Home namma chikmagalur ಅಜ್ಜಂಪುರದಲ್ಲಿ ಜುಂಜಪ್ಪ ಸ್ವಾಮಿ ದೇವರ ಜಾತ್ರಾ ಮಹೋತ್ಸವ
namma chikmagalurajjampuraLatest News

ಅಜ್ಜಂಪುರದಲ್ಲಿ ಜುಂಜಪ್ಪ ಸ್ವಾಮಿ ದೇವರ ಜಾತ್ರಾ ಮಹೋತ್ಸವ

Share
Share

ಅಜ್ಜಂಪುರ: ತಾಲ್ಲೂಕಿನ ಭಕ್ತನ ಕಟ್ಟೆ, ಹುಚ್ಚೇನಹಟ್ಟಿ, ದಾಸರಹಟ್ಟಿ ಗ್ರಾಮಗಳಲ್ಲಿ ಜುಂಜಪ್ಪ ಸ್ವಾಮಿ ದೇವರ ಜಾತ್ರಾ ಮಹೋತ್ಸವ ಮಂಗಳವಾರ ಜರುಗಿತು.

ಜಾತ್ರೆ ಪ್ರಯುಕ್ತ ಜುಂಜಪ್ಪ ಸ್ವಾಮಿ, ಈರಣ್ಣಜ್ಜ ಸ್ವಾಮಿ ಉತ್ಸವ ಮೂರ್ತಿಯನ್ನು ವಿವಿಧ ಹೂಗಳಿಂದ ಅಲಂಕರಿಸಿ, ಪೂಜೆ ಸಲ್ಲಿಸಲಾಯಿತು. ಬಳಿಕ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಜಾನಪದ ಕಲಾತಂಡದೊಂದಿಗೆ ಮೆರವಣಿಗೆ ನಡೆಸಲಾಯಿತು.

ಜುಂಜಪ್ಪ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಬಂದು ದುಗ್ಗಳ ಸೇವೆ ಸಲ್ಲಿಸಿದರೆ, ಮನೆ ಮಂದಿಗೆ ಹಾವು- ಹುಪ್ಪಟೆಗಳು ಕಾಟ ಕೊಡುವುದಿಲ್ಲ. ಚರ್ಮ ರೋಗ ಬರುವುದಿಲ್ಲ. ಕಿವಿ ನೋವು ಕಾಣಿಸಿಕೊಳ್ಳುವುದಿಲ್ಲ. ಜಾನುವಾರುಗಳಿಗೆ ರೋಗ ತಗಲುವುದಿಲ್ಲ ಎಂಬ ನಂಬಿಕೆ ಇದೆ. ಹೀಗಾಗಿ ಹೆಚ್ಚಿನ ಭಕ್ತರು ಜಾತ್ರೆಗೆ ಬರುತ್ತಾರೆ ಎಂದು ದೇವಾಲಯ ಸಮಿತಿಯ ಹುಚ್ಚೇನಹಟ್ಟಿ ಶಿವಣ್ಣ ತಿಳಿಸಿದರು.

ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳ ಸಾವಿರಾರು ಭಕ್ತರು ದೇವರ ದರ್ಶನ ಪಡೆದು, ಹೂವು ಹಣ್ಣು ಸಮರ್ಪಿಸಿದರು. ದುಗ್ಗಲ ಸೇವೆ ಸಲ್ಲಿಸಿದರು. ಜಾತ್ರಾ ಮಹೋತ್ಸವ ಪ್ರಯುಕ್ತ ಸೋಮವಾರ ಗುಡ್ಡೆ ಪ್ರವೇಶ ನಡೆಯಿತು. ಬುಧವಾರ (ನ. 5) ಹುಚ್ಚೇನ ಹಟ್ಟಿಯಲ್ಲಿ ದೊಡ್ಡ ಎಡೆ ಸೇವೆ ಮತ್ತು ಉತ್ಸವದ ಮೂಲಕ ಜಾತ್ರೆ ಸಂಪನ್ನಗೊಳ್ಳಲಿದೆ.

Junjappa Swamy God’s festival in Ajjampura
Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ...