಕ್ಕಮಗಳೂರು:  ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಮತ್ತು ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭಬಾಯಿ ಪಟೇಲ್ ಇವರುಗಳ ಸ್ಮರಣೆಯನ್ನು ಮಾಡುವ ಮೂಲಕ ಅವರ ಆಶಯಗಳನ್ನು ಈಡೇರಿಸಲು ಪ್ರತಿಯೊಬ್ಬರೂ ಪಣತೊಡಬೇಕೆಂದು ಕೆಪಿಸಿಸಿ ವಕ್ತಾರ ಹೆಚ್.ಹೆಚ್.ದೇವರಾಜ್ ಕರೆ ನೀಡಿದರು.

ಅವರು ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಮಾಜಿ ಪ್ರಧಾನಮಂತ್ರಿ ದಿವಂಗತ ಇಂದಿರಾಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಬಾಯಿ ಪಟೇಲರ ೧೫೦ ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.

ಇಂದಿರಾಗಾಂಧಿಯವರು ಕೈಗೊಂಡ ದಿಟ್ಟ ನಿರ್ಧಾರ ಹಾಗೂ ಹೋರಾಟಗಳಿಂದ ದೇಶದಲ್ಲಿ ಹಲವಾರು ಕ್ರಾಂತಿಕಾರಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವುಗಳನ್ನು ಮುನ್ನೆಡೆಸಿಕೊಂಡು ಹೋಗಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಹೇಳಿ ಇಂದಿರಾಗಾಂಧಿಯವರು ಅಂದು ಜಾರಿಗೆ ತಂದ ೨೧ ಅಂಶಗಳ ಕಾರ್ಯಕ್ರಮಗಳು ಪ್ರಸ್ತುತವಾಗಿ ಕಾರ್ಯನಿರ್ವಹಿಸುತ್ತಿವೆ. ಉಳುವವನೆ ಭೂ ಒಡೆಯ ಕಾರ್ಯಕ್ರಮ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ ಎಂದರು.

ಈ ರಾಷ್ಟ್ರವನ್ನು ನೂರಾರು ಸಂಸ್ಥಾನಗಳಿಂದ ಒಗ್ಗೂಡಿಸುವಲ್ಲಿ ಕಾರಣಕರ್ತರಾದ ಮಾಜಿ ಉಪ ಪ್ರಧಾನಿ ಹಾಗೂ ಉಕ್ಕಿನ ಮನುಷ್ಯ ಎಂದೇ ಕರೆಸಿಕೊಂಡಿದ್ದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಭಾರತ ಸದಾ ಏಕೀಕರಣ ಶಕ್ತಿಯಾಗಿ ಹೊರಹೊಮ್ಮಲು ಕಾರಣಕರ್ತರಾಗಿದ್ದಾರೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರೂ ಆದ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಸ್ವಾತಂತ್ರ್ಯ ಬಂದ ನಂತರ ಭಾರತ ದೇಶದಲ್ಲಿ ಇಷ್ಟೊಂದು ಕ್ರಾಂತಿಕಾರಕ ಬದಲಾವಣೆಗಳು ಕಂಡಿರುವುದು ಇಂದಿರಾಗಾಂಧಿಯವರು ಪ್ರಧಾನಮಂತ್ರಿ ಆದ ಸಂದರ್ಭದಲ್ಲಿ ಮಾತ್ರ ಎಂದು ಹೇಳಿದರು.

ಜನರ ಹಿತಕ್ಕಾಗಿ ಯಾರು ದುಡಿದಿರುತ್ತಾರೋ ಅವರನ್ನು ರಾಷ್ಟ್ರ ಗುರುತು ಮಾಡುತ್ತದೆ. ಇಂದಿರಾಗಾಂಧಿ ಹಾಗೂ ಸರ್ದಾರ್ ವಲ್ಲಭಬಾಯಿ ಪಟೇಲರಂತಹ ಮಹಾನ್ ನಾಯಕರನ್ನು ನೆನಪು ಮಾಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು. ಇಂದಿರಾಗಾಂಧಿಯವರು ತನ್ನ ಅಧಿಕಾರದ ಅವಧಿಯಲ್ಲಿ ಉತ್ತಮವಾದ ಜನಪರವಾದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಅವುಗಳು ಇಂದು ಉಳಿದಿವೆ. ಅವುಗಳನ್ನು ನಾವುಗಳು ಜೀವನದಲ್ಲಿ ಬಳಸಿಕೊಳ್ಳುವಂತೆ ಮನವಿ ಮಾಡಿದರು.

