Home namma chikmagalur ನಗರ ವ್ಯಾಪ್ತಿಯಲ್ಲಿ ಯುಜಿಡಿ-ಅಮೃತ್ ಕಾಮಗಾರಿ ಶೀಘ್ರ ಪೂರ್ಣ
namma chikmagalurchikamagalurHomeLatest News

ನಗರ ವ್ಯಾಪ್ತಿಯಲ್ಲಿ ಯುಜಿಡಿ-ಅಮೃತ್ ಕಾಮಗಾರಿ ಶೀಘ್ರ ಪೂರ್ಣ

Share
Share

ಚಿಕ್ಕಮಗಳೂರು: ನಗರ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿ ೨೦೧೨ರಲ್ಲಿ ಆರಂಭಗೊಂಡಿದ್ದು ೧೩ ವ?ವಾದರೂ ಪೂರ್ಣಗೊಂಡಿಲ್ಲ. ಹಾಗೆಯೇ ಅಮೃತ್ ಯೋಜನೆಯ ಕಾಮಗಾರಿಗಳು ೨೦೧೫ರಲ್ಲಿ ಆರಂಭಗೊಂಡಿದ್ದು ೧೦ ವ?ವಾದರೂ ಮುಕ್ತಾಯಗೊಂಡಿಲ್ಲ. ಶೀಘ್ರವೇ ಈ ಎರಡು ಕಾಮಗಾರಿಗಳನ್ನು ಪೂರ್ಣಗೊಳಿಸುವುದಾಗಿ ಶಾಸಕ ಎಚ್. ಡಿ.ತಮ್ಮಯ್ಯ ಭರವಸೆ ನೀಡಿದರು.

ನಗರದ ಗಾಂಧಿನಗರ ಆಟೋ ನಿಲ್ದಾಣದ ಬಳಿ ನಗರದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ನೆರವೇರಿಸಿ ಮಾತನಾಡಿದ ಅವರು, ಈ ಎರಡು ಕಾಮಗಾರಿಗಳನ್ನು ಆರಂಭಿಸಿದವರು ಯಾರು? ಯಾವ ಕಾರಣಕ್ಕೆ ಇದುವರೆಗೂ ಕಾಮಗಾರಿಗಳು ಮುಗಿದಿಲ್ಲ ಎಂಬ ಬಗ್ಗೆ ನಾನು ಮಾತನಾಡುವುದಿಲ್ಲ. ಬೇರೆಯವರನ್ನು ದೂರುವ ಬದಲು ಕಾಮಗಾರಿ ಮುಗಿಸಲು ಕ್ರಮ ಕೈಗೊಳ್ಳುತ್ತೇನೆ ಎಂದರು.

ಯುಜಿಡಿ ಕಾಮಗಾರಿ ಹಾಗೂ ಅಮೃತ್ ಯೋಜನೆಯ ಕಾಮಗಾರಿಗಳು ನಡೆಯುತ್ತಿರುವ ಕಾರಣದಿಂದಾಗಿ ನಗರ ವ್ಯಾಪ್ತಿಯ ರಸ್ತೆಗಳು ಹಾಳಾಗಿದ್ದವು. ವಿವಿಧ ಈ ಎರಡು ಯೋಜನೆಗಳ ಕಾಮಗಾರಿಗಳು ಮುಕ್ತಾಯಗೊಳ್ಳುವ ಹಂತಕ್ಕೆ ಬಂದಿವೆ. ಹೀಗಾಗಿ ಶೀಘ್ರವೇ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ನಗರದ ಪ್ರತಿಯೊಂದು ರಸ್ತೆಯನ್ನು ಅಭಿವೃದ್ಧಿಗೊಳಿಸುವ ಸಂಬಂಧ ಕ್ರಮ ಕೈಗೊಳ್ಳಲಾಗಿದೆ. ನಗರದ ರಸ್ತೆಗಳ ಅಭಿವೃದ್ಧಿಗಾಗಿ ಸಿಎಂ ೧೦ ಕೋಟಿ ರೂ. ವಿಶೇಷ ಅನುದಾನ ನೀಡಿದ್ದಾರೆ. ಇದಲ್ಲದೆ ವಿಧಾನಸಭಾ ಕ್ಷೇತ್ರಕ್ಕೆ ನೀಡ ಸರ್ಕಾರದ ವಿಶೇ? ಅನುದಾನದಡಿಯಲ್ಲಿ ನೀಡಲಾಗಿದ್ದ ೫೦ ಕೋಟಿ ರೂ. ಅನುದಾನದಲ್ಲಿ ೧೦ ಕೋಟಿ ರೂ. ನಗರದ ರಸ್ತೆಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುತ್ತದೆ. ಜೊತೆಗೆ ಲೋಕೋಪಯೋಗಿ ಇಲಾಖೆಯಿಂದ ೨.೫೦ ಕೋಟಿ ರೂ. ಬಿಡುಗಡೆಯಾಗಿದ್ದು, ಈ ಅನುದಾನಗಳಲ್ಲಿ ರಸ್ತೆಗಳ ಅಭಿವೃದ್ಧಿ ಕಾರ್ಯ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ನವೆಂಬರ್ ತಿಂಗಳ ಅಂತ್ಯದೊಳಗಾಗಿ ನಗರದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುತ್ತೇವೆ. ಡಿ. ೧ರಿಂದಲೇ ಕಾಮಗಾರಿ ಆರಂಭಿಸುತ್ತೇವೆ. ಮುಂದಿನ ಮಾರ್ಚ್ ತಿಂಗಳು ಮುಗಿಯುವುದರ ಒಳಗಾಗಿ ಎಲ್ಲಾ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ ಪ್ರತಿಯೊಂದು ರಸ್ತೆ ಉದ್ಘಾಟನೆ ಕಾರ್ಯ ನೆರವೇರಿಸುತ್ತೇವೆ ಎಂದರು.

