Home ಯುವಕರ ಅನುಕೂಲಕ್ಕಾಗಿ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮ
HomechikamagalurLatest Newsnamma chikmagalur

ಯುವಕರ ಅನುಕೂಲಕ್ಕಾಗಿ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮ

Share
Share

ಚಿಕ್ಕಮಗಳೂರು: ಜ್ಯೋತಿನಗರದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಸಭಾಂಗಣ ದಲ್ಲಿ ಈಚೆಗೆ ಭಾರತ ಸರ್ಕಾರ, ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ, ಬೆಂಗಳೂರು, ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ, ನಿರುದ್ಯೋಗಿ ಯುವಕರ ಅನುಕೂಲಕ್ಕಾಗಿ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಲೀಡ್ ಬ್ಯಾಂಕ್ ಮ್ಯಾನೇಜರ್ ಹೆಚ್.ಎನ್.ಮಹೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜಿಲ್ಲೆಯಲ್ಲಿ ಲಭ್ಯವಿರುವ ನೈಸರ್ಗಿಕ ಸಂಪನ್ಮೂಲ, ಮಾರುಕಟ್ಟೆ, ಬೇಡಿಕೆ ಆಧಾರಿತ ಉತ್ಪನ್ನಗಳನ್ನು ಎಂಎಸ್ ಎಂಇಗಳ ಸ್ಥಾಪನೆಗೆ ಬಳಸಿಕೊಳ್ಳಬೇಕು. ಜೊತೆಗೆ ಬ್ಯಾಂಕ್‌ಗಳಲ್ಲಿ ಲಭ್ಯವಿರುವ ಹಣಕಾಸು ಯೋಜನೆಗಳ ಬಗ್ಗೆ ಮಾಹಿತಿ ಅರಿವು ಹೊಂದಿರಬೇಕು ಎಂದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಹೇಶ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಉದ್ಯಮಿ, ಉದ್ಯಮಶೀಲತೆ, ಗುಣಗಳು, ಯೋಜನಾ ವರದಿಗಳನ್ನು ಹೇಗೆ ತಯಾರಿಸುವುದು ಮತ್ತು ಸಲ್ಲಿಸು ವುದು ಮತ್ತು ಯಶಸ್ಸಿನ ಕಥೆಗಳ ಬಗ್ಗೆ ಕೈಗಾರಿಕಾ ಕೇಂದ್ರವನ್ನು ನೇರವಾಗಿ ಸಂಪರ್ಕಿಸಬಹುದು ಎಂದು ತಿಳಿಸಿದರು.

ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಸಹಾಯಕ ನಿರ್ದೇ ಶಕ ಜಿ.ನಾಗರಾಜ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮವನ್ನು ಸಂಯೋಜಿಸಿದರು ಮತ್ತು ಅಭಿವೃದ್ಧಿ ಆಯುಕ್ತರ ಕಚೇರಿಯ ಹಾಗೂ ವಿಶೇ? ಯೋಜನೆಗಳು ಮತ್ತು ಹೊಸ ಉದ್ಯಮಗಳನ್ನು ಸ್ಥಾಪಿಸಲು ಆಸಕ್ತಿ ಹೊಂದಿರುವವರಿಗೆ ಮತ್ತು ಅಸ್ತಿತ್ವದಲ್ಲಿರುವ ಉದ್ಯಮಿಗಳಿಗೆ ಮಾರ್ಗಸೂಚಿಗಳನ್ನು ಮಾಹಿತಿ ನೀಡಿದರು.

ಈ ಸಂದರ್ಬದಲ್ಲಿ ಸಂಪನ್ಮೂಲ ವ್ಯಕ್ತಿ ಮೋಹನ್‌ಶಂಕರ್ ಡಿಜಿಟಲ್ ಮಾರ್ಕೆಟಿಂಗ್, ಕೃತಕ ಬುದ್ಧಿ ಮತ್ತೆ, ಪರಿಕರಗಳ ವೆಬ್‌ಸೈಟ್ ವಿನ್ಯಾಸ ಉಪನ್ಯಾಸ ನೀಡಿದರು. ಜಿಲ್ಲೆಯಲ್ಲಿ ಸುಮಾರು ೬೦ ಜನರು ಉದ್ಯ ಮಶೀಲತಾ ಜಾಗೃತಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

Entrepreneurship Awareness Program for Youth

 

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...