Home Latest News ಕಾಯಕ ಗ್ರಾಮ ಯೋಜನೆಯಡಿ 6 ಗ್ರಾ.ಪಂ ಗಳ ಆಯ್ಕೆ
Latest NewschikamagalurHomenamma chikmagalur

ಕಾಯಕ ಗ್ರಾಮ ಯೋಜನೆಯಡಿ 6 ಗ್ರಾ.ಪಂ ಗಳ ಆಯ್ಕೆ

Share
Share

ಚಿಕ್ಕಮಗಳೂರು: ಮಾದರಿ ಗ್ರಾಮ ಪಂಚಾಯಿತಿ ಮಾಡುವ ಉದ್ದೇಶದಿಂದ ರಾಜ್ಯಸರ್ಕಾರ ಜಾರಿಗೆ ತಂದಿರುವ ಕಾಯಕ ಗ್ರಾಮ ಯೋಜನೆಯಡಿ ತಾಲ್ಲೂಕಿನ ೬ ಗ್ರಾಮ ಪಂಚಾಯಿತಿಗಳನ್ನು ಗುರ್ತಿಸಿ ಆಯ್ಕೆಮಾಡಿಕೊಳ್ಳಲಾಗಿದೆ ಎಂದು ಜಿ.ಪಂ ಉಪಕಾರ್ಯದರ್ಶಿ(ಆಡಳಿತ) ಶಂಕರ್ ಕೊರವರ್ ತಿಳಿಸಿದರು.

ಅವರು ಇಂದು ಇಲ್ಲಿನ ತಾಲ್ಲೂಕು ಪಂಚಾಯಿತಿಯಲ್ಲಿ ಏರ್ಪಡಿಸಲಾಗಿದ್ದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲ್ಲೂಕಿನ ವಾರ್ಷಿಕ ಕರಡು ಯೋಜನೆಯನ್ನು ಶಾಸಕ ಹೆಚ್.ಡಿ. ತಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲು ನಿರ್ಧರಿಸಲಾಗಿದೆ. ಆಲ್ದೂರು, ಮೇಲಿನಹುಲುವತ್ತಿ, ಆಣೂರು, ಕಡವಂತಿ ಸೇರಿದಂತೆ ೬ ಗ್ರಾಮ ಪಂಚಾಯಿತಿಗಳನ್ನು ಗುರ್ತಿಸಲಾಗಿದೆ ಎಂದರು.

ಈ ಪಂಚಾಯಿತಿ ವ್ಯಾಪ್ತಿಯಲ್ಲಿ ಏನೇನು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕೆಂಬ ಬಗ್ಗೆ ಹಾಗೂ ಪಂಚಾಯಿತಿಯ ಬೇಡಿಕೆ ಕೊರತೆಗಳನ್ನು ಗುರುತಿಸಿ ಪಟ್ಟಿ ತಯಾರಿಸಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ತೆರಿಗೆ ವಸೂಲಿ, ಆರೋಗ್ಯ, ಶೈಕ್ಷಣಿಕ, ಸಾಮಾಜಿಕ ಅವಶ್ಯಕತೆಗಳಿಗೆ ಉದ್ಯೋಗಾಧಾರಿತ ಕಾರ್ಯಕ್ರಮಗಳ ಆಯೋಜನೆಗೆ ಅವಕಾಶವಿದ್ದು, ಪಟ್ಟಿಮಾಡಿ ಕ್ರಿಯಾಯೋಜನೆ ತಯಾರಿಸಲು ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಎಲ್ಲಾ ಇಲಾಖಾಧಿಕಾರಿಗಳು ಗ್ರಾಮ ಪಂಚಾಯಿತಿಯಲ್ಲಿ ನಡೆಯುವ ಗ್ರಾಮ ಸಭೆಗಳಿಗೆ ತಪ್ಪದೆ ಕಡ್ಡಾಯವಾಗಿ ಹಾಜರಾಗಬೇಕೆಂದು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಕುಡಿಯುವ ನೀರಿನ ಯೋಜನೆಗಳಿಗೆ ಸಮರ್ಪಕ ವಿದ್ಯುತ್ ಸಂಪರ್ಕ ನೀಡಿ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಕುಡಿಯುವ ನೀರಿನ ಯೋಜನೆ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಫಲಾನುಭವಿ ಆಧಾರಿತ ಕಾರ್ಯಕ್ರಮಗಳ ಮೂಲಕ ಸೌಲಭ್ಯಗಳನ್ನು ನೀಡುವ ಬಗ್ಗೆ ಫಲಾನುಭವಿಗಳನ್ನು ಆಯ್ಕೆಮಾಡಿ ಪ್ರಾಧಿಕಾರ ಗುರ್ತಿಸಿ ಆಯಾ ಯೋಜನೆವಾರು ಆರ್ಥಿಕ, ಭೌತಿಕ ಸೌಲಭ್ಯ ನೀಡಲು ಮುಂದಾಗಬೇಕೆಂದು ತಿಳಿಸಿದರು.

