Home namma chikmagalur ಶ್ರೀ ಅಯ್ಯಪ್ಪನ ಆರಾದನೆಗೆ ಜಾತಿ-ಧರ್ಮವಿಲ್ಲ
namma chikmagalurchikamagalurHomeLatest News

ಶ್ರೀ ಅಯ್ಯಪ್ಪನ ಆರಾದನೆಗೆ ಜಾತಿ-ಧರ್ಮವಿಲ್ಲ

Share
Share

ಚಿಕ್ಕಮಗಳೂರು: ಶ್ರೀ ಅಯ್ಯಪ್ಪಸ್ವಾಮಿ ಸರ್ವಧರ್ಮಿಯರ ಪ್ರತೀಕ. ಸ್ವಾಮಿಯ ಆರಾಧನೆಗೆ ಜಾತಿ, ಧರ್ಮ ಅಡ್ಡಬರುವುದಿಲ್ಲ. ಮಾಲೆ ಹಾಕಿದವರೆಲ್ಲಾ ಅಯ್ಯಪ್ಪನ ಭಕ್ತರೇ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ನಗರದ ಶ್ರೀ ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸುವ ೫೨ ನೇ ವರ್ಷದ ಶ್ರೀ ಅಯ್ಯಪ್ಪಸ್ವಾಮಿ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.

ನಮ್ಮ ದೇಶದಲ್ಲಿ ಶಬರಿಮಲೆಗೆ ಮಾಲೆ ಹಾಕಿಕೊಂಡು ಹೋಗಿ ಸ್ವಾಮಿ ದರ್ಶನ ಪಡೆಯವುದು ವಿಶೇಷ. ೪೮ ದಿನ ಕಠಿಣ ವ್ರತ ಮಾಡುವವರಿಗೆ ಮೊದಲ ಪಾದ ಎಂದೂ, ಹೊಸದಾಗಿ ಮಾಲೆ ಹಾಕಿದವರನ್ನು ಕನ್ನಿ ಸ್ವಾಮಿಗಳು ಎಂದು ಕರೆಯುವ ಪದ್ದತಿ ಇದೆ. ನಾನೂ ಕೂಡ ೧೯೮೨ ನೇ ಸಾಲಿನಿಂದಲೂ ಅಯ್ಯಪ್ಪಸ್ವಾಮಿ ಭಕ್ತನಾಗಿದ್ದೇನೆ.

ಪೂಜಾಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದೇನೆ ಎಂದರು. ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಗಟ್ಟಿಯಾಗಿರುವ ದೇಶ ನಮ್ಮದು. ಧರ್ಮದ ನೆಲೆಗಟ್ಟಿನಲ್ಲೂ ನಿಂತಿದೆ. ದೇವನೊಬ್ಬ ನಾಮ ಹಲವು ಎನ್ನುವಂತೆ ಒಬ್ಬೊಬ್ಬರು ಒಂದೊಂದು ದೇವರನ್ನು ಆರಾಧಿಸುತ್ತಾರೆ. ದೇಶದ ರೈತರಿಗೆ ಉತ್ತಮ ಬೆಳೆ, ಬೆಲೆ ನೀಡಲಿ ಎಂದು ಅಯ್ಯಪ್ಪನಲ್ಲಿ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಪ್ರತಿವರ್ಷ ಶ್ರೀ ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ಶ್ರೀ ಅಯ್ಯಪ್ಪಸ್ವಾಮಿಯನ್ನು ಆರಾಧಿಸಿಕೊಂಡು ಬಂದಿರುವುದನ್ನು ನೋಡಿದ್ದೇವೆ. ಇಂದು ಮಾಲೆ ಹಾಕಿದವರೆಲ್ಲಾ ಜನವರಿ ೧೪ ಕ್ಕೆ ಶಬರಿಮಲೆಯಲ್ಲಿ ಮೂಡಿಬರುವ ಜ್ಯೋತಿ ನೋಡಿ ತಮ್ಮ ವೃತಾ ಕೊನೆಗೊಳಿಸುತ್ತರೆ ಎಂದರು.

ನಗರಸಭೆ ಉಪಾಧ್ಯಕ್ಷೆ ಲಲಿತಾಬಾಯಿ, ಸದಸ್ಯರಾದ ಎ.ಸಿ.ಕುಮಾರಗೌಡ, ರೂಪನಾಯಕ್, ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಅಧ್ಯಕ್ಷ ಅಶೋಕ್ ಸಚ್ಚಿದೇವ್, ಮಾಜಿ ಅಧ್ಯಕ್ಷ ನಾರಾಯಣಗೌಡ, ಸಮಿತಿಯ ಸದಸ್ಯರುಗಳು ಮತ್ತು ಅಯ್ಯಪ್ಪಸ್ವಾಮಿ ಭಕ್ತರು ಮತ್ತಿತರರಿದ್ದರು.

There is no caste or religion in the worship of Sri Ayyappa

 

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು...

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...