Home Latest News ತರಾತುರಿ ಉದ್ಘಾಟನೆ ವಿರುದ್ಧ ಎಚ್.ಡಿ.ತಮ್ಮಯ್ಯ ಅಸಮಾಧಾನ
Latest NewschikamagalurHomenamma chikmagalur

ತರಾತುರಿ ಉದ್ಘಾಟನೆ ವಿರುದ್ಧ ಎಚ್.ಡಿ.ತಮ್ಮಯ್ಯ ಅಸಮಾಧಾನ

Share
????????????????????????????????????
Share

ಚಿಕ್ಕಮಗಳೂರು: ‘ಮೂಲ ಸೌಕರ್ಯಗಳಿಲ್ಲದೆ ವೈದ್ಯ ಕೀಯ ಕಾಲೇಜು ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಶಿಫ್ಟ್ ಮಾಡಿದ್ದೇಕೆ, ತರಾ ತುರಿಯಲ್ಲಿ ಉದ್ಘಾಟನೆ ಮಾಡಿದ್ದೇಕೆ, ಮಕ್ಕಳ ಕಾಳಜಿ ಬಗ್ಗೆ ಗೊತ್ತಿರಲಿಲ್ಲವೇ’ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಅರ್ಜಿಗಳ ಸಮಿತಿ ಭೇಟಿ ವೇಳೆ ಮಾತನಾಡಿದ ಅವರು, ‘40 ಎಕರೆ ಪ್ರದೇಶದ ವೈದ್ಯಕೀಯ ಕಾಲೇಜಿನ 1,500 ವಿದ್ಯಾರ್ಥಿಗಳಿಗೆ ನೀರು, ವಿದ್ಯುತ್ ಸೌಕರ್ಯವಿಲ್ಲ. 2022ರಲ್ಲಿ ತರಾತುರಿಯಲ್ಲಿ ಉದ್ಘಾಟನೆ ಮಾಡಲಾಯಿತು. ಕಾಲೇಜು ‘ಉದ್ಘಾಟನೆ ಮಾಡಿ ಮಕ್ಕಳ ಮನೆ ಹಾಳು ಮಾಡಲು ಮುಂದಾಗಿದ್ದಾರೆ. ಪೋಷಕರ ಶಾಪ ಅವರಿಗೆ ತಟ್ಟುವುದಿಲ್ಲವೇ’ ಎಂದು ಪ್ರಶ್ನಿಸಿದರು.

ಅಂದಿನ ಉದ್ಘಾಟನಾ ಸಮಾರಂಭಕ್ಕೆ 5 ಸಾವಿರ ಜನ ಸೇರಿಸಿದ್ದರು. ಕೇಂದ್ರದಿಂದ ವೈದ್ಯಕೀಯ ಕಾಲೇಜಿಗೆ ಶೇ 40ರಷ್ಟು ಅನುದಾನ ಬರುತ್ತದೆ. ಸೌಜನ್ಯಾಕ್ಕಾದರೂ ಹಿಂದಿನ ಸಂಸದರನ್ನು ಕಾರ್ಯಕ್ರಮಕ್ಕೆ ಕರೆಯಲಿಲ್ಲ. ಕಾಲೇಜಿನಲ್ಲಿ ನೀರಿಲ್ಲದಿದ್ದರೇನು, ವಿದ್ಯುತ್  ಇಲ್ಲದಿದ್ದರೇನು ಅವರಿಗೆ ಹೆಸರು ಬರಬೇಕಿತ್ತು ಅಷ್ಟೇ. ಈಗ ಅವರು ಮಾಡಿದ ಕೊಳೆಯನ್ನು ನಾವು ತೊಳೆಯಬೇಕಿದೆ’ ಎಂದರು.

‘ವೈದ್ಯಕೀಯ ಕಾಲೇಜು ನಿರ್ವಹಣೆ ಸರಿಯಾಗಿಲ್ಲ ಎಂದು ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಈ ರೀತಿ ಆರೋಪ ಮಾಡಿದವರ ಮಕ್ಕಳು ವಿದೇಶದಲ್ಲಿ ಓದುತ್ತಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಪರೋಕ್ಷವಾಗಿ ಟೀಕಿಸಿದರು.

ನೀರಿನ ಸಮಸ್ಯೆ ಬಗ್ಗೆ ಸಮಿತಿ ಅಧ್ಯಕ್ಷರು ಕೇಳಿದ ಪ್ರಶ್ನೆಗೆ ಮಾಹಿತಿ ನೀಡಿದ ಎಂಜಿನಿಯರ್ ಮುಕ್ಕಣ್ಣ ನಾಯಕ್, ‘ವೈದ್ಯಕೀಯ ಕಾಲೇಜು ಕಟ್ಟಡಕ್ಕೆ ₹275.03 ಕೋಟಿ ಟೆಂಡರ್ ಆಗಿತ್ತು. 2024ರಲ್ಲಿ ₹455 ಕೋಟಿ ಅಂದಾಜು ತಯಾರಿಸಿ ಕಳುಹಿಸಲಾಗಿತ್ತು. ಈ ಮೊತ್ತದಲ್ಲಿ ₹438.29 ಕೋಟಿ ವೆಚ್ಚವಾಗಿದ್ದು, ಶೇ 90ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಆದ್ದರಿಂದ ನೀರು ಮತ್ತು ವಿದ್ಯುತ್ ಸಮಸ್ಯೆ ಇದೆ ಎಂದು ಹೇಳಿದರು.

ಸಮೀಪದ ಕೆರೆ ಪಕ್ಕದಲ್ಲಿ ಎರಡು ಕೊಳವೆ ಬಾವಿ ಕೊರೆಸಿ ನೀರೆತ್ತಲು ಚಿಂತನೆ ನಡೆಸಲಾಗಿದೆ. ಇದರಿಂದ 15 ಲಕ್ಷ ಲೀಟರ್ ನೀರು ಸಂಗ್ರಹಿಸಿ ಕ್ಯಾಂಪಸ್‌ಗೆ ಬಳಸಬಹುದು ಎಂದರು.

H.D. Thammaiah unhappy with hasty inauguration

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...