Home namma chikmagalur chikamagalur ನಿವೃತ್ತ ಶಿಕ್ಷಕರ ಸ್ನೇಹ ಸಮ್ಮೀಲನ
chikamagalurHomeLatest Newsnamma chikmagalur

ನಿವೃತ್ತ ಶಿಕ್ಷಕರ ಸ್ನೇಹ ಸಮ್ಮೀಲನ

Share
Share

ಚಿಕ್ಕಮಗಳೂರು: ನಗರದ ಗೃಹಮಂಡಳಿ ಬಡಾವಣೆಯ ಟೀಚರ್ಸ್ ಲೇಔಟ್ ನಲ್ಲಿ ನಿವೃತ್ತ ಸರ್ಕಾರಿ ಶಿಕ್ಷಕರ ಸ್ನೇಹ ಸಮ್ಮೀಲನ ಕಾರ್ಯಕ್ರಮವು ಅತ್ಯಂತ ಅರ್ಥಪೂರ್ಣವಾಗಿ ನಡೆಯಿತು. ಯಗಟಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲ ಎಸ್.ಆರ್. ಓಂಕಾರಪ್ಪನವರ ‘ಸದ್ಗುರು’ ನಿವಾಸದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಿಂದಿಗೆರೆಯ ಓಂಕಾರಪ್ಪನವರು ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಾಗಿ, ಕಾರ್ಯಾರಂಭ ಮಾಡಿ, ಕಾಲೇಜಿನ ಉಪಪ್ರಾಂಶುಪಾಲರಾಗಿ ನಿವೃತ್ತರಾದವರು. ಸದ್ಯ ಗೃಹಮಂಡಳಿ ಬಡಾವಣೆಯ ಟೀಚರ್ಸ್ ಲೇಔಟ್ ನಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದು, ತಮ್ಮೊಂದಿಗೆ ಕಾರ್ಯನಿರ್ವವಹಿಸಿದ ಎಲ್ಲ ಸಹದ್ಯೋಗಿಗಳನ್ನು ಆತ್ಮೀಯವಾಗಿ ಆಹ್ವಾನಿಸಿ ಅವರನ್ನು ಆದರ ಪೂರ್ವಕವಾಗಿ ಗೌರವಿಸಿದರು.

ʻಶಿಕ್ಷಕರ ಬೋಧನೆ ಮಕ್ಕಳ ಹೃದಯ ಮುಟ್ಟುವಂತಿರಲಿʼ

ನಿವೃತ್ತ ಶಿಕ್ಷಕರು ತಮ್ಮ ಸೇವಾ ದಿನಗಳ ಸಹದ್ಯೋಗಿಗಳನ್ನು ಕಾರ್ಯಕ್ರಮದ ಮೂಲಕ ಭೇಟಿ ಮಾಡಿದರು. ಹಳೆಯ ನೆನಪುಗಳನ್ನು ಮೆಲುಕು ಹಾಕಿದರು. ಹಾಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಕೂಡ ಭಾಗವಹಿಸಿ, ತಮ್ಮ ಹಿರಿಯರಿಗೆ ಗೌರವ ನಮನ ಸಲ್ಲಿಸಿದರು. ಮಕ್ಕಳಿಗೆ ಗುರುಗಳು ನೀಡುವ ಬೋಧನೆ ಕೇವಲ ನೆನಪಿನಲ್ಲಿ ಉಳಿಯದೆ ಅದು ಹೃದಯ ಮುಟ್ಟುವಂತಿರಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಯಗಟಿಯ ವೈ.ಕೆ. ರಂಗಪ್ಪ, ನೀಲನಹಳ್ಳಿಯ ಎನ್.ಎಚ್. ಮಾಳಪ್ಪ, ಹೊಸದುರ್ಗದ ಹನುಮಂತಪ್ಪ, ದಾವಣಗೆರೆ ಎಪಿಎಂಸಿ ನಿವೃತ್ತ ನೌಕರರಾದ ಪರಮೇಶ್ವರಪ್ಪ ಕೊಂಡಜ್ಜಿ, ದಾವಣಗೆರೆಯ ಪ್ರೌಢಶಾಲಾ ಮುಖ್ಯ ಶಿಕ್ಷಕ ಹನುಮಂತಪ್ಪ, ಶಿಕ್ಷಕ ಲೋಕೇಶ್ ಸೇರಿದಂತೆ ಇನ್ನಿತರ ನಿವೃತ್ತ ಶಿಕ್ಷಕರು ಮತ್ತು ಅಧಿಕಾರಿಗಳನ್ನು ಗೌರವಿಸಲಾಯಿತು.

ಇದೇ ವೇಳೆ ಉಪಪ್ರಾಂಶುಪಾಲರಾಗಿ ನಿವೃತ್ತರಾದರೂ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಮೂಲಕ ಎಂ.ಎ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ 4ನೇ ರ್ಯಾಂಕ್ ಪಡೆದು ಚಿಕ್ಕಮಗಳೂರು ಜಿಲ್ಲೆಗೆ ಕೀರ್ತಿ ತಂದ ಎಸ್. ಆರ್. ಓಂಕಾರಪ್ಪ- ದಂಪತಿಯನ್ನು ಗೌರವಿಸಲಾಯಿತು. ಸ್ನೇಹಿತರು ಮತ್ತು ಸಂಬಂಧಿಕರು ಕೂಡ ಅಭಿನಂದಿಸಿದರು. ನಂತರ ಅತಿಥಿಗಳಿಗೆ ಔತಣಕೂಟವನ್ನು ಏರ್ಪಡಿಸಲಾಗಿತ್ತು.

Retired Teachers’ Friendship Gathering

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...