Home Crime News ಜೋಡಿತಿಮ್ಮಾಪುರದ ಗಡಿಭದ್ರತಾ ಪಡೆಯ ಯೋಧ ನಿಧನ
Crime NewsHomeKadurLatest Newsnamma chikmagalur

ಜೋಡಿತಿಮ್ಮಾಪುರದ ಗಡಿಭದ್ರತಾ ಪಡೆಯ ಯೋಧ ನಿಧನ

Share
Share

ಕಡೂರು: ರಾಜಸ್ಥಾನದ  ಬಿಕಾನೇರ್‌ನಲ್ಲಿ ಗಡಿಭದ್ರತಾ ಪಡೆಯ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಾಲ್ಲೂಕಿನ ಜೋಡಿತಿಮ್ಮಾಪುರದ ಗಿರೀಶ್‌ (37) ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ಸೇವಾ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

18 ವರ್ಷಗಳಿಂದ ಗಡಿಭದ್ರತಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಶ್ರೀನಗರ, ಭೋಪಾಲ್‌, ಗುವಾಹಟಿ ಮತ್ತು ರಾಜಸ್ಥಾನದಲ್ಲಿ ಸೇವೆ ಸಲ್ಲಿಸಿದ್ದರು.

ಸೋಮವಾರ (ಡಿ. 8) ಸಂಜೆ ಕರ್ತವ್ಯದಲ್ಲಿರುವಾಗ ವಾಂತಿಯಾದ ಕಾರಣ ವಿಶ್ರಾಂತಿಗೆ ತೆರಳಿದ್ದರು. ಬಳಿಕ, ರಾತ್ರಿ ಕುಟುಂಬಸ್ಥರೊಂದಿಗೆ ವಿಡಿಯೊ ಕರೆಯಲ್ಲಿ ಮಾತನಾಡಿ, ‘ಏನೂ ಸಮಸ್ಯೆ ಇಲ್ಲ ಆರೋಗ್ಯವಾಗಿದ್ದೇನೆ. ಬೆಳಿಗ್ಗೆ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸುವೆ’ ಎಂದು ಮಾಹಿತಿ ನೀಡಿದ್ದರು.

ಆದರೆ, ಮಂಗಳವಾರ ಬೆಳಿಗ್ಗೆ ಬಿಎಸ್‌ಎಫ್‌ ಯುನಿಟ್‌ನವರು ಕುಟುಂಬದವರಿಗೆ ಕರೆ ಮಾಡಿ ಗಿರೀಶ್‌ ಮೃತಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದು, ಕುಟುಂಬಸ್ಥರು ಇಲ್ಲಿಗೆ ಬರುವುದು ಬೇಡ. ಇಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಿ, ಸಂಜೆ ಬೆಂಗಳೂರಿಗೆ ಮೃತದೇಹವನ್ನು ಕಳಿಸಲಾಗು ವುದು. ಅಲ್ಲಿಂದ ಬುಧವಾರ ಬೆಳಿಗ್ಗೆ ಆಂಬುಲೆನ್ಸ್‌ ಮೂಲಕ ಜೋಡಿತಿಮ್ಮಾಪುರಕ್ಕೆ ಮೃತದೇಹ ತರುವುದಾಗಿ ತಿಳಿಸಿದ್ದಾರೆ. ಅವರ ಸಾವಿಗೆ ಕಾರಣ ಈವರೆಗೆ ಖಚಿತವಾಗಿಲ್ಲ. ನಮ್ಮ ತೋಟದಲ್ಲಿ ಬುಧವಾರ ಅಂತ್ಯಕ್ರಿಯೆ ನಡೆಸುತ್ತೇವೆ ಎಂದು ಮೃತರ ಸಹೋದರ ಸತೀಶ್‌ ತಿಳಿಸಿದರು.

ಅವರಿಗೆ ಪತ್ನಿ ಎಚ್‌.ಜಿ. ಅಭಿಲಾಷಾ, 9 ವರ್ಷದ ಪುತ್ರ, 6 ವರ್ಷದ ಪುತ್ರಿ, ತಂದೆ ದೂಸಯ್ಯನ ಬಸಪ್ಪ, ತಾಯಿ ಜಯಮ್ಮ ಇದ್ದಾರೆ.

‘15 ದಿನಗಳ ಹಿಂದೆ ರಜೆಯ ಮೇಲೆ ಊರಿಗೆ ಬಂದು ಎಲ್ಲರೊಂದಿಗೆ ಕಲೆತು ನಗು ನಗುತ್ತಾ ಮಾತನಾಡಿದ್ದ ಗಿರೀಶ್‌ ಇಲ್ಲವೆಂದರೆ ನಂಬುವುದು ಕಷ್ಟವಾಗುತ್ತಿದೆ. ದೇಶ ಸೇವೆಗೆ ತಮ್ಮನ್ನು ಮುಡಿಪಾಗಿರಿಸಿಕೊಂಡು ಉತ್ತರ ಭಾರತದ ಹಲವೆಡೆ ಕರ್ತವ್ಯ ನಿರ್ವಹಿಸಿದ್ದರು. ಗ್ರಾಮಸ್ಥರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಒಳ್ಳೆಯ ವ್ಯಕ್ತಿ ಅವರಾಗಿದ್ದರು’ ಎಂದು ಗ್ರಾಮಸ್ಥ ಬಿ.ಜಿ. ಬಸಪ್ಪ ತಿಳಿಸಿದರು.

Border Security Force soldier from Jodithimapur passes away

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...