ಚಿಕ್ಕಮಗಳೂರು: ಬಡತನ ಮುಕ್ತ, ನಿರುದ್ಯೋಗ ಮುಕ್ತ ಸ್ವಾವಲಂಬಿ-ಸ್ವಾಭಿಮಾನಿ, ಆತ್ಮನಿರ್ಭರ ಭಾರತವಾಗಬೇಕೆಂಬುದು ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.
ಅವರು ಇಂದು ನಗರದ ಆರ್ಜಿ ರಸ್ತೆಯಲ್ಲಿರುವ ಜೋಳ್ದಾಳ್ ನಿಲಯದ ಆವರಣದಲ್ಲಿ ಜೆಪಿಕೆ ಇಂಡಸ್ಟ್ರೀಸ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಜೆಪಿಕೆ ಇಂಡಸ್ಟ್ರೀಸ್ನಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಯ ಜೊತೆಗೆ ತರಬೇತಿ ನೀಡಿ ಉದ್ಯೋಗ ನೀಡಲು ಯೋಜನೆ ರೂಪಿಸಲಾಗಿದ್ದು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗುತ್ತದೆ. ಪ್ರತಿಯೊಬ್ಬ ಭಾರತೀಯನೂ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಚಿಂತನೆ ನಡೆದಿರುವ ಈ ಸಂದರ್ಭದಲ್ಲಿ ಇದು ಯಶಸ್ವಿಯಾದರೆ ಆತ್ಮನಿರ್ಭರ ಭಾರತ ಆಗಲು ಸಾಧ್ಯ ಎಂದರು.
ಜೆಪಿಕೆ ಇಂಡಸ್ಟ್ರೀಸ್ ಸಾವಿರಾರು ಯುವಕರಿಗೆ ಉದ್ಯೋಗ ನೀಡುವ ಉದ್ದಿಮೆಯಾಗಿ ಬೆಳೆಯಲಿ, ಜಿಲ್ಲೆಯ ನಿರುದ್ಯೋಗ ಸಮಸ್ಯೆಗೆ ಪರಿಹಾರ ರೂಪಿಸುವ ಕಾರ್ಯ ಮಾಡಲಿ ಎಂದು ಶುಭ ಹಾರೈಸಿದರು.
ಆಶಾಕಿರಣ ಚಾರಿಟಬಲ್ ಟ್ರಸ್ಟ್ನ ಮುಖ್ಯ ಟ್ರಸ್ಟಿ ಡಾ. ಜೆ.ಪಿ ಕೃಷ್ಣೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಈ ರೀತಿಯ ಇಂಡಸ್ಟ್ರೀಸ್ ಇಲ್ಲ, ಆದಿಚುಂಚನಗಿರಿ ಪೀಠದ ಪರಮಪೂಜ್ಯ ಶ್ರೀಶ್ರೀಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು ಉದ್ಘಾಟಿಸಿ ಎಲ್ಲರಿಗೂ ಶುಭವಾಗಲಿ ಎಂದು ಆಶೀವರ್ದಿಸಿದ್ದಾರೆ ಎಂದರು.
ಜೆಪಿಕೆ ಇಂಡಸ್ಟ್ರೀಸ್ ನನ್ನ ಪುತ್ರಿಯ ಕನಸಾಗಿತ್ತು, ನೂರು ಜನ ಸಂದರ್ಶನಕ್ಕೆ ಹಾಜರಾಗಿದ್ದರು. ಈಗ ೨೦ ಜನರಿಗೆ ಉದ್ಯೋಗ ನೀಡಿದ್ದೇವೆ. ಅಗತ್ಯವಿದ್ದರೆ ಮುಂದೆ ನೋಡಿಕೊಂಡು ವಿಸ್ತರಿಸುತ್ತೇವೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಆಶ್ರಯ ಫೌಂಡೇಶನ್ ಉಪಾಧ್ಯಕ್ಷೆ ಡಾ. ವರ್ಷ ಅಭಿಷೇಕ್ ಮಾತನಾಡಿ, ಜೆಪಿಕೆ ಇಂಡಸ್ಟ್ರೀಸ್ ಚಿಕ್ಕಮಗಳೂರಿನಲ್ಲಿ ಮೊದಲ ಬಾರಿಗೆ ಚಿಕ್ಕದಾಗಿ ಆರಂಭಿಸಿದ್ದೇವೆ. ಮುಂದೆ ದೊಡ್ಡ ಉದ್ಯಮವಾಗಿ ಬೆಳೆಸಬೇಕೆಂದು ಕನಸು ಇದ್ದು, ಜಿಲ್ಲೆಯ ಜನರಿಗೆ ಶಕ್ತಿ ತುಂಬಿ ಸಬಲೀಕರಣ ಮಾಡಲು ಗುರಿಹೊಂದಲಾಗಿದೆ ಎಂದು ಹೇಳಿದರು.
ಎಲ್ಲರ ಸಹಕಾರದೊಂದಿಗೆ ಪ್ರಾರಂಭಿಸಿರುವ ಈ ಇಂಡಸ್ಟ್ರೀಸ್ನಲ್ಲಿ ಮುಂದೆ ಸಾವಿರಾರು ಮಹಿಳೆಯರು ಮತ್ತು ಪುರುಷರಿಗೆ ಉದ್ಯೋಗ ನೀಡುವ ಬೃಹತ್ ಉದ್ದಿಮೆಯಾಗಿ ಬೆಳೆಯುವಂತೆ ಮಾಡುತ್ತೇವೆ ಎಂದರು. ಜೆಪಿಕೆ ಇಂಡಸ್ಟ್ರೀಸ್ನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಆದಿಚುಂಚನಗಿರಿ ಪೀಠದ ಶ್ರೀ ಜಗದ್ಗುರು ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ, ಶಾಸಕ ಟಿ.ಡಿ ರಾಜೇಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್, ಆಶ್ರಯ ಪೌಡೇಷನ್ನ ಸಾಗರ್, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್ ದೇವರಾಜ್ಶೆಟ್ಟಿ, ಮುಖಂಡರಾದ ದೀಪಕ್ ದೊಡ್ಡಯ್ಯ, ಮಹೇಶ್, ಡಾ. ಗೌರಿ ಮತ್ತಿತರರು ಉಪಸ್ಥಿತರಿದ್ದರು.
JPK Industries has helped in self-reliant living
Leave a comment