Home Latest News ‘ರೈತರಿಗೆ 3 ರೂಪಾಯಿ ಚೆಕ್ ಕೊಟ್ಟು ಅವಮಾನಿಸಿದ ಕೇಂದ್ರ ಸರ್ಕಾರ’
Latest NewschikamagalurHomenamma chikmagalur

‘ರೈತರಿಗೆ 3 ರೂಪಾಯಿ ಚೆಕ್ ಕೊಟ್ಟು ಅವಮಾನಿಸಿದ ಕೇಂದ್ರ ಸರ್ಕಾರ’

Share
Share

ಚಿಕ್ಕಮಗಳೂರು: ಪ್ರಧಾನಮಂತ್ರಿ ಪಸಲ್ ಭೀಮ ಯೋಜನೆ ಅಡಿ ಮಹಾರಾಷ್ಟ್ರದ ರೈತರಿಗೆ ಕೇಂದ್ರ ಸರ್ಕಾರ ₹3, ₹2.30 ಪರಿಹಾರ ನೀಡಿದ್ದು, ಆ ಮೂಲಕ ಬಿಜೆಪಿಯ ನಿಜ ಬಣ್ಣ ಬಯಲಾಗಿದೆ ಎಂದು ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು ಟೀಕಿಸಿದರು.

ರೈತರಿಗೆ ಇಷ್ಟು ಕಡಿಮೆ ಪರಿಹಾರ ನೀಡಲಾಗಿದೆ. ಈ ಘಟನೆ ಬಗ್ಗೆ ಪ್ರಧಾನ ಮಂತ್ರಿಯಾಗಲಿ, ಬಿಜೆಪಿ ನಾಯಕರಾಗಲಿ ಮಾತನಾಡುತ್ತಿಲ್ಲ. ಇದು ನಕಲಿ ದೇಶ ಭಕ್ತಿಯನ್ನು ಸಾರುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ  ಬುಧವಾರ ಹೇಳಿದರು.

ಅತಿವೃಷ್ಟಿ ಸಂಕಷ್ಟದಲ್ಲಿ ಇರುವ ರೈತರಿಗೆ ಬಿಜೆಪಿ ದೀಪಾವಳಿಯ ಉಡುಗೊರೆಯಾಗಿ ಇಂತಹ ದ್ರೋಹ ಬಗೆದಿದೆ. ₹3 ಪರಿಹಾರ ಚೆಕ್‌ ನೀಡುವಾಗ ನಕಲಿ ದೇಶ ಭಕ್ತರು ಎಲ್ಲಿದ್ದರು. ಈ ಹಿಂದೆ ಇದೇ ರೈತರು ನಡೆಸಿದ ಹೋರಾಟ ಹತ್ತಿಕ್ಕುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿತು. ದೆಹಲಿಯಲ್ಲಿ ಮುಳ್ಳುತಂತಿ, ತಡೆಗೋಡೆ, ಜಲಫಿರಂಗಿಗಳನ್ನು ಉಪಯೋಗಿಸಿತ್ತು. ಇದ್ದನ್ನು ರೈತರು ಇನ್ನೂ ಮರೆತಿಲ್ಲ ಎಂದರು.

ಹೋರಾಟದಲ್ಲಿ ಮಡಿದ ರೈತರಿಗೆ ಒಂದು ಸಾಂತ್ವನದ ಮಾತು ಹೇಳಿದ ಪ್ರಧಾನಿ ನಡೆ ಜನ ವಿರೋಧಿ ಮತ್ತು ರೈತ ವಿರೋಧಿಯಾಗಿದೆ. ಪ್ರತಿ ಮಾತಿನಲ್ಲೂ ದೇಶಭಕ್ತಿ ಎಂದು ಹೇಳಿಕೊಳ್ಳುವ ಆರ್‌ಎಸ್‌ಎಸ್‌ ಮುಖಂಡರು ಕೂಡ ಮಾತನಾಡಿಲ್ಲ. ಇದನ್ನು ಕಂಡರೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ರೈತ ವಿರೋಧಿಗಳು ಎಂದು ಹೇಳಿದರು.

ಬಿಜೆಪಿ ಮತ್ತು ಆರ್‌ಎಸ್‌ಎಸ್ ಧಾರ್ಮಿಕ ಅಸಹನೆ ಉಂಟುಮಾಡುತ್ತಿವೆ. ಸಂವಿಧಾನದ ಪ್ರಕಾರ ಭಾರತದ ಎಲ್ಲಾ ಸಂಘಟನೆಗಳು ನೋಂದಾಯಿಸಿಕೊಂಡು ಲೆಕ್ಕಪತ್ರಗಳನ್ನು ಜನರ ಮುಂದಿಡಬೇಕು. ಹಿಂದುಳಿದರವ, ರೈತರ, ಕಾರ್ಮಿಕರ ಮತ್ತು ದಲಿತರ ನೋವು ಆರ್‌ಎಸ್‌ಎಸ್,  ಬಿಜೆಪಿಗೆ ಬೇಕಿಲ್ಲ. ಭಾವನಾತ್ಮಕವಾಗಿ ಸಮಾಜ ಒಡೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿರುವುದು ಖಂಡನೀಯ ಎಂದರು.

ಆಫ್ಘಾನಿಸ್ತಾನದ ವಿದೇಶಾಂಗ ಸಚಿವ ಮುತ್ತಾಕಿ ದೆಹಲಿ ಭೇಟಿ ಸಂದರ್ಭದಲ್ಲಿ ಮಹಿಳಾ ಪತ್ರಕರ್ತರನ್ನು ಹೊರಗಿಟ್ಟ ವಿಚಾರ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಮೂರ್ತಿ ಗವಾಯಿ ಅವರ ಮೇಲೆ ಚಪ್ಪಲಿ ಎಸೆತ ಘಟನೆಯನ್ನು ಆರ್‌ಎಸ್‌ಎಸ್ ಮತ್ತು ಬಿಜೆಪಿ ಏಕೆ  ಖಂಡಿಸಲಿಲ್ಲ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಮುಖಂಡ ತನೂಜ್‌ಕುಮಾರ್, ರೋಬಿನ್ ಮೋಸಸ್, ಚಂದ್ರಶೇಖರ್, ಶಾಂತಕುಮಾರ್, ವಿಜಯಕುಮಾರ್, ಹಿರೇಮಗಳೂರು ರಾಮಚಂದ್ರ ಉಪಸ್ಥಿತರಿದ್ದರು.

‘Central government insulted farmers by giving them a Rs 3 cheque’

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...