Home namma chikmagalur ajjampura ತರೀಕೆರೆ-ಅಜ್ಜಂಪುರ ತಾಲ್ಲೂಕಿನಲ್ಲಿ ಚಿರತೆ ಹಾವಳಿಗೆ ನಲುಗಿದ ಜನತೆ
ajjampuraHomeLatest Newsnamma chikmagalurTarikere

ತರೀಕೆರೆ-ಅಜ್ಜಂಪುರ ತಾಲ್ಲೂಕಿನಲ್ಲಿ ಚಿರತೆ ಹಾವಳಿಗೆ ನಲುಗಿದ ಜನತೆ

Share
Share

ತರೀಕೆರೆ: ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಜನ ತತ್ತರಿಸುತ್ತಿದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತರೀಕೆರೆ ತಾಲ್ಲೂಕಿನ ತರೀಕೆರೆ ಪಟ್ಟಣದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಚಿರತೆ ಸಂಚಾರ ಮಾಡಿ ನಾಯಿಗಳನ್ನು ಭೇಟೆಯಾಡಿರುವುದು ಗಾಬರಿಗೆ ಕಾರಣವಾಗಿದೆ.

ತರೀಕೆರೆ ತಾಲ್ಲೂಕಿನ ಶಿವಪುರದಲ್ಲಿ ಬಾಲಕಿಯನ್ನು ತಿಂದು ತೇಗಿದ ಚಿರತೆ ಅರಣ್ಯ ಇಲಾಖೆ ಹಿಡಿದಿದೆ. ಆದರೆ ಮೊನ್ನೆ ಎ,ರಂಗಾಪುರದ ತೋಟದ ಮನೆಗೆ ಎಂಟ್ರಿ ಕೊಟ್ಟಿರುವ ಚಿರತೆ ನಾಯಿಯನ್ನು ಬಲಿ ಪಡೆದಿದೆ.

ತರೀಕೆರೆ ಪಟ್ಟಣದ ಸುತ್ತಮುತ್ತಲಿನ ಹಳ್ಳಗಳಲ್ಲಿ ಸಂಚಾರ ಮಾಡುತ್ತಿರುವ ಚಿರತೆಗಳ ಬಗ್ಗೆ ಜನ ಭಯ ಪಡುತ್ತಿದ್ದಾರೆ.ತರೀಕೆರೆ ಸುತ್ತಲಿನ ಹಳ್ಳಿಗಳಾದ ದೋರನಾಳ್,ಬೈರಾಪುರ,ಎ,ರಂಗಾಪುರ,ಎರೇಹಳ್ಳಿ,ಅತ್ತಿಗನಾಳ್,ಸುಣ್ಣದಹಳ್ಳಿ,ನಂದಿ,ಇನ್ನಿತರ ಹಳ್ಳಿಯಲ್ಲಿ ಜನ ಭಯ ಭೀತಿಯಿಂದ ಜೀವ ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.

ಅಜ್ಜಂಪುರ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇದೇ ಪರಿಸ್ಥಿತಿ ಇದೆ .ಅಜ್ಜಂಪುರ ಸುತ್ತಮುತ್ತಲಿನ ಹಳ್ಳಿಗಳಾದ ಮಲ್ಲೇನಹಳ್ಳಿ,ಎರೇಹೊಸರು,ನಾರಣಾಪುರ,ಬಗ್ಗವಳ್ಳಿ,ಅತ್ತಿಮೊಗ್ಗೆ ,ಹಣ್ಣೇ, ಗೌರಪುರ,ಮತ್ತಿತರ ಪ್ರದೇಶದಲ್ಲಿ ಚಿರತೆ ಸಂಚಾರ ಮಾಡಿರುವುದು ಸಿ.ಸಿ.ಕ್ಯಾಮರಾ ದಲ್ಲಿ ನೋಡಿರುವ ಜನತೆ ಸಂಜೆ ನಂತರ ಓಡಾಡಲು ಭಯ ಪಡುತ್ತಿದ್ದಾರೆ.ಅರಣ್ಯ ಇಲಾಖೆಗೆ ಬೆಂಕಿ ಬೀಳುವಂತೆ ಮಾಡಿರುವುದರಿಂದ ನಿಷ್ಕ್ರಿಯವಾಗಿವೆ ಎಂದು ಜನ ದೂರುತ್ತಿದ್ದಾರೆ.

ಅಧಿಕಾರ,ಹಣ ಎಂದು ಚಡಪಡಿಸುತ್ತಿರುವ ಜನಪ್ರತಿನಿಧಿಗಳಿರುವಾಗ ಜನ ಬಾಯಿ,ಬಾಯಿ ಬಡಿದು ಕೊಳ್ಳುತ್ತಿದ್ದಾರೆ ಕುಟುಂಬ, ಕುಟುಂಬ ಎನ್ನುವವರ ಬಾಯಿಗೆ ಚಿರತೆ,ಹುಲಿಗಿಂತ ಅಧಿಕಾರ, ಹಣ ಮುಖ್ಯ ಎನ್ನುವ ದುಸ್ಥಿತಿಗೆ ಮತದಾರರು ಪಶ್ಚಾತ್ತಾಪ ಪಡುತ್ತಿದ್ದಾರೆ ನಲುಗುತ್ತಿದ್ದಾರೆ, ಮತದಾರರು ಮತ್ತು ಜನರಿಗಿಂತ ಚಿರತೆಗಳು ಸಂಚಾರ ಮಾಡುತ್ತಿವೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳುತ್ತ ಇದ್ದಾರೆ.ಇಂತಹ ದುಸ್ಥಿತಿ ತರೀಕೆರೆ ಕ್ಷೇತ್ರದಲ್ಲಿ ಇದೆ.

Leopard attacks Tarikere-Ajjampura taluk four people injured

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...