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿರಾಗಾಂಧಿಯವರು ದೇಶದ ಉಳಿವಿಗೆ ತನ್ನ ಪ್ರಾಣವನ್ನು ತ್ಯಜಿಸಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮಕ್ಕೆ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ದೇಶದ ಐಕ್ಯತೆ, ಅಖಂಡತೆಗಾಗಿ ಹೋರಾಡಿದ್ದಾರೆ. ಅವರ ಹಾಕಿ ಕೊಟ್ಟ ಮಾರ್ಗದರ್ಶನದಲ್ಲಿ ಎಲ್ಲರೂ ಸಾಗಬೇಕು ಎಂದು ತಿಳಿಸಿದರು.

ಸವಿತಾ ಸಮಾಜದವರು ತಮ್ಮ ಜೀವಿತ ಕಾಲವೆಲ್ಲ ಈ ಸಮಾಜದ ಎಲ್ಲಾ ಧರ್ಮದವರಿಗೂ ತಮ್ಮ ವೃತ್ತಿ ಸೇವೆ ಮಾಡುತ್ತಾ ಬರುತ್ತಿದ್ದು, ಅವರಿಲ್ಲದಿದ್ದರೆ ಮಾನವ ಕಾಡು ಪ್ರಾಣಿಗಳ ಹಾಗೆ ವಿಚಿತ್ರವಾಗಿರಬೇಕಿತ್ತು. ಇದನ್ನು ಅರಿಯದ ಸಿ.ಟಿ.ರವಿ ಸವಿತಾ ಸಮಾಜಕ್ಕೆ ಅವಹೇಳನಕಾರಿ ಪದಗಳನ್ನು ಬಳಸಿ ನೋವುಂಟು ಮಾಡಿದ್ದು, ಸಿ.ಟಿ.ರವಿ ಸವಿತಾ ಸಮಾಜದ ಕ್ಷಮೆ ಕೇಳುವಂತೆ ಒತ್ತಾಯಿಸಿದರು.

ಜವಾಬ್ದಾರಿ ಸ್ಥಾನದಲ್ಲಿರುವ ಸಿ.ಟಿ.ರವಿಯವರು ಈ ಹಿಂದೆ ಬೆಳಗಾವಿ ಅಧಿವೇಶನದಲ್ಲೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೂ ಕೆಟ್ಟ ಪದವನ್ನು ಬಳಸುವ ಮೂಲಕ ನನ್ನ ಬಾಯಿ ಸರಿಯಿಲ್ಲ ಎಂಬಂತೆ ಸಾಬೀತು ಪಡಿಸಿದ್ದು, ಮತ್ತೊಮ್ಮೆ ಸವಿತಾ ಸಮಾಜಕ್ಕೂ ಅವಹೇಳಕಾರಿ ಪದ ಬಳಸಿ ತನ್ನ ಮನಃಸ್ಥಿತಿ ಮತ್ತು ಯೋಗ್ಯತೆ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದರು.

ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇಂದಿರಾಗಾಂಧಿಯವರ ಮತ್ತು ಸರ್ದಾರ್ ವಲ್ಲಭಬಾಯಿ ಪಟೇಲರ ಭಾವಚಿತ್ರಕ್ಕೆ ಸಾಮೂಹಿಕವಾಗಿ ಪುಷ್ಪಾರ್ಚನೆ ಮಾಡಿದರು. ಕಾರ್ಯಕ್ರಮದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಪಿ.ತನೋಜ್ ಕುಮಾರ್ ನಾಯ್ಡು, ಚಿಕ್ಕಮಗಳೂರು ತಾಲ್ಲೂಕು ಪ್ರಚಾರ ಸಮಿತಿ ಅಧ್ಯಕ್ಷ ಬೆಟ್ಟಗೆರೆ ಪ್ರವೀಣ್, ಮುಖಂಡರಾದ ಹೆಚ್.ಇ.ಪ್ರಕಾಶ್, ರಾಘವೇಂದ್ರ, ಬಲ್ಬ್ ರಾಮಣ್ಣ, ಸೋಮಶೇಖರ್, ಸಂತೋಷ್, ರಾಜಶೇಖರ್, ಸುನೀಲ್, ರಸೂಲ್ ಖಾನ್, ಬಾಬು, ಸುರೇಶ್ ಕುಮಾರ್, ನಾಗೇಶ್ ರಾಜ್ ಅರಸ್, ತಂಬಿ, ಜಿಯಾ ಸೇರಿದಂತೆ ಮತ್ತಿತರರು ಇದ್ದರು.

Indira Gandhi-Sardar Vallabhbai Patel’s Memorial

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...