ಚಿಕ್ಕಮಗಳೂರು: ತಾಲ್ಲೂಕಿನ ಆಲ್ದೂರಿನಲ್ಲಿ ಕಳೆದ 12 ವರ್ಷದ ಹಿಂದೆ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸ್ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲು ನ್ಯಾಯಾಲಯ ಆದೇಶಿಸಿದೆ ಎಂದು ಹಿಂದೂ ಸಂಘಟನೆಯ ಮುಖಂಡ ತುಡುಕೂರು ಮಂಜುನಾಥ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೨೦೧೩ ರಲ್ಲಿ ಆಲ್ದೂರಿನಲ್ಲಿ ಗಣಪತಿ ವಿಸರ್ಜನೆ ಮಾಡುವ ಸಂದರ್ಭ ಪಟ್ಟಣದ ರಸ್ತೆಯಲ್ಲಿ ಕರ್ಪೂರ ಹಚ್ಚಿದರು, ಮಸೀದಿ ಮುಂದೆ ಪಟಾಕಿ ಸಿಡಿಸಿದರು ಎಂಬ ಕಾರಣಕ್ಕೆ ತುಡುಕೂರು ಮಂಜು, ರಾಕೇಶ್, ಮಂಜುನಾಥ, ಶ್ರೀಕಾಂತ್, ಲೋಕೇಶ್, ಮಧು, ಕೃಷ್ಣಪ್ಪ ಇವರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪೊಲೀಸರು ಮನಸೋ ಇಚ್ಚೆ ಥಳಿಸಿದ್ದರು.
ನಮ್ಮ ಮೇಲೆ ಕೊಲೆ ಯತ್ನ ಮಾಡಿದ್ದನ್ನು ನಾವು ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದೆವು. ಸತತ ೧೨ ವರ್ಷದ ಕಾನೂನು ಹೋರಾಟದ ಬಳಿಕ ಅಂದಿನ ಆಲ್ದೂರು ಎಸ್ಐ ಆಗಿದ್ದ ಕಬ್ಬಾಳ್ರಾಜ್, ಸಿಪಿಐ ಕೃಷ್ಣರಾಜು, ಪೊಲೀಸ್ ಸಿಬ್ಬಂದಿಯಾದ ಮಂಜಪ್ಪ, ಪ್ರವೀಣ್, ನಿಂಗೇಗೌಡ, ಮಹೇಶ್, ಇಲಿಯಾಜ್, ಜಗದೀಶ್ನಾಯ್ಕ, ಚಂದ್ರೇಗೌಡ ಇವರ ಮೇಲೆ ಭಾರತೀಯ ದಂಡ ಸಂಹಿತೆ ವಿವಿಧ ಕಲಂಗಳಡಿಯಲ್ಲಿ ಎಲ್ಲರ ಮೇಲೂ ಪ್ರತ್ಯೇಕವಾಗಿ ಮೊಕದ್ದಮೆ ದಾಖಲಿಸಲು ನ್ಯಾಯಾಧೀಶರು ಆದೇಶಿಸಿದ್ದಾರೆ.
ನಮ್ಮ ಪರವಾಗಿ ಎಚ್.ಎಂ.ಸುಧಾಕರ ಅವರು ವಾದ ಮಂಡಿಸಿದ್ದರು. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂಬುದು ಈ ಪ್ರಕರಣದಲ್ಲಿ ಸಾಬೀತಾಗಿದೆ. ಆರೋಪಿಗಳ ಮೇಲೆ ಕಠಿಣ ಕಾನೂನು ಶಿಕ್ಷೆಯಾಗಬೇಕು ಎಂದು ಆಗ್ರಹಿಸುತ್ತೇನೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಕೇಶ್, ಮಂಜುನಾಥ್, ಕೃಷ್ಣಪ್ಪ ಇದ್ದರು.
Attack on Hindu activists – Criminal case against police
Leave a comment