Home namma chikmagalur ಕನಕದಾಸರ ಕೀರ್ತನೆಗಳು ಈಗಲೂ ಅಷ್ಟೇ ಪ್ರಸ್ತುತ
namma chikmagalurchikamagalurHomeLatest News

ಕನಕದಾಸರ ಕೀರ್ತನೆಗಳು ಈಗಲೂ ಅಷ್ಟೇ ಪ್ರಸ್ತುತ

Share
Share

ಚಿಕ್ಕಮಗಳೂರು: ‘500 ವರ್ಷಗಳ ಹಿಂದೆ ಕನಕದಾಸರ ಕೀರ್ತನೆಗಳು ಎಷ್ಟು ಪ್ರಸ್ತುತವಾಗಿದ್ದವೋ ಈಗಲೂ ಅಷ್ಟೇ ಪ್ರಸ್ತುತವಾಗಿವೆ’ ಎಂದು ಪಂಚ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.

ತಾಲ್ಲೂಕಿನ ಸಾದರಹಳ್ಳಿ ಗ್ರಾಮದಲ್ಲಿ ಕನಕದಾಸರು, ಬಿ.ಆರ್.ಅಂಬೇಡ್ಕರ್ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಗಳ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿಯ ಅಧ್ಯಕ್ಷೆಯಾಗಿದ್ದ ಮಹಿಳೆಯನ್ನು ಜಾತಿ ಕಾರಣದಿಂದ ಸಮುದಾಯ ಭವನದ ಒಳಗೆ ಬಿಟ್ಟುಕೊಳ್ಳಲು ಹಿಂಜರಿಯುತ್ತಿರುವ ಪ್ರವೃತ್ತಿ ಇನ್ನೂ ಉಳಿದಿದೆ. ಆದ್ದರಿಂದ ಕನಕರ ಕೀರ್ತನೆಗಳು ಈಗಲೂ ಪ್ರಸ್ತುತ ಎಂಬುದು ಗೊತ್ತಾಗುತ್ತದೆ ಎಂದರು.

‘ಗ್ರಾಮೀಣ ಸೊಗಡಿನ ಭಾಷೆಯಲ್ಲಿ ಆಗಿನ ಸಮಾಜದ ಅಂಕು ಡೊಂಕನ್ನು ಅವರು ತಿಳಿಸಿಕೊಟ್ಟಿದ್ದರು. ಆದರೆ, ಈಗ ನಾವು ಕಾನೂನಿನ ಮೂಲಕ ಜಾತಿ ವ್ಯವಸ್ಥೆ ತಿದ್ದಲು ಮುಂದಾಗುತ್ತಿದ್ದೇವೆ. ಅಂಬೇಡ್ಕರ್ ಅವರು ಸಂವಿಧಾನ ನೀಡದಿದ್ದರೆ ಇಷ್ಟೊಂದು ಬದಲಾವಣೆ ಆಗುತ್ತಿರಲಿಲ್ಲ. ಇನ್ನೂ ಮನಃಸ್ಥಿತಿ ಬದಲಾಗಬೇಕು. ಅಂಬೇಡ್ಕರ್ ಕರೆ ನೀಡಿರುವಂತೆ ವಿದ್ಯೆ, ಸಂಘಟನೆ ಮತ್ತು ಹೋರಾಟದಿಂದ ಅದು ಸಾಧ್ಯ’ ಎಂದು ಪ್ರತಿಪಾದಿಸಿದರು.

ವಿಧಾನ ಪರಿಷತ್ ಶಾಸಕ ಸಿ.ಟಿ. ರವಿ ಮಾತನಾಡಿ, ‘ಪ್ರತಿಮೆಗಳನ್ನು ಇಟ್ಟುಕೊಂಡು ಹೊಡೆದಾಡಿಸಿದವರಿಗೆ, ಭಾಷೆಯ ಜಗಳ ಹುಟ್ಟು ಹಾಕಿದವರಿಗೆ, ರಾಜ್ಯ ರಾಜ್ಯಗಳ ನಡುವೆ ಸಂಘರ್ಷ ಹುಟ್ಟು ಹಾಕಿದ ಜನರಿಗೆ ಸಾದರಹಳ್ಳಿ ಗ್ರಾಮದಲ್ಲಿ ಮೂರೂ ಪ್ರತಿಮೆಗಳ ಅನಾವರಣದ ಮೂಲಕ ಪ್ರೀತಿ, ಭಾವೈಕ್ಯದ ಸಂದೇಶ ಹೋಗಬೇಕು’ ಎಂದರು.

