Home Latest News ನಗರಸಭೆ ದುಡ್ಡಲ್ಲಿ ಪೆಟ್ರೋಲ್-ಡೀಸೆಲ್ ಹಾಕಿಸಿಕೊಂಡು ಬೆಂಗಳೂರಿಗೆ ಬರ್ತಿದ್ದ ಅಯೋಗ್ಯರು
Latest NewschikamagalurHomenamma chikmagalur

ನಗರಸಭೆ ದುಡ್ಡಲ್ಲಿ ಪೆಟ್ರೋಲ್-ಡೀಸೆಲ್ ಹಾಕಿಸಿಕೊಂಡು ಬೆಂಗಳೂರಿಗೆ ಬರ್ತಿದ್ದ ಅಯೋಗ್ಯರು

Share
Share

ಚಿಕ್ಕಮಗಳೂರು: ಮೆಡಿಕಲ್ ಕಾಲೇಜು ವಿಚಾರವಾಗಿ ಶಾಸಕ ತಮ್ಮಯ್ಯ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ರಾಜಕೀಯ ಜಟಾಪಟಿ ಮುಂದುವರೆದಿದೆ. ಶಾಸಕ ತಮ್ಮಯ್ಯ ಆರೋಪಕ್ಕೆ ವಾಗ್ದಾಳಿ ನಡೆಸಿರುವ ಸಿ.ಟಿ. ರವಿ, ನಾನು ಯಾರ ಮೇಲೂ ಆರೋಪ ಮಾಡಿಲ್ಲ. ಅಹಂಕಾರದ ಮಾತಾಡೋದು ಬೇಡ, ನನಗೂ ಅಹಂಕಾರದ ಮಾತು ಬರುತ್ತೆ ಎಂದು ಶಾಸಕ ತಮ್ಮಯ್ಯಗೆ ಸಿ.ಟಿ. ರವಿ ಎಚ್ಚರಿಕೆ ನೀಡಿದ್ದಾರೆ.

ಅಹಂಕಾರದ ಮಾತುಗಳನ್ನಾಡುವ ಕೆಲವರು ಬ್ಯಾಗ್ ಇಟ್ಟುಕೊಂಡು ಓಡಾಡುತ್ತಿದ್ರು, ಬೋಕರ್ ಕೆಲಸ ಮಾಡುತ್ತಿದ್ದುದು ನನಗೆ ಗೊತ್ತು ಎಂದು ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ. ನಗರಸಭೆ ದುಡ್ಡಲ್ಲಿ ಪೆಟ್ರೋಲ್-ಡೀಸೆಲ್ ಹಾಕಿಸಿಕೊಂಡು ಬೆಂಗಳೂರಿಗೆ ಬರ್ತಿದ್ದ ಅಯೋಗ್ಯರು ನನ್ನ ಬಗ್ಗೆ ಮಾತಾಡ್ತಾರೆ. ಅಧಿಕಾರಿಗಳ ಹತ್ರ ಖರ್ಚಿಗೆ ದುಡ್ಡು ಕೊಡು ಅಂತ ಕೇಳಿದಂತಹ ಅಯೋಗ್ಯರೆಲ್ಲ ನಾಲಿಗೆ ಹರಿಬಿಟ್ರೆ ಗೊತ್ತಿದೆ ಅವರ ಅಯೋಗ್ಯತನ ಎಂದು ಕಿಡಿಕಾರಿದರು.

ತಾವು ಜನರ ಸಮಸ್ಯೆಗಳನ್ನಿಟ್ಟುಕೊಂಡು ವಿಧಾನಸಭೆ ಒಳಗೂ ಮತ್ತು ಹೊರಗೂ ಮಾತನಾಡಿದ್ದೇನೆ. ವೈದ್ಯಕೀಯ ಕಾಲೇಜಿನ ಸಮಸ್ಯೆಗಳ ಬಗ್ಗೆ ಮಾತ್ರ ಗಮನ ಸೆಳೆದಿದ್ದೇನೆ, ತಾವು 20 ವರ್ಷ ಶಾಸಕನಾದ್ರೂ ಅಧಿಕಾರ ಮದ ತಮಗಾಗಲಿ ನನ್ನ ಮಕ್ಕಳಿಗಾಗಲಿ ಏರಿಲ್ಲ. ಯಾರೋ ಒಬ್ಬ ಅಯೋಗ್ಯ ಕೆಲಸ ಮಾಡಿಲ್ಲ ಅಂತ ಹೇಳಿಲ್ಲ, ಕಮಿಷನ್ ಹೊಡೆಯೋದಕ್ಕೆ ಹೋಗ್ತಾ ಇದ್ದಾನೆ ಅಂತ ಏನಾದ್ರೂ ಆರೋಪ ಮಾಡಿದ್ದ? ಕೇವಲ ಸಮಸ್ಯೆ ಇದೆ ಅಂತ ಹೇಳಿದ್ದೆ ಎಂದು ತಿರುಗೇಟು ನೀಡಿದ್ರು.

ಮೆಡಿಕಲ್‌ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಿಸಲು ದಶಕಗಳ ಕಾಲ ಬೇಡಾಡಿದ್ದೇನೆ ಎಂದ ಸಿ.ಟಿ. ರವಿ, ಇದು ಒಂದು ಅಥವಾ ಎರಡು ದಿನದ ಕೆಲಸವಲ್ಲ ನಾಲ್ಕು ಟ್ಯಾಂಕರ್ ನೀರನ್ನ ಜಾಸ್ತಿ ಕೊಟ್ಟು ಆ ಮಕ್ಕಳಿಗೆ ನೀರು ಕೊಡೋ ಯೋಗ್ಯತೆ ಇಲ್ಲ ಇವರಿಗೆ ಎಂದು ಸಿಟ್ಟಾದ್ರು.

ಸಮಸ್ಯೆ ಬಗೆಹರಿಸುವುದನ್ನು ಬಿಟ್ಟು ಹಳೆಯದಕ್ಕೆ ಮಾತನಾಡುವುದು, ಕುಣಿಲಾರದವರು ನೆಲ ಡೊಂಕು ಅಂದ ಹಾಗಿದೆ. ಇವತ್ತು ಆರೋಪ ಮಾಡುತ್ತಿರುವವರು ಸಿ.ಟಿ. ರವಿಗೆ ಜೈ ಅಂದವರು ಎಂದು ಟೀಕಿಸಿದರು. ಮೆಡಿಕಲ್ ಕಾಲೇಜು ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಮುಖ್ಯಮಂತ್ರಿಗಳಿಗೂ ಪತ್ರ ಬರೆದು ಗಮನಕ್ಕೆ ತಂದಿರುವುದಾಗಿ ತಿಳಿಸಿದರು.

ಎಲ್ಲಾ ಮಕ್ಕಳು ನಮ್ಮ ಮಕ್ಕಳು ತರಾನೇ ಅನ್ನುವಂತ ಭಾವನೆ ಇರೋ ತನಕ ತಂದಿದ್ದೀನಿ. ನನ್ನ ಮಕ್ಕಳ ಬಗ್ಗೆ ಮಾತ್ರ ಆಗಿದ್ರೆ ನಾನು ಅಲ್ಲಿಗೆ ಹೋಗಿ ಆ ಕಷ್ಟ ನೋಡಬೇಕಾದ ಅವಶ್ಯಕತೆನೇ ಇರಲಿಲ್ಲ ಎಂದು ವಾಗ್ದಾಳಿ ನಡೆಸಿದ್ರು.

Unworthy people were coming to Bangalore by buying petrol and diesel with the municipal money.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...