Home namma chikmagalur chikamagalur ಹೊರರಾಜ್ಯದವರಿಗೆ ಮನೆ ನಿರ್ಮಿಸದಂತೆ ಕನ್ನಡಸೇನೆ ಮನವಿ
chikamagalurHomeLatest Newsnamma chikmagalur

ಹೊರರಾಜ್ಯದವರಿಗೆ ಮನೆ ನಿರ್ಮಿಸದಂತೆ ಕನ್ನಡಸೇನೆ ಮನವಿ

Share
Share

ಚಿಕ್ಕಮಗಳೂರು: ಕರ್ನಾಟಕದ ನಿವಾಸಿಗಳನ್ನು ಹೊರತಾಗಿ ಹೊರರಾಜ್ಯದ ವಲಸಿಗರಿ ಗೆ ರಾಜ್ಯಸರ್ಕಾರ ಮನೆಗಳ ನಿರ್ಮಿಸಬಾರದು ಎಂದು ಆಗ್ರಹಿಸಿ ಜಿಲ್ಲಾ ಕನ್ನಡಸೇನೆ ಕಾರ್ಯಕರ್ತರು ಗುರು ವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ರಾಜ್ಯದಲ್ಲಿ ಸುಮಾರು ಎರಡು ವರ್ಷ ಳಿಂದ ಮಳೆಯ ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಮನೆಯನ್ನು ನಿರ್ಮಿಸಿಕೊಡದೇ ಕೇರಳದಿಂ ದ ಬಂದಿರುವ ಮುಸ್ಲೀಂ ವಲಸಿಗರಿಗೆ ಮನೆ ನಿರ್ಮಿಸುವುದು ಖಂಡನೀಯ ಎಂದರು.

ರಾಜ್ಯದಲ್ಲೇ ಹಲವೆಡೆ ಅತಿವೃಷ್ಟಿ ಪರಿಣಾಮ ಸ್ವಂತ ಮನೆ ಕಳೆದುಕೊಂಡವರು ಬಹಳಷ್ಟು ಮಂದಿಗಳ ನಡುವೆ ೨೦೦ ವಲಸಿಗರಿಗೆ ಬೆಂಗಳೂರು ನಗರದಲ್ಲಿ ಪ್ರತಿ ಮನೆಗೆ ೧೧.೨೦ ಲಕ್ಷ ರೂ.ಗಳನ್ನು ವ್ಯಯಿಸಿ ಮನೆ ಕಟ್ಟಿಸಲು ಮುಂದಾಗಿ ಸ್ಥಳೀಯ ನಿವಾಸಿಗಳಿಗೆ ರಾಜ್ಯಸರ್ಕಾರ ದ್ರೋಹವೆಸಗುತ್ತಿದೆ ಎಂದು ದೂರಿದರು.

ಕೂಡಲೇ ರಾಜ್ಯಸರ್ಕಾರ ಕೇರಳದಿಂದ ಬಂದಿರುವ ಮುಸ್ಲೀಂ ವಲಸಿರಿಗೆ ಮನೆಗಳನ್ನು ನಿರ್ಮಿಸಿಕೊ ಡಬಾರದು. ರಾಜ್ಯದಲ್ಲಿ ಜನಿಸಿ ಅನೇಕ ವರ್ಷಗಳಿಂದ ಬದುಕುತ್ತಿರುವ ಸ್ಥಳೀಯ ಮುಸ್ಲೀಂ ಬಾಂಧವರಿಗೆ ಮನೆ ಕಟ್ಟಿಕೊಡಲು ಅಭ್ಯಂತರವಿಲ್ಲ. ಆದರೆ ಹೊರರಾಜ್ಯದವರಿಗೆ ಸವಲತ್ತು ಕಲ್ಪಿಸಬಾರದು ಎಂದರು.

ರಾಜ್ಯಸರ್ಕಾರ ಒಂದು ವೇಳೆ ಹೊರರಾಜ್ಯದ ನಿವಾಸಿಗಳಿಗೆ ಮನೆ ನಿರ್ಮಿಸಲು ಮುಂದಾದರೆ ಕನ್ನಡ ಸೇನೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವ ಮೂಲಕ ಸದಾ ಕನ್ನಡಿಗರ ಪರವಾ ಗಿ ನಿಲ್ಲುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕನ್ನಡಸೇನೆ ಆಟೋ ಘಟಕದ ಅಧ್ಯಕ್ಷ ಜಯಪ್ರಕಾಶ್, ನಗರಾಧ್ಯಕ್ಷ ಸತೀಶ್, ಉಪಾಧ್ಯಕ್ಷ ಸಂಜೀವ್, ಮುಖಂಡರುಗಳಾದ ಅನ್ವರ್, ಶಂಕರೇಗೌಡ, ಚಂದ್ರಶೇಖರ್, ರೋಷನ್, ದಾಕ್ಷಯಿ ಣಿ, ಹಬೀಬ್, ಪಾಲಾಕ್ಷ ಮತ್ತಿತರರು ಉಪಸ್ಥಿತರಿದ್ದರು.

Kannada Sena appeals not to build houses for out-of-state residents

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...