Home namma chikmagalur ಹೆಚ್ಚು ಕಾಲ ವಾಹನ ನಿಲುಗಡೆ ವಿರುದ್ಧ ಕ್ರಮಕ್ಕೆ ಆಗ್ರಹ
namma chikmagalurchikamagalurHomeLatest News

ಹೆಚ್ಚು ಕಾಲ ವಾಹನ ನಿಲುಗಡೆ ವಿರುದ್ಧ ಕ್ರಮಕ್ಕೆ ಆಗ್ರಹ

Share
Share

ಚಿಕ್ಕಮಗಳೂರು:  ನಗರದ ರಸ್ತೆಗಳಲ್ಲಿ ನಿಗದಿತ ಅವಧಿಗಿಂತ ಹೆಚ್ಚು ಕಾಲ ವಾಹನಗಳನ್ನು ನಿಲುಗಡೆ ಮಾಡುತ್ತಿರುವ ಕ್ರಮಕ್ಕೆ ಕಡಿವಾಣ ಹಾಕುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ನಗರಸಭೆಯನ್ನು ಒತ್ತಾಯಿಸಿದೆ.

ಸಂಘಟನೆಯ ರಾಜ್ಯಾಧ್ಯಕ್ಷ ಸೋಮು ನಾಯಕ್ ಅವರ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಮತ್ತು ಉಪಾಧ್ಯಕ್ಷೆ ಲಲಿತಾ ರವಿನಾಯ್ಕ್ ಅವರನ್ನು ಶನಿವಾರ ಭೇಟಿ ಮಾಡಿದ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.

ಇತ್ತೀಚಿನ ವರ್ಷಗಳಲ್ಲಿ ದಿನೇ ದಿನೇ ಜಿಲ್ಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದು ನಗರದ ರಸ್ತೆಗಳು ಸದಾಕಾಲ ಪ್ರವಾಸಿಗರ ವಾಹನಗಳಿಂದ ತುಂಬಿರುತ್ತವೆ, ಇದರ ನಡುವೆ ಆ ರಸ್ತೆಗಳ ಕೆಲ ಸ್ಥಳೀಯರು ತಮ್ಮ ವಾಹನಗಳನ್ನು ರಸ್ತೆ ಬದಿಯಲ್ಲಿ ಖಾಯಂ ಆಗಿ ನಿಲ್ಲಿಸುವುದರಿಂದ ಉಳಿದ ವಾಹನಗಳಿಗೆ ನಿಲುಗಡೆಗೆ ಸ್ಥಳ ಸಿಗದೇ ಪರದಾಡುವಂತಾಗಿದೆ ಎಂದು ಆರೋಪಿಸಿದರು.

ಸ್ಥಳೀಯರು ತಮ್ಮ ವಾಹನಗಳನ್ನು ತಮ್ಮ ಖಾಸಗೀ ಜಾಗದಲ್ಲಿ ನಿಲ್ಲಿಸಿದರೆ ನಗರದ ಮುಖ್ಯ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಹಾಗೂ ನಿಲುಗಡೆಗೆ ಸ್ಥಳ ದೊರೆಯುತ್ತದೆ ಎಂದ ಪದಾಧಿಕಾರಿಗಳು ಈ ಹಿನ್ನೆಲೆಯಲ್ಲಿ ಯಾವುದೇ ವ್ಯಕ್ತಿ ಏಳು ದಿನಗಳ ಕಾಲ ರಸ್ತೆಯಲ್ಲಿ ವಾಹನವನ್ನು ನಿಲ್ಲಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಆಗ್ರಹಿಸಿದರು.

ನಗರದ ರಸ್ತೆ ಬದಿಗಳಲ್ಲಿ ಮತ್ತು ಪಾದಾಚಾರಿಗಳಿಗೆ ಮೀಸಲಿಟ್ಟ ರಸ್ತೆಗಳ ಮೇಲೆ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿರುವುದನ್ನು ತಡೆಗಟ್ಟುವಂತೆ ಒತ್ತಾಯಿಸಿದರು. ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ಪದಾಧಿಕಾರಿಗಳಾದ ಒ ಆ ಓ ಭಾಷಾ, ಮಾಕೇನಹಳ್ಳಿಸುಕೇಶ್, ಖಲಂದರ್, ರೂಪೇಶ್ ಹಾಜರಿದ್ದರು.

Demand for action against long-term parking

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...