Home ಮೃತಪಟ್ಟ ವೈರ್‌ಲೆಸ್‌ ಎಕ್ಸ್‌ಪೆರಿಮೆಂಟಲ್‌ ಯುನಿಟ್‌ನ ನಾಯಬ್‌ ಗಿರೀಶ್ ಅಂತ್ಯಕ್ರೀಯೆ
HomeKadurLatest Newsnamma chikmagalur

ಮೃತಪಟ್ಟ ವೈರ್‌ಲೆಸ್‌ ಎಕ್ಸ್‌ಪೆರಿಮೆಂಟಲ್‌ ಯುನಿಟ್‌ನ ನಾಯಬ್‌ ಗಿರೀಶ್ ಅಂತ್ಯಕ್ರೀಯೆ

Share
Share

ಬೀರೂರು: ರಾಜಸ್ತಾನದ ಬಿಕಾನೇರ್‌ನಲ್ಲಿ ಮಂಗಳವಾರ (ಡಿ.9) ಮೃತಪಟ್ಟಿದ್ದ ಸೇನಾಪಡೆಯ 60 ವೈರ್‌ಲೆಸ್‌ ಎಕ್ಸ್‌ಪೆರಿಮೆಂಟಲ್‌ ಯುನಿಟ್‌ನ ನಾಯಬ್‌ ಗಿರೀಶ್ ಜೆ.ಬಿ (37) ಅವರ ದೇಹವು, ಶುಕ್ರವಾರ ಬೆಳಿಗ್ಗೆ 5ಗಂಟೆಗೆ ಸ್ವಗ್ರಾಮ ಜೋಡಿತಿಮ್ಮಾಪುರಕ್ಕೆ ತಲುಪಿತು.

ಮೃತರ ದೇಹದೊಂದಿಗೆ ಮಡಿಕೇರಿಯ ನಾಯಬ್‌ ಸುಬೇದಾರ್‌ ಶಿವಚರಣ್ ಜಿ.ಕೆ. ಬಂದು, ಪಾರ್ಥಿವ ಶರೀರಕ್ಕೆ ಗೌರವ ಸೂಚಕವಾಗಿ ಹೊದಿಸಿದ್ದ ರಾಷ್ಟ್ರಧ್ವಜವನ್ನು ಯೋಧನ ಪತ್ನಿ ಅಭಿಲಾಷಾರಿಗೆ ಹಸ್ತಾಂತರಿಸಿದರು.

ಸೇನಾ ಆಸ್ಪತ್ರೆಯಲ್ಲಿ ವೈದ್ಯರ ಅಲಭ್ಯತೆಯಿಂದ ಮರಣೋತ್ತರ ಪರೀಕ್ಷೆ ಎರಡು ದಿನ ವಿಳಂಬವಾಗಿತ್ತು. ಗುರುವಾರ ಮರಣೋತ್ತರ ಪರೀಕ್ಷೆಯ ಬಳಿಕ, ಜೈಪುರದಿಂದ ಬೆಂಗಳೂರಿಗೆ ರಾತ್ರಿ ವಿಮಾನದಲ್ಲಿ ಪಾರ್ಥಿವ ಶರೀರವನ್ನು ತರಲಾಗಿತ್ತು. ಅಲ್ಲಿ ನಿವೃತ್ತ ಕರ್ನಲ್‌ ಹರಿ ಅವರ ನೇತೃತ್ವದಲ್ಲಿ ಸೇವಾ ಅವಧಿಯಲ್ಲಿ ಮೃತರಾದವರಿಗೆ ಸಲ್ಲಿಸುವ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಿ, ಬೆಟಾಲಿಯನ್ ಆಂಬುಲೆನ್ಸ್ ಮೂಲಕ ಸಿಬ್ಬಂದಿಯೊಂದಿಗೆ ಮೃತದೇಹವನ್ನು ಸ್ವಗ್ರಾಮಕ್ಕೆ ಕಳುಹಿಸಲಾಗಿತ್ತು.

ಶುಕ್ರವಾರ ಬೆಳಿಗ್ಗೆ ಜೋಡಿತಿಮ್ಮಾಪುರದ ಸ್ವಗೃಹಕ್ಕೆ ಶವವನ್ನು ತಂದು ಅಂತಿಮ ದರ್ಶನಕ್ಕೆ ಇರಿಸಲಾಗಿತ್ತು. ಪತ್ನಿ ಅಭಿಲಾಷಾ ಮತ್ತು ಪುತ್ರ ಪ್ರಣೀತ್‌, ಪುತ್ರಿ ಡಿಂಪನಾ ಪಾರ್ಥಿವ ಶರೀರಕ್ಕೆ ಸಲ್ಯೂಟ್ ಮಾಡುವ ಮೂಲಕ ನಮನ ಸಲ್ಲಿಸಿದರು.

ಗಿರೀಶ್‌ ಅವರ ತಂದೆ ಬಸಪ್ಪ, ತಾಯಿ ಜಯಮ್ಮ ಸೇರಿದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅವರ ದುಃಖವನ್ನು ಕಂಡು ಅಂತಿಮ ನಮನ ಸಲ್ಲಿಸಲು ಪಾಲ್ಗೊಂಡಿದ್ದ ಎಲ್ಲರ ಕಣ್ಣುಗಳು ತೇವಗೊಂಡವು. ನಂತರ ಗ್ರಾಮಸ್ಥರೆಲ್ಲಾ ಸೇರಿ ಗ್ರಾಮದ ರಸ್ತೆಗಳಲ್ಲಿ ಮೆರವಣಿಗೆಯ ಮೂಲಕ ಪಾರ್ಥಿವ ಶರೀರವನ್ನು ತಂದು, ಸಮೀಪದ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು.

