Home namma chikmagalur ಲೈಫ್‌ ಲೈನ್ ಫೀಡ್ಸ್ ಸಂಸ್ಥೆಯ ಕಿಶೋರ್ ಕುಮಾರ್ ಹೆಗ್ಡೆ ನಿವಾಸ ಮತ್ತು ಕಛೇರಿ ಮೇಲೆ ಐ.ಟಿ ರೈಡ್ ?
namma chikmagalurchikamagalurHomeLatest News

ಲೈಫ್‌ ಲೈನ್ ಫೀಡ್ಸ್ ಸಂಸ್ಥೆಯ ಕಿಶೋರ್ ಕುಮಾರ್ ಹೆಗ್ಡೆ ನಿವಾಸ ಮತ್ತು ಕಛೇರಿ ಮೇಲೆ ಐ.ಟಿ ರೈಡ್ ?

Share
Share

ಚಿಕ್ಕಮಗಳೂರು: ಲೈಫ್‌ ಲೈನ್ ಫೀಡ್ಸ್ ಸಂಸ್ಥೆಯ ಕಿಶೋರ್ ಕುಮಾರ್ ಹೆಗ್ಡೆ ನಿವಾಸ ಮತ್ತು ಕಛೇರಿ ಹಾಗು ಫಾರಂಹೌಸ್ ಮೇಲೆ ಏಕಕಾಲದಲ್ಲಿ ಅದಾಯ ತೆರಿಗೆ ಇಲಾಖೆಯವರು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.

ಕಳೆದ ಮೂರು ದಿನಗಳಿಂದ ತೀವ್ರ ತನಿಖೆ ನಡೆಯುತ್ತಿದ್ದು ಕಿಶೋರ್ ಕುಮಾರ್ ಹೆಗ್ಡೆ ಸಮ್ಮುಖದಲ್ಲಿ ಪ್ರತಿ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಹತ್ತಕ್ಕೂ ಹೆಚ್ಚು ಇನಾವೋ ಕಾರಿನಲ್ಲಿ 40 ಕ್ಕೂ ಹೆಚ್ಚು ತೆರಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇಂಚು, ಇಂಚು ಮಾಹಿತಿ ತೆಗೆಯುತ್ತಿದ್ದು ತೆರೆಗೆ ವಂಚನೆ ಬಗ್ಗೆ ಜಾಲಡುತ್ತಿದ್ದಾರೆ ಜೊತೆಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ.

ಕಿಶೋರ್ ಕುಮಾರ್ ಹೆಗ್ಡೆ ಬೇರೆ, ಬೇರೆ ರಾಜ್ಯಗಳಿಗೆ ಮತ್ತು ವಿದೇಶಕ್ಕೆ ಕೋಳಿ ರಫ್ತು ಮಾಡುತ್ತಿದ್ದು ಇದರಲ್ಲಿ ಸರ್ಕಾರಕ್ಕೆ ತೆರೆಗೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಇದೆ ಎನ್ನಲಾಗಿದೆ.

ಹಲವು ರಾಜಕೀಯ ಪಕ್ಷಗಳು ಮತ್ತು ವ್ಯಕ್ತಿಗಳಿಗೆ ಹಣ ನೀಡಿದ್ದಾರೆ ಹಲವರು ಸಂಸ್ಥೆ ಮತ್ತು ವ್ಯಕ್ತಿಗಳಿಗೆ ದಾನದ ರೂಪದಲ್ಲಿ ನೀಡಿರುವ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿರವುದಾಗಿ ತಿಳಿದು ಬಂದಿದೆ.

ಕೆಲವು ವರ್ಷಗಳ ಹಿಂದೆ ಸಣ್ಣದಾಗಿ ಕೋಳಿ ಸಾಗಣೆ ಮತ್ತು ಮಾರಾಟ ಮಾಡಿ ಇಷ್ಟೊಂದು ಆಸ್ತಿ ಮತ್ತು ಹಣ ಗಳಿಸಿರುವ ಮೂಲದ ಬಗ್ಗೆ ತೀವ್ರ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

IT raid on Kishore Kumar Hegde’s residence and office of Lifeline Feeds?

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...