Home namma chikmagalur chikamagalur ಡಿ.ಸಿ.ಸಿ.ಬ್ಯಾಂಕ್ ಚುನಾವಣೆ : ಕಾಂಗ್ರೆಸ್ ಜೀರೋ? ಬಿಜೆಪಿಯಲ್ಲಿ ಒಡೆದ ಹಾಲು!
chikamagalurHomeLatest Newsnamma chikmagalur

ಡಿ.ಸಿ.ಸಿ.ಬ್ಯಾಂಕ್ ಚುನಾವಣೆ : ಕಾಂಗ್ರೆಸ್ ಜೀರೋ? ಬಿಜೆಪಿಯಲ್ಲಿ ಒಡೆದ ಹಾಲು!

Share
Share

ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಲಾಗಿದೆ.ನಾಮ ಪತ್ರ ಸಲ್ಲಿಸಲು ಜನವರಿ ಒಂಬತ್ತು ಕೊನೆಯ ದಿನ ಜನವರಿ 17 ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ನಿಂತ್ರಾಣಗೊಂಡಿದೆ ಎಂದು ತಿಳಿದರು ಕೂಡ ಸರ್ಕಾರ ಇರುವುದರಿಂದ ಏನು ಬೇಕಾದರೂ ಆಗಬಹುದು.

ಟಿ.ಎ.ಪಿ.ಸಿ.ಎಂ.ಎಸ್.ನಿಂದ ನಿರ್ದೇಶಕರಾಗಿ ಬರಲು ಕಡೂರು ಶಾಸಕ ಆನಂದ್ ತಯಾರಿ ನಡೆಸಿದ್ದಾರೆ.ಇನ್ನುಳಿದಂತೆ ಜೀರೋ ಆಗಿದ್ದಾರೆ. ಆದರೂ ನಿರ್ಲಕ್ಷ್ಯ ಮಾಡುವಂತಿಲ್ಲ. ಬಿಜೆಪಿಯಲ್ಲೂ ಒಡೆದ ಹಾಲಿನಂತಾಗಿದೆ.ತರೀಕೆರೆ, ಮೂಡಿಗೆರೆ, ಕಡೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಅವಕಾಶ ಹೆಚ್ಚಿದೆ. ಜನತಾದಳದ ಜೊತೆಗೆ ಹೊಂದಾಣಿಕೆ ಚಿಕ್ಕಮಗಳೂರು ಮತ್ತು ಕೊಪ್ಪ,ಶೃಂಗೇರಿ.ಎನ್.ಆರ್.ಪುರದಲ್ಲಿ ತಂತಿ ಮೇಲೆ ನಡೆಯ ಬೇಕಾಗಿದೆ.

ಇತರೆ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ತೀವ್ರ ಪೈಪೋಟಿ ನಡೆದಿದೆ.ಹಾಲಿ ಸದಸ್ಯ ರಮೇಶ್ ಜೊತೆಗೆ ಹದಿಮೂರು ಜನ ಅರ್ಜಿ ಹಾಕಿರುವುದು ತಲೆನೋವು ತಂದಿದೆ.ಇನ್ನೂ ಹಾಲು ಉತ್ಪಾದಕ ಕ್ಷೇತ್ರದಲ್ಲಿ ಸೊನಾಲ್ ಮತ್ತು ಜಗದೀಶ್ ಮಧ್ಯೆ ಪೈಪೋಟಿ ಇರುವುದರಿಂದ ಒಡೆದ ಹಾಲಿನಂತೆ ಆಗಿರುವುದು ಬಿಜೆಪಿ ಮತ್ತು ದಳಕ್ಕೆ ತಲೆ ನೋವಾಗಿದೆ.

ಚಿಕ್ಕಮಗಳೂರು ಕ್ಷೇತ್ರದ ನಿರಂಜನ ಅವರಿಗೆ ಅವಕಾಶ ಮಾಡಿಕೊಡದಿದ್ದರೆ ಸಿ.ಟಿ.ರವಿಗೆ ತೊಡಕು ಖಚಿತ ಎನ್ನಲಾಗಿದೆ. ಹೀಗಾಗಿ ಬೋಜೇಗೌಡರ ಹುಕುಂಗಾಗಿ ಕಾಯುತ್ತಿದ್ದಾರೆ.ಬಿಜೆಪಿ ಕೋರ್ ಕಮಿಟಿಯ ಸಭೆಯಲ್ಲಿ ಅಂತಿಮವಾಗಿ ನಿರ್ಧಾರಕ್ಕೆ ಬರುಲಾಗಿಲ್ಲಾ ಎಂದರೆ ಎಲ್ಲವೂ ಸರಿಯಿಲ್ಲ ಎಂದು ಹಳ್ಳಿ ಗಮಾರರಿಗೂ ಆರ್ಥವಾಗುತ್ತದೆ.ರಮೇಶ್, ನಿರಂಜನ, ಸತೀಶ್ ,ಜಗದೀಶ್ ,ಸೊನಾಲ್ ಭವಿಷ್ಯ ಬೋಜೇಗೌಡರ ತೀರ್ಮಾನದ ಮೇಲೆ ನಿಂತಿದೆ.

DCC Bank Election: Congress Zero? BJP’s milk is broken!

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...