ಹಾಸನದ 15 ಕರ್ನಾಟಕ ಬೆಟಾಲಿಯನ್‌ನ ಮೇಜರ್ ಬಿ. ಪಾಟೀಲ್, ಕಡೂರು ತಹಶೀಲ್ದಾರ್ ಸಿ.ಎಸ್‌. ಪೂರ್ಣಿಮಾ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಸಿ.ಆರ್‌. ಪ್ರವೀಣ್, ಬೀರೂರು ಸರ್ಕಲ್‌ ಇನ್‌ಸ್ಪೆಕ್ಟರ್‌ ಶ್ರೀಕಾಂತ್‌ ಎನ್‌.ಎಸ್‌., ಬೀರೂರು ಪಿಎಸ್ಐ ತಿಪ್ಪೇಶ್ ಡಿ.ವಿ., ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಜಿಗಣೇಹಳ್ಳಿ ನೀಲಕಂಠಪ್ಪ, ಜೋಡಿತಿಮ್ಮಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಎಲ್‌. ಆನಂದ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಸವಿತಾ ರಮೇಶ್, ಹಸಿರು ಸೇನೆ ಜಿಲ್ಲಾ ಉಪಾಧ್ಯಕ್ಷ ನಾಗರಾಜ್, ಬಾಲಕೃಷ್ಣ, ನಿ. ಕರ್ನಲ್ ಆನಂದ್, ನಿವೃತ್ತ ಸೈನಿಕರ ಜಿಲ್ಲಾ ಸಂಘದ ಕರ್ನಲ್ ಕೃಷ್ಣೇಗೌಡ, ಕೆ.ಆರ್. ರೇವಣ್ಣ ಹಾಗೂ ತಾಲ್ಲೂಕು ಸಂಘದ ಚಂದ್ರಪ್ಪ ಸೇರಿದಂತೆ ಮಾಜಿ ಯೋಧರು, ಕಂದಾಯ ಇಲಾಖೆ ಅಧಿಕಾರಿಗಳು, ಸರ್ಕಾರಿ ಮತ್ತು ಖಾಸಗಿ ಶಾಲೆಯ ಮಕ್ಕಳು, ಶಿಕ್ಷಕ ವೃಂದದವರು, ಗ್ರಾಮಸ್ಥರು ಮತ್ತು ಗಣ್ಯರು ಶ್ರದ್ಧಾಂಜಲಿ ಅರ್ಪಿಸಿ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.

ನಾಯಬ್‌ ಸುಬೇದಾರ್ ಶಿವಚರಣ್ ಜಿ.ಕೆ ಮಾತನಾಡಿ, ‘ಗಿರೀಶ್ ತಮ್ಮ ಜತೆಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದು, ಜೈಪುರದಿಂದ ಬೆಂಗಳೂರಿಗೆ ಬಂದು ವಿಮಾನ ನಿಲ್ದಾಣದಲ್ಲಿಯೇ ಯೋಧನಿಗೆ ರಾಷ್ಟ್ರಧ್ವಜ ಹೊದಿಸಿ, ರೀತಿಂಗ್‌ ಸೆರೆಮನಿ ಗೌರವವನ್ನೂ ಸಲ್ಲಿಸಲಾಗಿದೆ. ಬೆಂಗಳೂರಿನಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಮೃತ ಯೋಧನ ಸ್ವಗೃಹವಿದ್ದಲ್ಲಿ, ಬೆಟಾಲಿಯನ್‌ನ ಎಲ್ಲ ಅಧಿಕಾರಿಗಳು ಬಂದು ಅಲ್ಲಿಯೇ ಗೌರವ ಸಲ್ಲಿಸುವುದು ಪದ್ಧತಿ. ಆದರೆ, ಈ ಗ್ರಾಮ ದೂರವಿರುವ ಕಾರಣ ಎಲ್ಲ ಸರ್ಕಾರಿ ಗೌರವವನ್ನು ವಿಮಾನ ನಿಲ್ದಾಣದಲ್ಲಿಯೇ ಸಲ್ಲಿಸಿ ಬೀಳ್ಕೊಡಲಾಗಿದೆ’ ಎಂದು ತಿಳಿಸಿದರು.

ಗ್ರಾಮಸ್ಥರು ಪಟಾಕಿ ಸಿಡಿಸಿ, ವಾದ್ಯಮೇಳದೊಂದಿಗೆ ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಗಿರೀಶ್ ಅಮರ್‌ ರಹೇ…. ಘೋಷಣೆಯನ್ನು ಕೂಗುತ್ತಾ, ತೋಟದಲ್ಲಿ ಮೃತದೇಹವನ್ನು ತೆಗೆದುಕೊಂಡು ಹೋದ ನಂತರ ಸಂಪ್ರದಾಯದ ವಿಧಿ ವಿಧಾನಗಳನ್ನು ನೆರವೇರಿಸಿ ಶುಕ್ರವಾರ ಮಧ್ಯಾಹ್ನದ ವೇಳೆಗೆ ಅಂತ್ಯಕ್ರಿಯೆ ನಡೆಸಲಾಯಿತು.

Funeral of deceased Wireless Experimental Unit Naib Girish

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...