ದುರಸ್ಥಿಯಲ್ಲಿರುವ ಶಾಲಾ ಕಟ್ಟಡಗಳು ಮತ್ತು ಸುಸ್ಥಿತಿಯಲ್ಲಿರುವ ಶಾಲಾ ಕಟ್ಟಡಗಳ ಮಾಹಿತಿಯನ್ನು ಕೂಡಲೇ ಸಲ್ಲಿಸುವಂತೆ ಪಿಆರ್‌ಡಿ ಇಂಜಿನಿಯರ್‌ಗಳಿಗೆ ಆದೇಶಿಸಿದ್ದು, ಶಿಕ್ಷಣ ಇಲಾಖೆ ಮತ್ತು ಇಂಜಿನಿಯರಿಂಗ್ ಇಲಾಖೆ ಇಬ್ಬರ ಸಹಕಾರದೊಂದಿಗೆ ಕೂಡಲೇ ಪಟ್ಟಿ ತಯಾರಿಸಿ ನೀಡುವಂತೆ ನಿರ್ದೇಶನ ನೀಡಿರುವುದಾಗಿ ಹೇಳಿದರು.

ತಾಲ್ಲೂಕಿನ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಅವಶ್ಯಕತೆಗನುಗುಣವಾಗಿ ಮಾಸಿಕ ಕರಡು ಯೋಜನೆಯನ್ನು ತಯಾರು ಮಾಡಲು ಇಂದಿನ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಜಯ್‌ಕುಮಾರ್ ಮಾತನಾಡಿ, ಸರ್ಕಾರ ಜಾರಿಗೆ ತಂದಿರುವ ಕಾಯಕ ಗ್ರಾಮ ಯೋಜನೆಯಡಿ ಹಿಂದುಳಿದ ಗ್ರಾಮ ಪಂಚಾಯಿತಿಗಳನ್ನು ಗುರ್ತಿಸಿ ಮಾದರಿ ಗ್ರಾಮ ಪಂಚಾಯಿತಿಗಳಾಗಿ ಅಭಿವೃದ್ಧಿಪಡಿಸಲು ಸಂಬಂಧಿಸಿದ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದರು.

ಪಶುಗಳಿಗೆ ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ರೋಗಗಳ ಬಗ್ಗೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದು ಚರ್ಚಿಸಲಾಗಿದ್ದು, ಎಲ್ಲಾ ರೀತಿಯ ರಾಸುಗಳಿಗೆ ಸಮರ್ಪಕ ವ್ಯಾಕ್ಸಿನೇಷನ್ ನೀಡಲು ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದು ಮಾಹಿತಿ ನೀಡಿದರು.

Selection of 6 Gram Panchayats under Kayaka Gram Yojana

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...