Home namma chikmagalur chikamagalur ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ ಸ್ವಾಗತ
chikamagalurHomeLatest Newsnamma chikmagalur

ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ ಸ್ವಾಗತ

Share
Share

ಕಾಂಗ್ರೆಸ್ ಸರ್ಕಾರ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ ಮಾಡುವ ಮೂಲಕ ಅಂಬೇಡ್ಕರ್ ಅವರ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡಿದೆ ಎಂದು ಕೆಪಿಸಿಸಿ ಸಂಶೋಧನಾ ವಿಭಾಗದ ಜಿಲ್ಲಾ ಅಧ್ಯಕ್ಷ ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು, ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಆಶಯಗಳನ್ನು ಮತ್ತು ಬಸವಣ್ಣನವರ ಅನುಭಾವ ಮಂಟಪದ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಮಸೂದೆಯು ಮಹತ್ವಪೂರ್ಣ ನಿರ್ಧಾರವಾಗಿದೆ ಎಂದಿದ್ದಾರೆ.

ಈ ಮಸೂದೆಯು ಗ್ರಾಮ ಅಥವಾ ಸಮುದಾಯದಿಂದ ಹೊರ ಹಾಕುವುದು, ಧಾರ್ಮಿಕ, ಸಾರ್ವಜನಿಕ ಸ್ಥಳಗಳ ಬಳಕೆಗೆ ನಿರ್ಬಂಧ ವಿಧಿಸುವುದು, ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿ ಮಾಡುವುದು, ವ್ಯವಹಾರ ಅಥವಾ ಉದ್ಯೋಗ ತಿರಸ್ಕಾರ ಮಾಡುವಂತಿಲ್ಲ.

ಶಾಲೆ, ಆಸ್ಪತ್ರೆ, ಸಮುದಾಯ ಭವನಗಳ ಪ್ರವೇಶಕ್ಕೆ ತಡೆಯೊಡ್ಡುವುದು, ಸೇವೆಗಳು, ಅವಕಾಶಗಳನ್ನು ನಿರಾಕರಿಸುವುದು, ಸಾಮಾಜಿಕ–ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ತಡೆಯೊಡ್ಡುವುದು,ಮದುವೆ, ಅಂತ್ಯಕ್ರಿಯೆಗಳಲ್ಲಿ ಭಾಗವಹಿಸುವುದಕ್ಕೆ ತಡೆಯೊಡ್ಡುವುದು, ವ್ಯಾಪಾರ, ಸಾಮಾಜಿಕ ಸಂಬಂಧಗಳಿಗೆ ತಡೆಯೊಡ್ಡುವುದು, ಮಕ್ಕಳನ್ನು ಒಟ್ಟಿಗೆ ಆಡಲು ಅಡ್ಡಿ ಪಡಿಸುವುದು, ಲಿಂಗತ್ವದ ಆಧಾರದ ಮೇಲೆ ಭೇದ ಮಾಡುವುದು, ಮಾನವ ಹಕ್ಕುಗಳನ್ನು ನಿರಾಕರಿಸುವುದು, ಬಟ್ಟೆ, ಭಾಷೆ, ಸಾಂಸ್ಕೃತಿಕ ಭೇದ ಎಸಗುವುದನ್ನು ಈ ಪ್ರಸ್ತಾಪಿತ ಮಸೂದೆಯಡಿ ನಿಷೇಧಿಸಲಾಗಿದೆ.

ಇದು ಸಮಾಜದ ಎಲ್ಲಾ ವರ್ಗಗಳಿಗೂ ಅನ್ವಯಿಸುವುದರಿಂದ ಪದೇ ಪದೇ ಬಹಿಷ್ಕಾರಕ್ಕೆ ಒಳಗಾಗುವ ಸಣ್ಣ ಸಾಮಾಜಿಕ ಸಮುದಾಯಗಳು ಸೇರಿದಂತೆ ಎಲ್ಲರಿಗೂ ಸದುಪಯೋಗವಾಗಲಿದೆ ಎಂದು ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡಿಸಿರುವುದಕ್ಕೆ ನಮ್ಮ ಸರ್ಕಾರಕ್ಕೆ ಅಭಿನಂದನೆಗಳು

Welcome introduction of social boycott ban bill

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...