Home namma chikmagalur ಶ್ರೀ ಗುರು ದತ್ತಾತ್ರೇಯ ಪೀಠದ ವ್ಯಾಜ್ಯ – ಹಿಂದೂ–ಮುಸ್ಲಿಮರ ನಡುವೆ ಅಲ್ಲ
namma chikmagalurchikamagalurHomeLatest News

ಶ್ರೀ ಗುರು ದತ್ತಾತ್ರೇಯ ಪೀಠದ ವ್ಯಾಜ್ಯ – ಹಿಂದೂ–ಮುಸ್ಲಿಮರ ನಡುವೆ ಅಲ್ಲ

Share
????????????????????????????????????
Share

ಚಿಕ್ಕಮಗಳೂರು: ‘ಶ್ರೀ ಗುರುದತ್ತಾತ್ರೇಯ ಪೀಠದ ವ್ಯಾಜ್ಯ ಇರುವುದು ಶಾಖಾದ್ರಿ ವಂಶಸ್ಥರಿಗೂ ಹಾಗೂ ದತ್ತಪೀಠ ಸಂವರ್ಧನಾ ಸಮಿತಿಯ ನಡುವೆ. ಹಿಂದೂ–ಮುಸ್ಲಿಮರ ನಡುವೆ ಅಲ್ಲ’ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ರಂಗನಾಥ ತಿಳಿಸಿದರು.

ಇನಾಂ ದತ್ತಾತ್ರೇಯ ಪೀಠದ ಒಟ್ಟು ಆಸ್ತಿ 1861 ಎಕರೆ ಇದ್ದು, ಹಿಂದೆ ಇದ್ದ ಗೌಸ್ ಮೊಹಿದ್ದೀನ್ ಶಾಖಾದ್ರಿ ಹಾಗೂ ಪೀರ್ ಮೊಹಿದ್ದೀನ್ ಶಾಖಾದ್ರಿ ಈ ಆಸ್ತಿಯಲ್ಲಿ ಸಾಕಷ್ಟು ಪರಭಾರೆ ಮಾಡಿ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ದತ್ತಪೀಠವು ಮತ್ತು ಬಾಬಾಬುಡನ್ ದರ್ಗಾವು ಬೇರೆ ಬೇರೆ ಕಡೆ ಇರುವುದರಿಂದ ದತ್ತಪೀಠಕ್ಕೂ ಬಾಬಾಬುಡನ್‌ ದರ್ಗಾಕ್ಕೂ ಯಾವುದೇ ಸಂಬಂಧ ಇಲ್ಲ. ಬಾಬಾಬುಡನ್ ದರ್ಗಾ ಚಿಕ್ಕಮಗಳೂರು ತಾಲ್ಲೂಕು, ಜಾಗರ ಹೋಬಳಿ, ನಾಗೇನಹಳ್ಳಿ ಗ್ರಾಮದ ಸರ್ವೆ ನಂಬರ್– 57ರಲ್ಲಿ 111 ಎಕರೆ ಇದೆ.

ಈ ಆಸ್ತಿಗಳಲ್ಲಿ ಅನೇಕ ಆಸ್ತಿಗಳನ್ನು ಶಾ–ಖಾದ್ರಿಗಳು ಮಾರಾಟ ಮಾಡಿದ್ದಾರೆ ಎಂದು ದೂರಿದರು. ಡಿ.4 ರಂದು ದತ್ತಜಯಂತಿ ನಡೆಸಲಾಗುತ್ತಿದೆ. ಡಿ.2 ರಂದು ಅನುಸೂಯದೇವಿ ಅವರ ಪೂಜೆ ಹಾಗೂ ಸಂಕೀರ್ತನಾ ಯಾತ್ರೆ ನಡೆಯಲಿದೆ. ಡಿ.3 ರಂದು ನಗರದಲ್ಲಿ ಶೋಭಾಯಾತ್ರೆ ನಡೆಯುತ್ತದೆ.

ಡಿ.4 ರಂದು ದತ್ತಪೀಠದಲ್ಲಿ ದತ್ತಹೋಮ, ಪಾದುಕೆ ಪೂಜೆ, ಔದುಂಬರ ವೃಕ್ಷದ ಪೂಜೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವಿಶ್ವಹಿಂದೂ ಪರಿಷದ್ ಉಪಾಧ್ಯಕ್ಷ ಯೋಗರಾಜ್ ಅರಸ್, ಮಠ ಮಂದಿರಗಳ ಪ್ರಮುಖ್ ಶಿವಣ್ಣ, ಪುಷ್ಪ, ನಯನ್, ಸುನೀಲ್ ಉಪಸ್ಥಿತರಿದ್ದರು.

The dispute over the Sri Guru Dattatreya Peetha – not between Hindus and Muslims

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...