ಚಿಕ್ಕಮಗಳೂರು : ವಿದ್ಯುತ್ ಸ್ಪರ್ಶದಿಂದ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ
ವಿದ್ಯುತ್ ಸ್ಪರ್ಶದಿಂದ ಹೊಲದಲ್ಲಿದ್ದ ನೀರಿನ ಮೋಟರ್ ಆನ್ ಮಾಡಲು ಹೋದಾಗ ಸ್ಥಳದಲ್ಲೇ ಕುಸಿದು ಬಿದ್ದು ವಿವೇಕ್ (14) ಸಾವಪ್ಪಿದ್ದಾನೆ.
ಮಲ್ಲೇನಹಳ್ಳಿ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿವೇಕ್ ,ಇಂದು ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಶಾಲೆಗೆ ತೆರಳದೆ ಹೊಲಕ್ಕೆ ಹೋಗಿದ್ದ .
ಮಗನ ಅಕಾಲಿಕ ಸಾವಿನಿಂದ ಪೋಷಕರು, ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲುಮಟ್ಟಿದೆ.
ಮೃತ ವಿವೇಕ್ ಮಲ್ಲೇನಹಳ್ಳಿ ಸಮೀಪದ ನಿಂಗೇನಹಳ್ಳಿ ನಿವಾಸಿ .ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Student Daruna dies of electric shock
Leave a comment