Home Crime News ಸಾಲಬಾಧೆಗೆ ಬೀರೂರಿನಲ್ಲಿ ರೈತ ಆತ್ಮಹತ್ಯೆ
Crime NewsHomeKadurLatest Newsnamma chikmagalur

ಸಾಲಬಾಧೆಗೆ ಬೀರೂರಿನಲ್ಲಿ ರೈತ ಆತ್ಮಹತ್ಯೆ

Share
Share
ಬೀರೂರು: ಕೃಷಿ ಚಟುವಟಿಕೆಗಳಿಗೆ ಮಾಡಿದ್ದ ಸಾಲ ತೀರಿಸಲು ಸಾಧ್ಯವಾಗದೇ ರೈತನೊಬ್ಬ ನೇಣಿಗೆ ಶರಣಾದ ಘಟನೆ ಬೀರೂರು ಸಮೀಪದ ದೋಗಿಹಳ್ಳಿಯಲ್ಲಿ ವರದಿಯಾಗಿದೆ.

ಮೂಲತಃ ಜೋಡಿತಿಮ್ಮಾಪುರದವರಾದ ಮಧು ಆರ್‌. (29) ಮೃತಪಟ್ಟ ರೈತ. ಗ್ರಾಮದಲ್ಲಿ ಕೃಷಿ ಜಮೀನಿದ್ದು ಮಧು ಕೃಷಿ ಕೆಲಸ ಮಾಡಿಕೊಂಡಿದ್ದರು.

ಜತೆಗೆ ದೋಗಿಹಳ್ಳಿಯಲ್ಲಿನ ಮಾವನ ಕುಟುಂಬದಲ್ಲಿನ ಜಮೀನುಗಳನ್ನು ಕೂಡ ನಿರ್ವಹಣೆ ಮಾಡುತ್ತಿದ್ದರು. ಕೃಷಿ ಚಟುವಟಿಕೆಗಾಗಿ ಹಣಕಾಸು ಸಂಸ್ಥೆ, ಮೈಕ್ರೊ ಫೈನಾನ್ಸ್‌ಗಳಲ್ಲಿ ಸೇರಿದಂತೆ ಗ್ರಾಮಸ್ಥರಿಂದಲೂ ಕೈಸಾಲ ಪಡೆದಿದ್ದರು.

ದೋಗಿಹಳ್ಳಿಗೆ ಬಂದಿದ್ದ ಮಧು ಸೋಮವಾರ ರಾತ್ರಿ ಜೋಡಿತಿಮ್ಮಾಪುರಕ್ಕೆ ಹೋಗಿ ಬರುವುದಾಗಿ ತಿಳಿಸಿ ಹೊರಗೆ ಬಂದಿದ್ದರು. ಮಂಗಳವಾರ ಬೆಳಿಗ್ಗೆ ಮೃತನ ಅತ್ತೆ ಸಾಕಮ್ಮ ಮನೆಯ ಹಿಂದಿನ ಶೆಡ್‌ನಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿರುವ ಸ್ಥಿತಿಯಲ್ಲಿ ಮಧು ಅವರ ಶವ ಪತ್ತೆಯಾಗಿದೆ.

ಪತ್ನಿ ಅಶ್ವಿನಿ ನೀಡಿದ ದೂರಿನ ಅನುಸಾರ ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Farmer commits suicide in Birur due to debt

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...