Home namma chikmagalur ಕಳವು ಆರೋಪಿಗಳ ಸೆರೆ- ಚಿನ್ನಾಭರಣ ವಶ
namma chikmagalurchikamagalurHomeLatest News

ಕಳವು ಆರೋಪಿಗಳ ಸೆರೆ- ಚಿನ್ನಾಭರಣ ವಶ

Share
Share

ತರೀಕೆರೆ: ಯರೇಹಳ್ಳಿ ತಾಂಡ್ಯಾದ ಆಶಾ ಎಂಬುವರ ಮನೆಯಲ್ಲಿ  ಮನೆಯ ಚಾವಣಿಯ ಶೀಟ್ ತೆಗೆದು ಒಳ ನುಗ್ಗಿ 96 ಗ್ರಾಂ ಚಿನ್ನಾಭರಣ, ₹8 ಸಾವಿರ ನಗದು ಕಳ್ಳತನವಾಗಿದ್ದು, ಈ ಬಗ್ಗೆ ತರೀಕೆರೆ ಪೊಲಿಸ್ ಠಾಣೆಯಲ್ಲು ದೂರು ದಾಖಲಾಗಿತ್ತು.

ಕಳ್ಳರ ಪತ್ತೆಗಾಗಿ ತರೀಕೆರೆ ಠಾಣಾ ಅಧಿಕಾರಿ, ಸಿಬ್ಬಂದಿಯ ವಿಶೇಷ ತಂಡ ರಚಿಸಲಾಗಿತ್ತು.

ತಂಡವು ಆರೋಪಿಗಳಾದ ಅದೇ ಗ್ರಾಮದ ರಾಮಕೃಷ್ಣ, ಮೇಘರಾಜ್ ಎಂಬುವರನ್ನು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಅವರಿಂದ ₹9.63 ಲಕ್ಷ ಮೌಲ್ಯದ ಚಿನ್ನಾಭರಣ, ₹4,400 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ತರೀಕೆರೆ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್‌ ರಾಮಚಂದ್ರ ನಾಯಕ್, ಪಿಎಸ್ಐಗಳಾದ ಮಂಜುನಾಥ್, ಮನ್ನಂಗಿ, ದೇವೇಂದ್ರ ರಾಥೋಡ್, ಸಿಬ್ಬಂದಿ ಎಚ್.ಸಿ. ರಾಮಪ್ಪ, ರುದ್ರೇಶ್, ರಿಯಾಜ್, ಧನಂಜಯ ಸ್ವಾಮಿ, ಶ್ರೀನಿವಾಸ, ಜಿಲ್ಲಾ ಕಚೇರಿ ತಾಂತ್ರಿಕ ಸಿಬ್ಬಂದಿ ರಬ್ಬಾನಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Theft suspects arrested gold jewellery seized
Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...