Home ಯುವಕರ ಅನುಕೂಲಕ್ಕಾಗಿ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮ
HomechikamagalurLatest Newsnamma chikmagalur

ಯುವಕರ ಅನುಕೂಲಕ್ಕಾಗಿ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮ

Share
Share

ಚಿಕ್ಕಮಗಳೂರು: ಜ್ಯೋತಿನಗರದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಸಭಾಂಗಣ ದಲ್ಲಿ ಈಚೆಗೆ ಭಾರತ ಸರ್ಕಾರ, ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ, ಬೆಂಗಳೂರು, ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ, ನಿರುದ್ಯೋಗಿ ಯುವಕರ ಅನುಕೂಲಕ್ಕಾಗಿ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಲೀಡ್ ಬ್ಯಾಂಕ್ ಮ್ಯಾನೇಜರ್ ಹೆಚ್.ಎನ್.ಮಹೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜಿಲ್ಲೆಯಲ್ಲಿ ಲಭ್ಯವಿರುವ ನೈಸರ್ಗಿಕ ಸಂಪನ್ಮೂಲ, ಮಾರುಕಟ್ಟೆ, ಬೇಡಿಕೆ ಆಧಾರಿತ ಉತ್ಪನ್ನಗಳನ್ನು ಎಂಎಸ್ ಎಂಇಗಳ ಸ್ಥಾಪನೆಗೆ ಬಳಸಿಕೊಳ್ಳಬೇಕು. ಜೊತೆಗೆ ಬ್ಯಾಂಕ್‌ಗಳಲ್ಲಿ ಲಭ್ಯವಿರುವ ಹಣಕಾಸು ಯೋಜನೆಗಳ ಬಗ್ಗೆ ಮಾಹಿತಿ ಅರಿವು ಹೊಂದಿರಬೇಕು ಎಂದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಹೇಶ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಉದ್ಯಮಿ, ಉದ್ಯಮಶೀಲತೆ, ಗುಣಗಳು, ಯೋಜನಾ ವರದಿಗಳನ್ನು ಹೇಗೆ ತಯಾರಿಸುವುದು ಮತ್ತು ಸಲ್ಲಿಸು ವುದು ಮತ್ತು ಯಶಸ್ಸಿನ ಕಥೆಗಳ ಬಗ್ಗೆ ಕೈಗಾರಿಕಾ ಕೇಂದ್ರವನ್ನು ನೇರವಾಗಿ ಸಂಪರ್ಕಿಸಬಹುದು ಎಂದು ತಿಳಿಸಿದರು.

ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಸಹಾಯಕ ನಿರ್ದೇ ಶಕ ಜಿ.ನಾಗರಾಜ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮವನ್ನು ಸಂಯೋಜಿಸಿದರು ಮತ್ತು ಅಭಿವೃದ್ಧಿ ಆಯುಕ್ತರ ಕಚೇರಿಯ ಹಾಗೂ ವಿಶೇ? ಯೋಜನೆಗಳು ಮತ್ತು ಹೊಸ ಉದ್ಯಮಗಳನ್ನು ಸ್ಥಾಪಿಸಲು ಆಸಕ್ತಿ ಹೊಂದಿರುವವರಿಗೆ ಮತ್ತು ಅಸ್ತಿತ್ವದಲ್ಲಿರುವ ಉದ್ಯಮಿಗಳಿಗೆ ಮಾರ್ಗಸೂಚಿಗಳನ್ನು ಮಾಹಿತಿ ನೀಡಿದರು.

ಈ ಸಂದರ್ಬದಲ್ಲಿ ಸಂಪನ್ಮೂಲ ವ್ಯಕ್ತಿ ಮೋಹನ್‌ಶಂಕರ್ ಡಿಜಿಟಲ್ ಮಾರ್ಕೆಟಿಂಗ್, ಕೃತಕ ಬುದ್ಧಿ ಮತ್ತೆ, ಪರಿಕರಗಳ ವೆಬ್‌ಸೈಟ್ ವಿನ್ಯಾಸ ಉಪನ್ಯಾಸ ನೀಡಿದರು. ಜಿಲ್ಲೆಯಲ್ಲಿ ಸುಮಾರು ೬೦ ಜನರು ಉದ್ಯ ಮಶೀಲತಾ ಜಾಗೃತಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

Entrepreneurship Awareness Program for Youth

 

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...