Home namma chikmagalur ಶ್ರೀ ಗುರು ದತ್ತಾತ್ರೇಯ ಪೀಠದ ವ್ಯಾಜ್ಯ – ಹಿಂದೂ–ಮುಸ್ಲಿಮರ ನಡುವೆ ಅಲ್ಲ
namma chikmagalurchikamagalurHomeLatest News

ಶ್ರೀ ಗುರು ದತ್ತಾತ್ರೇಯ ಪೀಠದ ವ್ಯಾಜ್ಯ – ಹಿಂದೂ–ಮುಸ್ಲಿಮರ ನಡುವೆ ಅಲ್ಲ

Share
????????????????????????????????????
Share

ಚಿಕ್ಕಮಗಳೂರು: ‘ಶ್ರೀ ಗುರುದತ್ತಾತ್ರೇಯ ಪೀಠದ ವ್ಯಾಜ್ಯ ಇರುವುದು ಶಾಖಾದ್ರಿ ವಂಶಸ್ಥರಿಗೂ ಹಾಗೂ ದತ್ತಪೀಠ ಸಂವರ್ಧನಾ ಸಮಿತಿಯ ನಡುವೆ. ಹಿಂದೂ–ಮುಸ್ಲಿಮರ ನಡುವೆ ಅಲ್ಲ’ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ರಂಗನಾಥ ತಿಳಿಸಿದರು.

ಇನಾಂ ದತ್ತಾತ್ರೇಯ ಪೀಠದ ಒಟ್ಟು ಆಸ್ತಿ 1861 ಎಕರೆ ಇದ್ದು, ಹಿಂದೆ ಇದ್ದ ಗೌಸ್ ಮೊಹಿದ್ದೀನ್ ಶಾಖಾದ್ರಿ ಹಾಗೂ ಪೀರ್ ಮೊಹಿದ್ದೀನ್ ಶಾಖಾದ್ರಿ ಈ ಆಸ್ತಿಯಲ್ಲಿ ಸಾಕಷ್ಟು ಪರಭಾರೆ ಮಾಡಿ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ದತ್ತಪೀಠವು ಮತ್ತು ಬಾಬಾಬುಡನ್ ದರ್ಗಾವು ಬೇರೆ ಬೇರೆ ಕಡೆ ಇರುವುದರಿಂದ ದತ್ತಪೀಠಕ್ಕೂ ಬಾಬಾಬುಡನ್‌ ದರ್ಗಾಕ್ಕೂ ಯಾವುದೇ ಸಂಬಂಧ ಇಲ್ಲ. ಬಾಬಾಬುಡನ್ ದರ್ಗಾ ಚಿಕ್ಕಮಗಳೂರು ತಾಲ್ಲೂಕು, ಜಾಗರ ಹೋಬಳಿ, ನಾಗೇನಹಳ್ಳಿ ಗ್ರಾಮದ ಸರ್ವೆ ನಂಬರ್– 57ರಲ್ಲಿ 111 ಎಕರೆ ಇದೆ.

ಈ ಆಸ್ತಿಗಳಲ್ಲಿ ಅನೇಕ ಆಸ್ತಿಗಳನ್ನು ಶಾ–ಖಾದ್ರಿಗಳು ಮಾರಾಟ ಮಾಡಿದ್ದಾರೆ ಎಂದು ದೂರಿದರು. ಡಿ.4 ರಂದು ದತ್ತಜಯಂತಿ ನಡೆಸಲಾಗುತ್ತಿದೆ. ಡಿ.2 ರಂದು ಅನುಸೂಯದೇವಿ ಅವರ ಪೂಜೆ ಹಾಗೂ ಸಂಕೀರ್ತನಾ ಯಾತ್ರೆ ನಡೆಯಲಿದೆ. ಡಿ.3 ರಂದು ನಗರದಲ್ಲಿ ಶೋಭಾಯಾತ್ರೆ ನಡೆಯುತ್ತದೆ.

ಡಿ.4 ರಂದು ದತ್ತಪೀಠದಲ್ಲಿ ದತ್ತಹೋಮ, ಪಾದುಕೆ ಪೂಜೆ, ಔದುಂಬರ ವೃಕ್ಷದ ಪೂಜೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವಿಶ್ವಹಿಂದೂ ಪರಿಷದ್ ಉಪಾಧ್ಯಕ್ಷ ಯೋಗರಾಜ್ ಅರಸ್, ಮಠ ಮಂದಿರಗಳ ಪ್ರಮುಖ್ ಶಿವಣ್ಣ, ಪುಷ್ಪ, ನಯನ್, ಸುನೀಲ್ ಉಪಸ್ಥಿತರಿದ್ದರು.

The dispute over the Sri Guru Dattatreya Peetha – not between Hindus and Muslims

Share

Leave a comment

Leave a Reply

Your email address will not be published. Required fields are marked *

Don't Miss

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

ವಸತಿ ಶಾಲೆಯಿಂದ ಓಡಿಹೋದ ಮಕ್ಕಳು…?

ಚಿಕ್ಕಮಗಳೂರು: ಕಾಫಿನಾಡಿನ ತುಡುಕೂರು ಗ್ರಾಮದಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ತಡರಾತ್ರಿ ನಡೆದ ಮಕ್ಕಳ ಗಲಾಟೆ ಸದ್ಯ ದೊಡ್ಡ ಆತಂಕಕ್ಕೆ ಕಾರಣವಾಗಿದೆ. ಶಾಲೆಯಲ್ಲಿ ಮಕ್ಕಳ ನಡುವೆ ಉಂಟಾದ ಜಗಳದಿಂದ...

Related Articles

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ...