Home ಬಿಹಾರದಲ್ಲಿ ಎನ್‌ಡಿಎಗೆ ಅಭೂತಪೂರ್ವ ಗೆಲುವು ಬಿಜೆಪಿ ಸಂಭ್ರಮಾಚರಣೆ
Home

ಬಿಹಾರದಲ್ಲಿ ಎನ್‌ಡಿಎಗೆ ಅಭೂತಪೂರ್ವ ಗೆಲುವು ಬಿಜೆಪಿ ಸಂಭ್ರಮಾಚರಣೆ

Share
Share

ಚಿಕ್ಕಮಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಅತಿಹೆಚ್ಚು ಸ್ಥಾನ ಪಡೆದುಕೊಂಡು ಅಪೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆ ಶುಕ್ರವಾರ ಜಿಲ್ಲಾ ಬಿಜೆ ಪಿ ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ಪರಸ್ಪರ ಸಿಹಿಹಂಚಿ ಸಂಭ್ರಮಾ ಚರಣೆ ನಡೆಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ವಿರುದ್ಧ ವಿ.ಪಕ್ಷದ ಮುಖಂಡರುಗಳು ಮತಗಳ್ಳತನ ಹಾಗೂ ಹಣದ ಆಮಿಷವನ್ನೇ ಹರಿಸಿದರೂ, ಕೊನೆಗೂ ಮತದಾರರು ಆಮಿಷಕ್ಕೆ ಒಳಗಾಗದೇ ಎನ್‌ಡಿಎಗೆ ಸಂಪೂರ್ಣವಾಗಿ ಬೆಂಬಲಿಸಿ ಗೆಲುವನ್ನು ತಂ ದುಕೊಟ್ಟಿದ್ದಾರೆ ಎಂದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ನಂತರ ದೇಶದ ವಿವಿಧ ರಾಜ್ಯಗಳಲ್ಲಿ ಚು ನಾವಣೆಗಳಲ್ಲಿ ಭಾಗಿಯಾಗಿ ನೂರರ ಗೆಲುವು ಸಾಧಿಸಿದೆ. ಆದರೆ ರಾಹುಲ್‌ಗಾಂಧಿ ನೇತೃತ್ವದ ನಡೆದ ಚುನಾ ವಣೆಗಳಲ್ಲಿ ಸಂಪೂರ್ಣವಾಗಿ ಠೇವಣಿ ಕಳೆದುಕೊಂಡು ಸತತ ನೂರನೇ ಸೋಲಿಗೆ ಕಾರಣವಾಗಿದೆ ಎಂದು ಟೀಕಿಸಿದರು.

ಇವಿಎಂ ಹ್ಯಾಕ್, ಮತಗಳ್ಳತನ ಎಂಬ ಸುಳ್ಳು ಸುದ್ದಿ ಹರಡುವ ಮೂಲಕವೇ ಜನರನ್ನು ದಿಕ್ಕುತಪ್ಪಿಸಲು ಯತ್ನಿಸಿದ ವಿ.ಪಕ್ಷದ ನಾಯಕರಿಗೆ ಬಿಹಾರ ರಾಜ್ಯದ ಮತದಾರರು ಎನ್‌ಡಿಗೆ ಬೆಂಬಲಿಸಿ ತಕ್ಕಉತ್ತರ ನೀಡಿ ದೆ. ಈ ತೀರ್ಪನ್ನು ಕಾಂಗ್ರೆಸ್ ಎಚ್ಚೆತ್ತುಕೊಂಡು ಜನಸಾಮಾನ್ಯರ ನಡುವೆ ಅನುಕೂಲವಾಗುವ ಕೆಲಸಗಳನ್ನು ಮಾಡಬೇಕು ಎಂದು ತಿಳಿಸಿದರು.

ಬಿಹಾರ ಚುನಾವಣೆಯಲ್ಲಿ ಪ್ರಮುಖವಾಗಿ ಕಾರ್ಯನಿರ್ವಹಿಸಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡ, ಗೃಹ ಸಚಿವ ಅಮತ್‌ಶಾ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್ ಅವರಿ ಗೆ ಜಿಲ್ಲಾ ಬಿಜೆಪಿ ಕಾರ್ಯಕರ್ತರು ತುಂಬು ಹೃದಯ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಹೇಳಿದರು.

ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್ ಮಾತನಾಡಿ ಕೇಂದ್ರದ ಮೋದಿ ಸರ್ಕಾರ ಹಾಗೂ ಬಿಹಾರ ಮುಖ್ಯ ಮಂತ್ರಿ ನಿತೀಶ್‌ಕುಮಾರ್ ಸಾಧನೆಗಳೇ, ಈ ಬಾರಿಯ ವಿಧಾನಸಭಾ ಚುನಾವಣೆಗಳಲ್ಲಿ ಅತ್ಯಧಿಕ ಸ್ಥಾನ ಗಳಿ ಸಲು ಸಾಧ್ಯವಾಗಿದ್ದು, ಮುಂದೆ ಕರ್ನಾಟಕದಲ್ಲೂ ಜನತೆ ದೊಡ್ಡ ಬದಲಾವಣೆ ತಂದು ಬಿಜೆಪಿ ಗೆಲುವಿಗ ದೊಡ್ಡ ಕ್ರಾಂತಿಯನ್ನು ಮಾಡಲಿದ್ದಾರೆ ಎಂದರು.

ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್ ಮಾತನಾಡಿ ಎನ್‌ಡಿಎ ನೇತೃತ್ವದ ಪಕ್ಷ ದೇಶದ ಎಲ್ಲಾ ರಾಜ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ತಿರಸ್ಕಾರಗೊಳಿ ಸುತ್ತಿದೆ. ಇದಕ್ಕೆ ಅಂದಿನ ಸರ್ಕಾರದಲ್ಲಿ ನಡೆದ ದುರಾಡಳಿತವೇ ನೇರ ಕಾರಣವಾಗಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಖಜಾಂಚಿ ನಾರಾಯಣಗೌಡ, ವಕ್ತಾರ ಪುಟ್ಟಸ್ವಾಮಿ, ಕಾರ್ಯದರ್ಶಿ ಅರುಣ್, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಚಿನ್‌ಗೌಡ, ಓಬಿಸಿ ರಾಜ್ಯ ಕಾರ್ಯದರ್ಶಿ ಬಿ.ರಾಜಪ್ಪ, ನಗರಾಧ್ಯಕ್ಷ ಜೀವನ್, ಮಾದ್ಯಮ ಪ್ರಮುಖ್ ದಿನೇಶ್, ಮುಖಂಡರುಗಳಾದ ಹಂಪಯ್ಯ, ಕೌಶಿಕ್, ಹೆಚ್.ಕೆ.ಕೇಶವಮೂರ್ತಿ, ರೇವನಾಥ್, ಸೋಮಶೇಖರ್, ಸೀತರಾಮಭರಣ್ಯ ಇದ್ದರು.

BJP celebrates unprecedented victory for NDA in Bihar

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...