Home Political News ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೋ ! ಭ್ರಾಂತಿಯೋ ?
Political NewsState News

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೋ ! ಭ್ರಾಂತಿಯೋ ?

Share
Share

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ ಎಂದು ಎರಡು ಬಣಗಳು ಬೊಬ್ಬೇ ಹೊಡೆಯುತ್ತಿವೆ.ಹೈಕಮಾಂಡ್ ಭಯ ಯಾವ ಬಣಕ್ಕೂ ಇಲ್ಲ.

ಮಾಜಿ ಮಂತ್ರಿ ಕೆ.ಎನ್.ರಾಜಣ್ಣ ” ನವೆಂಬರ್ ” ಕ್ರಾಂತಿಯ ಬಗ್ಗೆ ಹೇಳಕೆ ನೀಡಿದಾಗಿನಿಂದ ಅಧಿಕಾರ ಹಂಚಿಕೆ ಗದ್ದಲ ಹೆಚ್ಚಾಗಿದೆ. ನವೆಂಬರ್ ತಿಂಗಳಿಗೆ ಕಾಲಿಡಲಾಗಿದೆ ಈಗ ಬಿಹಾರ ಚುನಾವಣೆಯ ನಂತರ ಏನಾದರೂ ಆಗಬಹುದು ಎಂದು ರಾಜಕೀಯ ವಿಶ್ಲೇಷಣೆ ನಡೆದಿದೆ.

ದಿನಕ್ಕೊಂದು ದಾಳ ಉರುಳಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹಿಮ್ಮೇಳನ ಹೆಚ್ಚು ಸೌಂಡ್ ಮಾಡುವಂತೆ ನೋಡಿಕೊಂಡರೆ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಹಿಂಭಾಲಕರನ್ನು ಛೂ ಬಿಟ್ಟು ಕುಣಿಸಿ ತಾವು ಮೌನವಾಗಿ ದಾಳ ಉರುಳಿಸುತ್ತಿದ್ದಾರೆ.
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರ ಬಣ,ಡಿ.ಕೆ.ಶಿ ಬಣ,ತಟಸ್ಥ ಬಣ ಎಂದು ಮೂರು ಗುಂಪು ಸ್ಪಷ್ಟವಾಗಿ ಕಾಣುತ್ತಿವೆ.

ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲೂ ” ಕಾಂಗ್ರೆಸ್ “ಶಾಸಕರುಗಳು ಗೆದ್ದಿದ್ದಾರೆ ಪಾಪ ಬಿಡುವಿಲ್ಲದೆ ಅಭಿವೃದ್ಧಿಗಾಗಿ ತಡಕಾಡುತ್ತಿದ್ದಾರೆ.ಒಬ್ಬೊಬ್ಬರದು ಒಂದೊಂದು ಕತೆ,ಮೂಡಿಗೆರೆ ಶಾಸಕಿ ನಯನಮೋಟಮ್ಮ ಭಿನ್ನಮತದ ಹೊಡೆತದಿಂದ ತತ್ತರಿಸುವ ಬದಲು ಮುತಾಲಿಕ್ ಕಾಂಗ್ರೆಸ್ ಕಡೆ ಕಣ್ಣು ಮಿಟುಕಿಸಿ ಡಿ.ಕೆ.ನನ್ನ ಗಾಡ್ ಫಾದರ್ ಎಂದು ಗುರ್ತಿಸಿ ಕೊಂಡಿದ್ದಾರೆ. ಟಿ.ಡಿ.ರಾಜೇಗೌಡರಿಗೆ ಬಿಜೆಪಿಯವರ ಕಾಟ ದಿನೆ,ದಿನೇ ಬಿಗಡಾಯಿಸುತ್ತಿದೆ ಇವರು ಕೂಡ ಡಿ.ಕೆ ಪರ.ಚಿಕ್ಕಮಗಳೂರು ಶಾಸಕ ಹೆಚ್.ಡಿ.ತಮ್ಮಯ್ಯಗೆ ಕಲ್ಯಾಣ ಯೋಗ ಶುರುವಾಗಿದ್ದರು ಸಾಲದ ಬಾದೆ,ಮುಂದಿನ ಚುನಾವಣೆಗೆ ಕಡಿಮೆ ಎಂದರು ಇಪ್ಪತೈದು ಕೋಟಿ ಬೇಕು ಎಂಬ ಕೊರಗು ಇವರ ನೋಟ ಕೂಡ ಡಿ.ಕೆ ಕಡೆಗೆ ಇದೆ.

ತರೀಕೆರೆ ಶಾಸಕ ಶ್ರೀನಿವಾಸ್ ಮಾತ್ರ ಕುಟುಂಬ ಕಲ್ಯಾಣವೇ ಮುಖ್ಯ ಎಂಬ ನಡೆಯಲ್ಲಿ ಧೃಡವಾದ ನಂಬಿಕೆ ಇಟ್ಟುಕೊಂಡು ಸಿದ್ದರಾಮಯ್ಯನವರ ಪರ ನಿಂತಿದ್ದಾರೆ.ಕಡೂರು ಆನಂದ್ ಮಾತ್ರ ಕ್ಷೇತ್ರದಲ್ಲಿ ಎಷ್ಟು ಗಲಾಟೆ ನಡೆಯಲಿ ರಾಜ್ಯದಲ್ಲಿ ಎರಡು ಗುಂಪು ಬೇಕು ಎಂಬ ಗೊಂದಲದಲ್ಲಿ ಇದ್ದು ಸಮಯ ನೋಡಿ ತೀರ್ಮಾನಕ್ಕೆ ಬರಬಹುದು ಎಂಬ ಸಾಧ್ಯತೆ ಎಂದು ರಾಜಕೀಯ ವಿಶ್ಲೇಷಕರ ಅನಿಸಿಕೆಯಾಗಿದೆ.ನವೆಂಬರ್ ನಲ್ಲಿ ಕಾಂತಿಯೋ ,ಭ್ರಾಂತಿಯೋ ಕಾದು ನೋಡಬೇಕು. ಒಟ್ಟಾರೆ ಹಲವು ರಾಜಕೀಯ ಬದಲಾವಣೆ ಆಗುವುದು ಖಚಿತ.

November revolution in the state! Misconceptions?

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...