ಬಿಎಂಟಿಸಿ ಉಪಾಧ್ಯಕ್ಷ ನಿಖಿತ್‌ರಾಜ್ ಮೌರ್ಯ, ‘ಅಂಬೇಡ್ಕರ್, ಬಸವಣ್ಣ, ಕನಕದಾಸ, ರಾಯಣ್ಣ, ಕುವೆಂಪು ನಮಗೆ ಬೇರೆ ವ್ಯಕ್ತಿಗಳಂತೆ ಕಂಡರೂ ಅವರೆಲ್ಲರ ಚಿಂತನೆ ಮತ್ತು ವಿಚಾರಧಾರೆ ಒಂದೇ’ ಎಂದು ಹೇಳಿದರು.

ಆದರ್ಶ ಇಟ್ಟುಕೊಂಡು ಬದುಕಿದರು. ಕನಕದಾಸರಿಗೆ ರಾಜಾಶ್ರಯ ಇಲ್ಲದಿದ್ದರೂ, ಅವರು ಬರೆದಿರುವ ಸಾಹಿತ್ಯ ಮತ್ತು ಕೀರ್ತನೆಗಳು ಉಳಿದಿವೆ. ಇದಕ್ಕೆ ಕಾರಣ ಇತರೆ ಹಿಂದುಳಿದ ಜನ ಬಾಯಿಂದ ಬಾಯಿಗೆ ಹರಡಿಸಿದ್ದಾರೆ ಎಂದು ಹೇಳಿದರು.

ಒಂದೇ ವೇದಿಕೆಯಲ್ಲಿ ಎಲ್ಲರೂ ಒಟ್ಟಿಗೆ ಕುಳಿತುಕೊಳ್ಳುವ ಪರಿಸ್ಥಿತಿ 75 ವರ್ಷಗಳ ಹಿಂದೆ ಇರಲಿಲ್ಲ. 4 ಸಾವಿರ ವರ್ಷಗಳಿಂದ ಭಾರತದಲ್ಲಿ ಈ ವ್ಯವಸ್ಥೆ ಇತ್ತು. ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಸಮಾನತೆ ಬಂದಿದೆ. ತಳ ಸಮುದಾಯದವರೂ ಶಿಕ್ಷಣ ಮತ್ತು ಉನ್ನತ ಹುದ್ದೆಗಳ ಬಗ್ಗೆ ಮಾತನಾಡುವಂತೆ ಸಂವಿಧಾನ ಮಾಡಿದೆ ಎಂದು ಹೇಳಿದರು.

ಶಾಸಕ ಜಿ.ಎಚ್. ಶ್ರೀನಿವಾಸ್, ಬಿಎಸ್‌ಪಿ ಮುಖಂಡ ಕೆ.ಟಿ. ರಾಧಾಕೃಷ್ಣ, ಉದ್ಯಮಿ ಎಸ್.ಎನ್. ರಮೇಶ್, ಮುಖಂಡರಾದ ರೇಖಾ ಹುಲಿಯಪ್ಪಗೌಡ, ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್, ರಾಜು ಮಣೇನಹಳ್ಳಿ, ಕೆಂಗೇಗೌಡ, ಎಸ್.ಬಿ. ಮಲ್ಲೇಗೌಡ, ಮಂಜುಳಾ, ವಿಶಾಲಾಕ್ಷಿ, ರೇಣುಕಾ, ಬೀರೇಗೌಡ ಭಾಗವಹಿಸಿದ್ದರು.

Kanakadasa’s hymns are still as relevant today

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...