Home Latest News ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ – ಪೊಲೀಸ್ ರ ವಿರುದ್ಧ ಕ್ರಿಮಿನಲ್ ಕೇಸ್
Latest NewschikamagalurHomenamma chikmagalur

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ – ಪೊಲೀಸ್ ರ ವಿರುದ್ಧ ಕ್ರಿಮಿನಲ್ ಕೇಸ್

Share
Share

ಚಿಕ್ಕಮಗಳೂರು: ತಾಲ್ಲೂಕಿನ ಆಲ್ದೂರಿನಲ್ಲಿ ಕಳೆದ 12 ವರ್ಷದ ಹಿಂದೆ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸ್ ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲು ನ್ಯಾಯಾಲಯ ಆದೇಶಿಸಿದೆ ಎಂದು ಹಿಂದೂ ಸಂಘಟನೆಯ ಮುಖಂಡ ತುಡುಕೂರು ಮಂಜುನಾಥ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೨೦೧೩ ರಲ್ಲಿ ಆಲ್ದೂರಿನಲ್ಲಿ ಗಣಪತಿ ವಿಸರ್ಜನೆ ಮಾಡುವ ಸಂದರ್ಭ ಪಟ್ಟಣದ ರಸ್ತೆಯಲ್ಲಿ ಕರ್ಪೂರ ಹಚ್ಚಿದರು, ಮಸೀದಿ ಮುಂದೆ ಪಟಾಕಿ ಸಿಡಿಸಿದರು ಎಂಬ ಕಾರಣಕ್ಕೆ ತುಡುಕೂರು ಮಂಜು, ರಾಕೇಶ್, ಮಂಜುನಾಥ, ಶ್ರೀಕಾಂತ್, ಲೋಕೇಶ್, ಮಧು, ಕೃಷ್ಣಪ್ಪ ಇವರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪೊಲೀಸರು ಮನಸೋ ಇಚ್ಚೆ ಥಳಿಸಿದ್ದರು.

ನಮ್ಮ ಮೇಲೆ ಕೊಲೆ ಯತ್ನ ಮಾಡಿದ್ದನ್ನು ನಾವು ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದೆವು. ಸತತ ೧೨ ವರ್ಷದ ಕಾನೂನು ಹೋರಾಟದ ಬಳಿಕ ಅಂದಿನ ಆಲ್ದೂರು ಎಸ್‌ಐ ಆಗಿದ್ದ ಕಬ್ಬಾಳ್‌ರಾಜ್, ಸಿಪಿಐ ಕೃಷ್ಣರಾಜು, ಪೊಲೀಸ್ ಸಿಬ್ಬಂದಿಯಾದ ಮಂಜಪ್ಪ, ಪ್ರವೀಣ್, ನಿಂಗೇಗೌಡ, ಮಹೇಶ್, ಇಲಿಯಾಜ್, ಜಗದೀಶ್‌ನಾಯ್ಕ, ಚಂದ್ರೇಗೌಡ ಇವರ ಮೇಲೆ ಭಾರತೀಯ ದಂಡ ಸಂಹಿತೆ ವಿವಿಧ ಕಲಂಗಳಡಿಯಲ್ಲಿ ಎಲ್ಲರ ಮೇಲೂ ಪ್ರತ್ಯೇಕವಾಗಿ ಮೊಕದ್ದಮೆ ದಾಖಲಿಸಲು ನ್ಯಾಯಾಧೀಶರು ಆದೇಶಿಸಿದ್ದಾರೆ.

ನಮ್ಮ ಪರವಾಗಿ ಎಚ್.ಎಂ.ಸುಧಾಕರ ಅವರು ವಾದ ಮಂಡಿಸಿದ್ದರು. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂಬುದು ಈ ಪ್ರಕರಣದಲ್ಲಿ ಸಾಬೀತಾಗಿದೆ. ಆರೋಪಿಗಳ ಮೇಲೆ ಕಠಿಣ ಕಾನೂನು ಶಿಕ್ಷೆಯಾಗಬೇಕು ಎಂದು ಆಗ್ರಹಿಸುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಕೇಶ್, ಮಂಜುನಾಥ್, ಕೃಷ್ಣಪ್ಪ ಇದ್ದರು.

Attack on Hindu activists – Criminal case against police

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...