Home namma chikmagalur ಭೂರಹಿತ ಭೋವಿ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಗೆ ನೆರವು
namma chikmagalurchikamagalurHomeLatest News

ಭೂರಹಿತ ಭೋವಿ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಗೆ ನೆರವು

Share
Share
ಚಿಕ್ಕಮಗಳೂರು: ಭೂ ಒಡೆತನ ಯೋಜನೆಯಡಿ ಭೋವಿ ಸಮುದಾಯದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು ನಿಗಮದಿಂದ ರೂ. ೨೦ ಲಕ್ಷ ಧನಸಹಾಯ ನೀಡಲಾಗುವುದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಮಪ್ಪ ಎಂ. ತಿಳಿಸಿದರು.
ಇಂದು ನಗರದ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ನಿಗಮದ ಯೋಜನೆಗಳ ಕುರಿತು ಮಾತನಾಡಿ, ಫಲಾನುಭವಿಯು ವಾಸಿಸುತ್ತಿರುವ ಸ್ಥಳದಿಂದ ಗರಿಷ್ಠ ೧೦ ಕಿ.ಮೀ. ವ್ಯಾಪ್ತಿಯೊಳಗೆ ಜಮೀನು ಖರೀದಿಸಿ ಭೋವಿ ಸಮುದಾಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರನ್ನು ಭೂ ಮಾಲೀಕರನ್ನಾಗಿ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ ಎಂದರು.
ಜಿಲ್ಲೆಯಲ್ಲಿ ಭೋವಿ ಸಮುದಾಯವು ೫ ವಿಧಾನಸಭಾ ಕ್ಷೇತ್ರಗಳಿಂದ ೩೩.೦೦೦ ಜನಸಂಖ್ಯೆ ಇರುವುದಾಗಿ ಅಂಕಿ ಅಂಶದ ಮೂಲಕ ತಿಳಿದು ಬಂದಿದ್ದು, ಈ ಕಾರಣದಿಂದಾಗಿ ಅಧಿಕಾರಿಗಳು ಜೊತೆಗೂಡಿ ಸಂಪೂರ್ಣವಾಗಿ ಎಲ್ಲ ೮ ಯೋಜನೆಗಳ ಬಗ್ಗೆ ವಿವರಣೆಯನ್ನು ಕೊಡುವುದರ ಮೂಲಕ ಸರ್ಕಾರದ ಸೌಲಭ್ಯಗಳು ಸಮುದಾಯದ ಜನರಿಗೆ ತಲುಪಲು ಅಧಿಕಾರಿಗಳು ಹೆಚ್ಚು ಪ್ರಚಾರ ಕೈಗೊಂಡು ಯೋಜನೆಯ ಲಾಭ ದೊರೆಯುವಂತೆ ಮಾಡಬೇಕು ಎಂದರು.
ಕುರಿ ಮೇಕೆ ಸಾಕಾಣಿಕೆ ಯೋಜನೆಯಡಿ ೧೦ ಕುರಿ ೧ ಟಗರು ಖರೀದಿಸಲು ಒಂದು ಲಕ್ಷ ಸಹಾಯಧನ ಪಡೆಯುವ ಅವಕಾಶವಿದ್ದು, ಸಮುದಾಯದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೈನುಗಾರಿಕೆ ಮಾಡುವವರಿಗೆ ೨ ಹಸು ನೀಡಲಾಗುವುದು. ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಯಂ ಸ್ವಾವಲಂಬಿ ಎಂಬ ಸಾರಥಿ ಹಳದಿ ಬೋರ್ಡಿನ ಯೋಜನೆಯಡಿ ರೂ.೪ ಲಕ್ಷ ವಾಹನ ಖರೀದಿಗೆ ಧನಸಹಾಯ ನೀಡಲಾಗುತ್ತದೆ ಎಂದ ಅವರು ಗಂಗಾ ಕಲ್ಯಾಣ ಯೋಜನೆಯಡಿ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್‌ಸೆಟ್ ಆಳವಡಿಸಿ ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಕಲ್ಪಿಸಲು ರೂ.೩.೭೫ ಲಕ್ಷ ಧನಸಹಾಯ ನೀಡಲಾಗುವುದು ಎಂದು ತಿಳಿಸಿದರು.
ಮೈಕ್ರೋಕ್ರೆಡಿಟ್ ಯೋಜನೆಯಡಿ ೧೦ ಜನ ಮಹಿಳಾ ಸದಸ್ಯರು ಸಂಘವನ್ನು ನೋಂದಾಯಿಸಿಕೊಂಡಿದ್ದರೆ, ಅಂತಹ ಮಹಿಳಾ ಸಂಘದ ಮಹಿಳಾ ಸದಸ್ಯರಿಗೆ ೫ ಲಕ್ಷ ರೂ ಸಹಾಯಧನದೊಂದಿಗೆ ಸಾಲ ಸೌಲಭ್ಯ ನೀಡಲಾಗುವುದು. ಈ ಆರ್ಥಿಕ ನೆರವನ್ನು ಆವರು ಬಳಸಿಕೊಂಡು ತಮ್ಮದೇ ಆದ ಸ್ವಂತ ಉದ್ಯೋಗದ ಮೂಲಕ ಅವರನ್ನು ಸಬಲರನ್ನಾಗಿ ಮಾಡುವ ಉದ್ದೇಶ ನಮ್ಮ ನಿಗಮದ್ದಾಗಿದೆ. ಪ್ರತಿ ಜಿಲ್ಲೆಗೆ ಭೇಟಿ ನೀಡಿ ಫಲಾನುಭವಿಗಳಿಗೆ ಸಿಗಬೇಕಾದ ಸೌಲಭ್ಯವನ್ನು ಮಾರ್ಚ್ ೩೧ರೊಳಗೆ ನೇರವಾಗಿ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಬಿ.ಮಾಲತಿ, ಕ್ಯಾಪ್ಟನ್ ರಾಜೇಶ್ ಜಯಸಿಂಹ, ನಿಗಮದ ಅಧಿಕಾರಿ ಮನೀಶ್ ನಾಯಕ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Assistance for land purchase for landless Bhovi women agricultural workers
Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...