Home namma chikmagalur chikamagalur ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ
chikamagalurCrime NewsHomeLatest Newsnamma chikmagalur

ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ

Share
Share

ಚಿಕ್ಕಮಗಳೂರು: ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಅಜ್ಜಂಪುರ ಸಮೀಪದ ಗ್ರಾಮವೊಂದರ ನಿವಾಸಿಗೆ 20 ವರ್ಷ ಕಠಿಣ ಸಜೆ ವಿಧಿಸಿ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪೋಕ್ಸೋ ಎಫ್‌ಟಿಎಸ್‌ಈ-1 ನ್ಯಾಯಾಲಯವು ತೀರ್ಪು ನೀಡಿದೆ.

ಶಾಂತಕುಮಾರ ಎಂಬಾತ ಶಿಕ್ಷೆಗೆ ಒಳಗಾದ ಆರೋಪಿ. ಕಳೆದ ಫೆಬ್ರವರಿ 7 ರಂದು ಸಂಜೆ ಈ ಘಟನೆ ನಡೆದಿದ್ದು, ಆರೋಪಿಯು 15 ವರ್ಷದ ಆ ಬಾಲಕಿಯನ್ನು ತನ್ನ ದನದ ಕೊಟ್ಟಿಗೆಗೆ ಬಲವಂತವಾಗಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಆಕೆ ಮನೆ ಬಳಿ ಕಾಣಿಸದೇ ಇದ್ದಾಗ ಅನುಮಾನಗೊಂಡ ಆಕೆಯ ತಂದೆ ಹುಡುಕಾಡುತ್ತಿದ್ದಾಗ ಈ ಬಾಲಕಿ ಶಾಂತಕುಮಾರನ ಮನೆ ಕಡೆಯಿಂದ ಅಳುತ್ತಾ ಬರುತ್ತಿದ್ದಳೆನ್ನಲಾಗಿದೆ.

ಆಕೆಯ ಬಟ್ಟೆ ಕೊಳೆಯಾಗಿತ್ತು. ತಲೆಗೆ ಮಣ್ಣಾಗಿತ್ತಲ್ಲದೆ, ಮೂಗಿನಿಂದ ರಕ್ತ ಬರುತ್ತಿತ್ತೆನ್ನಲಾಗಿದೆ. ಆಕೆಯನ್ನು ವಿಚಾರಿಸಿ ಮಾಹಿತಿ ಪಡೆದ ತಂದೆ ಬಾಲಕಿಯನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂದರ್ಭದಲ್ಲಿ ಆಕೆಯ ಮೇಲೆ ಬಲತ್ಕಾರ ಆಗಿರುವುದನ್ನು ದೃಢಪಡಿಸಿ ವೈದ್ಯರು ವರದಿ ನೀಡಿದ್ದು, ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಪ್ರಕರಣ ದಾಖಲಿಸಿದ ಇನ್ಸ್‌ಪೆಕ್ಟರ್ ಎನ್.ವೀರೇಂದ್ರ ಹಾಗೂ ಸಿಬ್ಬಂದಿ ಕೃತ್ಯದ ಸಂಬಂಧ ಸಾಕ್ಷ್ಯ ಸಂಗ್ರಹಿಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಆರೋಪಿಯ ವಿರುದ್ಧದ ಆಪಾದನೆಗಳು ಸಾಬೀತಾದ್ದರಿಂದ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪೋಕ್ಸೋ ಎಫ್‌ಟಿಎಸ್‌ಈ-1 ನ್ಯಾಯಾಲಯದ ನ್ಯಾಯಾಧೀಶರಾದ ರಾಘವೇಂದ್ರ ಗುರುಪ್ರಸಾದ್ ಕುಲಕರ್ಣಿ ಅವರು ಆರೋಪಿಗೆ ಪೋಕ್ಸೋ ಕಾಯ್ದೆಯ ಕಲಂ 6 ರೆ/ವಿ ಬಿಎನ್‌ಎಸ್ ಕಲಂ 65(1)ರಡಿಯಲ್ಲಿ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ, ಕಲಂ 64(2)(ಕೆ)ರಡಿಯಲ್ಲಿ 10 ವರ್ಷ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ, ಕಲಂ 127 (2) ರಡಿಯಲ್ಲಿ ಒಂದು ವರ್ಷ ಕಠಿಣ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಭರತ್ ಕುಮಾರ್ ಅವರು ವಾದ ಮಂಡಿಸಿದ್ದರು.

Rape accused gets 20 years rigorous imprisonment

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ

ಕೊಟ್ಟಿಗೆಹಾರ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ...

ತೀವ್ರಗೊಂಡ ಉದ್ಯಮಿ ಪತ್ನಿಯ ಆತ್ಮಹತ್ಯೆ ಪ್ರಕರಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದ್ದು ನಗರದ ಉದ್ಯಮಿ ರಾಜೇಶ್ ಅವರ ಪತ್ನಿ ಸುಮ (55) ಆಲೇನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಅವರು...

Related Articles

ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ-ದಂಡ

ಚಿಕ್ಕಮಗಳೂರು: ಅಪ್ರಾಪ್ತೆಯೊಬ್ಬಳು ಗರ್ಭಿಣಿಯಾಗಲು ಕಾರಣನಾದ ಆರೋಪಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ಎಫ್.ಟಿ.ಎಸ್.ಈ-೧ರ...

ನರೇಂದ್ರ ಮೋದಿ ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ

ಚಿಕ್ಕಮಗಳೂರು : ಸಾರ್ವತ್ರಿಕ ಚುನಾವಣೆಗಳ ಮೂಲಕ ಭಾರತದ ಅತಿ ಹೆಚ್ಚುಕಾಲ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ...

ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು

  ಚಿಕ್ಕಮಗಳೂರು : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್ ಅವರ ಅಧಿಕಾರ ಸ್ವೀಕಾರ ಸಮಾರಂಭ...

ವಿದ್ಯುತ್ ಕ್ಷೇತ್ರ ಖಾಸಗಿಕರಣಕ್ಕೆ ರೈತ ಸಂಘ ವಿರೋಧ

ಚಿಕ್ಕಮಗಳೂರು : ವಿದ್ಯುತ್ ಕ್ಷೇತ್ರವನ್ನು ಟಾಟಾ ಪವರ್ ಕಂಪನಿಗೆ ನೀಡುವ ಮೂಲಕ ಖಾಸಗಿಕರಣಗೊಳಿಸುವ ನಿರ್ಧಾರವನ್ನು ಖಂಡಿಸುವುದಾಗಿ...