Home namma chikmagalur chikamagalur ನಗರದ ಡಾಂಬರೀಕರಣ ಕಳಪೆ ಕಾಮಗಾರಿ-ಕ್ರಮಕ್ಕೆ ಆಗ್ರಹ
chikamagalurLatest Newsnamma chikmagalur

ನಗರದ ಡಾಂಬರೀಕರಣ ಕಳಪೆ ಕಾಮಗಾರಿ-ಕ್ರಮಕ್ಕೆ ಆಗ್ರಹ

Share
Share

ಚಿಕ್ಕಮಗಳೂರು: ನಗರದಲ್ಲಿ ಸುಮಾರು ೧೮ ಕೋಟಿ ರೂ. ವಿಶೇಷ ಅನುದಾನದಲ್ಲಿ ನಡೆಯುತ್ತಿರುವ ಪ್ರಮುಖ ರಸ್ತೆಗಳ ಡಾಂಬರೀಕರಣ ನಡೆಯುತ್ತಿದ್ದು, ಕಳಪೆ ಕಾಮಗಾರಿ ಕೈಗೊಳ್ಳುವ ಮೂಲಕ ಶಾಸಕ ಹೆಚ್.ಡಿ. ತಮ್ಮಯ್ಯನವರ ಪರಿಶ್ರಮವನ್ನು ಗುತ್ತಿಗೆದಾರರು ಹಾಳುಮಾಡುತ್ತಿದ್ದಾ ಎಂದು ಮಾಜಿ ನಗರಸಭಾಧ್ಯಕ್ಷ ವರಸಿದ್ದಿ ವೇಣುಗೋಪಾಲ್ ತಿಳಿಸಿದ್ದಾರೆ.

ಇಂದು ನಗರದ ಕಿರಣ್ ಬೇಕರಿ ಪಕ್ಕದ ಗೌರಿಕಾಲುವೆಗೆ ಸಂಪರ್ಕ ಕಲ್ಪಸುವ ರಸ್ತೆಯಲ್ಲಿ ನಡೆಯುತ್ತಿದ್ದ ಡಾಂಬರೀಕರಣ ಕಾಮಗಾರಿಯನ್ನು ವೀಕ್ಷಿಸಿದ ಅವರು, ಕಳಪೆ ಕಾಮಗಾರಿ ನಡೆಯುತ್ತಿರುವ ಬಗ್ಗೆ ಇಂಜಿನಿಯರ್ ಹಾಗೂ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.

ಕಳಪೆ ಕಾಮಗಾರಿ ನಡೆಯುತ್ತಿರುವ ಕುರಿತು ಈಗಾಗಲೇ ದೂರವಾಣಿ ಮೂಲಕ ಶಾಸಕರ ಗಮನಕ್ಕೆ ತರಲಾಗಿದ್ದು, ಪದೇ ಪದೆ ಕಳಪೆ ಕಾಮಗಾರಿ ನಡೆಯುತ್ತಿರುವ ಬಗ್ಗೆ ಆಯಾ ವಾರ್ಡಿನ ಸದಸ್ಯರ ಗಮನ ಸೆಳೆದು ಉತ್ತಮ ಕಾಮಗಾರಿಗೆ ಒತ್ತಾಯ ತರುವಂತೆ ಸೂಚಿಸಿದ್ದೇವೆಂದು ತಿಳಸಿದರು.

ಈ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಶಾಶ್ವತ ಕಾಮಗಾರಿ ನಡೆಸಿ ಗುಣಮಟ್ಟ ಕಾಪಾಡಬೇಕೆಂದು ತಾಕೀತು ಮಾಡಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರುಗಳಾದ ಸಿ.ಪಿ ಲಕ್ಷ್ಮಣ, ಪರಮೇಶ್, ಲಕ್ಷ್ಮಣ, ಅರುಣ, ರಾಜು ಮತ್ತಿತರರು ಭಾಗವಹಿಸಿದ್ದರು.

Asphalting of the city calls for poor work-order

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...