Home namma chikmagalur ವಿಮಾನ ನಿಲ್ದಾಣಗಳ ಮಾದರಿಯಲ್ಲಿ ರಾಜ್ಯದ ಎಲ್ಲ ರೈಲುನಿಲ್ದಾಣ ಅಭಿವೃದ್ಧಿ
namma chikmagalurKadurLatest News

ವಿಮಾನ ನಿಲ್ದಾಣಗಳ ಮಾದರಿಯಲ್ಲಿ ರಾಜ್ಯದ ಎಲ್ಲ ರೈಲುನಿಲ್ದಾಣ ಅಭಿವೃದ್ಧಿ

Share
Share

ಬೀರೂರು: ರಾಜ್ಯದ ಎಲ್ಲ ರೈಲು ನಿಲ್ದಾಣಗಳನ್ನು ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ. ಅಂಗವಿಕಲರ ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ನಿಲ್ದಾಣಗಳಲ್ಲಿ ಲಿಫ್ಟ್‌, ಎಸ್ಕಲೇಟರ್‌ ಅಳವಡಿಸುವ ಉದ್ದೇಶವಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ಬೀರೂರು ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ನಿಲ್ದಾಣ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್‌ ವಿಲೀನವಾದ ಬಳಿಕ ರಾಜ್ಯದಲ್ಲಿ ಇಲಾಖೆಯ ಕಾರ್ಯಗಳು ವೇಗ ಪಡೆದಿವೆ. ₹3300 ಕೋಟಿ ವೆಚ್ಚದಲ್ಲಿ 1,216 ಎಕರೆ ಭೂಸ್ವಾಧೀನದ ಮೂಲಕ ವಿಸ್ತರಣೆಗೆ ಇದ್ದ ಅಡಚಣೆ ತೆರವುಗೊಳಿಸಿದ್ದು ಇದೊಂದು ದಾಖಲೆಯಾಗಿದೆ ಎಂದು ಮಾಹಿತಿ ನೀಡಿದರು.

ಅಮೃತಭಾರತ್‌ ಯೋಜನೆಯಡಿ ಬೀರೂರು ಮತ್ತು ಕಡೂರು ನಿಲ್ದಾಣಗಳನ್ನು ತಲಾ ₹ 20 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸುವ ಕೆಲಸ 2027-28ರ ವೇಳೆಗೆ ಮುಗಿಯಲಿದೆ. ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ವಿಷಯದಲ್ಲಿ ಆಂದೋಲನವೇ ನಡೆದಿದೆ. ಈಗಾಗಲೇ 644 ಮೇಲ್ಸೇತುವೆ ನಿರ್ಮಿಸಲಾಗಿದೆ.1,662 ಕಿ.ಮೀ ಹೊಸಲೈನ್‌ ಅಳವಡಿಕೆ ಪ್ರಗತಿಯಲ್ಲಿದೆ ಎಂದರು.

ಶುದ್ಧ ಕುಡಿಯುವ ನೀರು ಪೂರೈಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ವಿಷಯದಲ್ಲಿ ರಾಜ್ಯ ಸರ್ಕಾರ ಅಸಹಕಾರ ತೋರುತ್ತಿದೆ. ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ರಾಜ್ಯ ದೇಶದಲ್ಲಿ 21ನೇ ಸ್ಥಾನದಲ್ಲಿದ್ದು ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂದು ದೂರಿದರು.

ಈ ವೇಳೆ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಬೆಳ್ಳಿಪ್ರಕಾಶ್‌, ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್‌ ಮಿತ್ತಲ್‌, ಕಡೂರು ತಹಶೀಲ್ದಾರ್‌ ಸಿ.ಎಸ್‌.ಪೂರ್ಣಿಮಾ, ಬೀರೂರು ಪುರಸಭಾಧ್ಯಕ್ಷೆ ಭಾಗ್ಯಲಕ್ಷ್ಮಿ, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ, ಸವಿತಾ ರಮೇಶ್‌ ಹಾಜರಿದ್ದರು.

Development of all railway stations in the state on the model of airports

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...