ನಗರ ಸಭೆ ವ್ಯಾಪ್ತಿಯ ಟಿಪ್ಪು ನಗರ ಬಡಾವಣೆ ವ್ಯಾಪ್ತಿಯಲ್ಲಿ ಸುಮಾರು ೭೦ ಲಕ್ಷ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಇದಲ್ಲದೆ ನಗರದ ಪ್ರತಿಯೊಂದು ಬಡಾವಣೆಯಲ್ಲಿಯೂ ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತೇವೆ ಎಂದರು.

ಹಿಂದೆ ಕ್ಷೇತ್ರದ ಶಾಸಕರಾದವರು ಸ್ಲಂ ಬೋರ್ಡ್ ನಿಂದ ೮೦೦ ಮನೆಗಳ ನಿರ್ಮಾಣ ಕಾಮಗಾರಿಗೆ ಮಂಜೂರಾತಿ ಕೊಡಿಸಿದ್ದರು. ಆದರೆ ಸೂಕ್ತ ಅನುದಾನ ಬಿಡುಗಡೆಯಾಗಿರಲಿಲ್ಲ. ಹೀಗಾಗಿ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಇದರಿಂದ ಅನಿವಾರ್ಯವಾಗಿ ಸ್ಲಂ ನಿವಾಸಿಗಳು ಬಾಡಿಗೆ ಮನೆಯಲ್ಲಿ ವಾಸಿಸುವಂತಾಗಿತ್ತು. ಈ ಬಗ್ಗೆ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ನಿವಾಸಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದೇನೆ. ಶೀಘ್ರವೇ ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಸತಿ ಇಲಾಖೆ ಹಿರಿಯ ಅಧಿಕಾರಿಗಳ ಸಭೆಯನ್ನು ಚಿಕ್ಕಮಗಳೂರಿನಲ್ಲಿಯೇ ನಡೆಸಿ ಶೀಘ್ರವೇ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ರಸ್ತೆ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪಡೆದಿರುವ ಗುತ್ತಿಗೆದಾರರು ನಿಗದಿತ ಅವಧಿಯ ಒಳಗಾಗಿ ಗುಣಮಟ್ಟದ ರಸ್ತೆ ಕಾಮಗಾರಿ ನಡೆಸಿ ಜನರಿಗೆ ಅನುಕೂಲ ಒದಗಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಲಲಿತಾ ರವಿ ನಾಯಕ್, ಸದಸ್ಯರಾದ ರೂಪ ಕುಮಾರ್, ಎ.ಸಿ.ಕುಮಾರ್, ಗೋಪಿ, ಪರಮೇಶ್ ರಾಜ್ ಅರಸ್, ಲಕ್ಷ್ಮಣ್, ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಸಿಡಿಎ ಅಧ್ಯಕ್ಷ ನಯಾಜ್ ಅಹಮದ್, ತಾಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಮಲ್ಲೇಶ್ ಸ್ವಾಮಿ, ಕಾಂಗ್ರೆಸ್ ಮುಖಂಡರಾದ ಲಾಕೇಶ್, ಬೆಟ್ಟಗೆರೆ ಪ್ರವೀಣ್, ಶ್ರೀಕಾಂತ್

UGD-Amrit work to be completed soon in city area

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...