Home namma chikmagalur ತೀರ್ಪುಗಾರರ ನಿರ್ಲಕ್ಷ್ಯದಿಂದ ರಾಜ್ಯಮಟ್ಟದ ಆಯ್ಕೆಯಲ್ಲಿ ಅನ್ಯಾಯ
namma chikmagalurchikamagalurHomeLatest News

ತೀರ್ಪುಗಾರರ ನಿರ್ಲಕ್ಷ್ಯದಿಂದ ರಾಜ್ಯಮಟ್ಟದ ಆಯ್ಕೆಯಲ್ಲಿ ಅನ್ಯಾಯ

Share
Share

ಮೂಡಿಗೆರೆ: ‘ಜಿಲ್ಲಾ ಯುವ ಜನೋತ್ಸವದಲ್ಲಿ ತೀರ್ಪುಗಾರರ ನಿರ್ಲಕ್ಷ್ಯದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಬೇಕಿದ್ದ ನಮ್ಮ ಕಲಾ ಸಂಘಕ್ಕೆ ದ್ರೋಹವೆಸಗಲಾಗಿದೆ’ ಎಂದು ಮಿತ್ರ ಜಾನಪದ ಕಲಾ ಸಂಘದ ಸದಸ್ಯ ಕೆ.ಸಿ. ಚಂದ್ರಶೇಖರ್ ದೂರಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ. 4ರಂದು ಚಿಕ್ಕಮಗಳೂರು ಕುವೆಂಪು ಕಲಾ ಮಂದಿರದಲ್ಲಿ ಜಿಲ್ಲಾಡಳಿತ, ಜಿ.ಪಂ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಶ್ರಯದಲ್ಲಿ ಜಿಲ್ಲಾಮಟ್ಟದ ಯುವ ಜನೋತ್ಸವ ಏರ್ಪಡಿಸಲಾಗಿತ್ತು. ಜಾನಪದ ಗೀತೆ ಹಾಗೂ ಜಾನಪದ ನೃತ್ಯ ಸ್ಪರ್ಧೆಯಲ್ಲಿ ನಮ್ಮ ತಂಡವು ಭಾಗವಹಿಸಿ ಗೆಲುವು ಸಾಧಿಸಿರುವುದು ಅಂಕಪಟ್ಟಿಯಲ್ಲಿ ಸ್ಪಷ್ಟವಾಗಿದೆ.

ಆದರೆ, ಈ ಸ್ಪರ್ಧೆಗೆ ತೀರ್ಪುಗಾರರಾಗಿ ಕರ್ತವ್ಯ ನಿರ್ವಹಿಸಿದ್ದ ಶಿವಕುಮಾರ್ ಬ್ಯಾರುವಳ್ಳಿ ನೀಡಿರುವ ಅಂಕಪಟ್ಟಿಯಲ್ಲಿರುವ ಫಲಿತಾಂಶ ಹೊರತುಪಡಿಸಿ, ಪಿ.ಗೌರೀಶ್ ಹಾಗೂ ಕೆ. ಸುಜಾತ ಅವರು ನೀಡಿರುವ ಅಂಕಗಳಲ್ಲಿ ತಿದ್ದಿಪಡಿಯಾಗಿರುವುದು ಸ್ಪಷ್ಟವಾಗಿ ಕಂಡು ಬಂದಿದೆ. ಇದರಿಂದ ತಮ್ಮ ತಂಡಕ್ಕೆ ಮೋಸವಾಗಿದೆ ಎಂದು ಹೇಳಿದರು.

‘ಈ ಪ್ರಕ್ರಿಯೆ ಗಮನಿಸಿದರೆ ಪ್ರಭಾವಿ ವ್ಯಕ್ತಿಗಳು  ತೀರ್ಪುಗಾರರ ಮೇಲೆ ಒತ್ತಡ  ಹೇರಿ, ಗೆಲುವು ಪಡೆಯಬೇಕಿದ್ದ ನಮ್ಮ ತಂಡವನ್ನು ಅಂಕಪಟ್ಟಿ ತಿದ್ದುವ ಮೂಲಕ ಸೋಲಿಸಿ, ಬೇರೆ ತಂಡಗಳನ್ನು ಗೆಲ್ಲಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಗಿದೆ. ಹಾಗಾಗಿ ಪಾರದರ್ಶಕತೆ ಇಲ್ಲದ ಫಲಿತಾಂಶ ತಡೆ ಹಿಡಿದು, ತಿದ್ದುಪಡಿ ಮಾಡುವ ಮುನ್ನ ಅಂಕಪಟ್ಟಿಯಲ್ಲಿ ನಮೂದಿಸಿದ ಅಂಕಗಳ ಆಧಾರದ ಮೇಲೆ ನಮ್ಮ ತಂಡಕ್ಕೆ ಪ್ರಥಮ ಸ್ಥಾನ ಘೋಷಣೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆ ಮಾಡಬೇಕು. ಇಲ್ಲವಾದರೆ ಯಾವುದೇ ತಂಡವನ್ನು ಕಳಿಸಬಾರದು’  ಎಂದು ಒತ್ತಾಯಿಸಿದರು.

ಮಿತ್ರ ಜಾನಪದ ಕಲಾ ಸಂಘದ ಸದಸ್ಯರಾದ ಜಯಪಾಲ್, ನವೀನ್ ಕಣಚೂರು, ಸುನೀಲ್ ಹಂತೂರು, ಶಶಿ ಜೇನುಬೈಲ್ ಭಾಗವಹಿಸಿದ್ದರು.

Injustice in state-level selection due to judges’ negligence

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...