Home namma chikmagalur chikamagalur ಹೊರರಾಜ್ಯದವರಿಗೆ ಮನೆ ನಿರ್ಮಿಸದಂತೆ ಕನ್ನಡಸೇನೆ ಮನವಿ
chikamagalurHomeLatest Newsnamma chikmagalur

ಹೊರರಾಜ್ಯದವರಿಗೆ ಮನೆ ನಿರ್ಮಿಸದಂತೆ ಕನ್ನಡಸೇನೆ ಮನವಿ

Share
Share

ಚಿಕ್ಕಮಗಳೂರು: ಕರ್ನಾಟಕದ ನಿವಾಸಿಗಳನ್ನು ಹೊರತಾಗಿ ಹೊರರಾಜ್ಯದ ವಲಸಿಗರಿ ಗೆ ರಾಜ್ಯಸರ್ಕಾರ ಮನೆಗಳ ನಿರ್ಮಿಸಬಾರದು ಎಂದು ಆಗ್ರಹಿಸಿ ಜಿಲ್ಲಾ ಕನ್ನಡಸೇನೆ ಕಾರ್ಯಕರ್ತರು ಗುರು ವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ರಾಜ್ಯದಲ್ಲಿ ಸುಮಾರು ಎರಡು ವರ್ಷ ಳಿಂದ ಮಳೆಯ ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಮನೆಯನ್ನು ನಿರ್ಮಿಸಿಕೊಡದೇ ಕೇರಳದಿಂ ದ ಬಂದಿರುವ ಮುಸ್ಲೀಂ ವಲಸಿಗರಿಗೆ ಮನೆ ನಿರ್ಮಿಸುವುದು ಖಂಡನೀಯ ಎಂದರು.

ರಾಜ್ಯದಲ್ಲೇ ಹಲವೆಡೆ ಅತಿವೃಷ್ಟಿ ಪರಿಣಾಮ ಸ್ವಂತ ಮನೆ ಕಳೆದುಕೊಂಡವರು ಬಹಳಷ್ಟು ಮಂದಿಗಳ ನಡುವೆ ೨೦೦ ವಲಸಿಗರಿಗೆ ಬೆಂಗಳೂರು ನಗರದಲ್ಲಿ ಪ್ರತಿ ಮನೆಗೆ ೧೧.೨೦ ಲಕ್ಷ ರೂ.ಗಳನ್ನು ವ್ಯಯಿಸಿ ಮನೆ ಕಟ್ಟಿಸಲು ಮುಂದಾಗಿ ಸ್ಥಳೀಯ ನಿವಾಸಿಗಳಿಗೆ ರಾಜ್ಯಸರ್ಕಾರ ದ್ರೋಹವೆಸಗುತ್ತಿದೆ ಎಂದು ದೂರಿದರು.

ಕೂಡಲೇ ರಾಜ್ಯಸರ್ಕಾರ ಕೇರಳದಿಂದ ಬಂದಿರುವ ಮುಸ್ಲೀಂ ವಲಸಿರಿಗೆ ಮನೆಗಳನ್ನು ನಿರ್ಮಿಸಿಕೊ ಡಬಾರದು. ರಾಜ್ಯದಲ್ಲಿ ಜನಿಸಿ ಅನೇಕ ವರ್ಷಗಳಿಂದ ಬದುಕುತ್ತಿರುವ ಸ್ಥಳೀಯ ಮುಸ್ಲೀಂ ಬಾಂಧವರಿಗೆ ಮನೆ ಕಟ್ಟಿಕೊಡಲು ಅಭ್ಯಂತರವಿಲ್ಲ. ಆದರೆ ಹೊರರಾಜ್ಯದವರಿಗೆ ಸವಲತ್ತು ಕಲ್ಪಿಸಬಾರದು ಎಂದರು.

ರಾಜ್ಯಸರ್ಕಾರ ಒಂದು ವೇಳೆ ಹೊರರಾಜ್ಯದ ನಿವಾಸಿಗಳಿಗೆ ಮನೆ ನಿರ್ಮಿಸಲು ಮುಂದಾದರೆ ಕನ್ನಡ ಸೇನೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವ ಮೂಲಕ ಸದಾ ಕನ್ನಡಿಗರ ಪರವಾ ಗಿ ನಿಲ್ಲುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕನ್ನಡಸೇನೆ ಆಟೋ ಘಟಕದ ಅಧ್ಯಕ್ಷ ಜಯಪ್ರಕಾಶ್, ನಗರಾಧ್ಯಕ್ಷ ಸತೀಶ್, ಉಪಾಧ್ಯಕ್ಷ ಸಂಜೀವ್, ಮುಖಂಡರುಗಳಾದ ಅನ್ವರ್, ಶಂಕರೇಗೌಡ, ಚಂದ್ರಶೇಖರ್, ರೋಷನ್, ದಾಕ್ಷಯಿ ಣಿ, ಹಬೀಬ್, ಪಾಲಾಕ್ಷ ಮತ್ತಿತರರು ಉಪಸ್ಥಿತರಿದ್ದರು.

Kannada Sena appeals not to build houses for out-of-state residents

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...