Home namma chikmagalur chikamagalur ಮಲೆನಾಡು ಲೇಬರ್ ಕಂಟ್ರ್ಯಾಕ್ಟರ್ ಸಂಘ ಅಸ್ಥಿತ್ವಕ್ಕೆ
chikamagalurHomeLatest Newsnamma chikmagalur

ಮಲೆನಾಡು ಲೇಬರ್ ಕಂಟ್ರ್ಯಾಕ್ಟರ್ ಸಂಘ ಅಸ್ಥಿತ್ವಕ್ಕೆ

Share
Share

ಚಿಕ್ಕಮಗಳೂರು: ಮಲೆನಾಡು ತೋಟಕಾರ್ಮಿಕರ ನೆರವಿಗಾಗಿ ಮಲೆನಾಡು ಲೇಬರ್ ಕಂಟ್ರ್ಯಾಕ್ಟರ್ ಸಂಘ ಜಿಲ್ಲೆಯಲ್ಲಿ ಅಸ್ಥಿತ್ವಕ್ಕೆ ಬಂದಿದೆ. ಅಧ್ಯಕ್ಷರಾಗಿ ಎಸ್.ಸೆಲ್ವರಾಜ್, ಉಪಾಧ್ಯಕ್ಷ ಕೆ.ಮಂಜು ಹಾಗೂ ಕಾರ್ಯದರ್ಶಿಯಾಗಿ ಎ.ವಿ.ಮರಿಯ ದೋನಿಕ್ ಆಯ್ಕೆಯಾಗಿದ್ದಾರೆ.

ಟಿ.ಪರಶುರಾಮ್ (ಸಹ ಕಾರ್ಯದರ್ಶಿ), ಮಂಜು (ಖಜಾಂಚಿ), ಬಿ.ಎಸ್.ಯೋಗೀಶ್ (ಕಾನೂನು ಸಲಹೆಗಾರ ಹಾಗೂ ಕೆ.ಪ್ರಭಾಕರ್, ಕೆ.ಕಾಳಿಯಪ್ಪನ್, ಎಸ್.ಸೈಮನ್, ಮುರುಗೇಶ್ ಹಾಗೂ ಎಂ.ಸಿಮ್‌ಸನ್ (ನಿರ್ದೇಶಕರುಗಳು).
ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಎಸ್.ಸೆಲ್ವರಾಜ್ ಮಲೆನಾಡು ಭಾಗದ ಕಾಫಿ ತೋಟಗಳ ಲ್ಲಿ ಅತಿಹೆಚ್ಚು ಹೊರರಾಜ್ಯದ ತಮಿಳಿಗರಿಗೆ ತೋಟದ ಕೆಲಸಕ್ಕೆ ಆದ್ಯತೆ ನೀಡಲಾಗಿದೆ. ಇದರಿಂದ ಸ್ಥಳೀಯ ಮಲೆನಾಡು ಕಾರ್ಮಿಕರಿಗೆ ತೀವ್ರ ಸಮಸ್ಯೆ ಎದುರಾಗುತ್ತಿದೆ ಎಂದು ತಿಳಿಸಿದರು.

ಕಾಫಿ ತೋಟದ ವೃತ್ತಿಯನ್ನೇ ಅವಲಂಬಿಸಿಕೊಂಡು ಜಿಲ್ಲೆಯಲ್ಲಿ ಸಾವಿರಾರು ಮಂದಿ ಜೀವನ ಕಟ್ಟಿಕೊ ಂಡಿದ್ದಾರೆ. ಈ ವೃತ್ತಿ ಹೊರತಾಗಿ ಬೇರೆ ಯಾವುದೇ ವೃತ್ತಿ ಬಗ್ಗೆ ಅರಿವಿಲ್ಲ. ಈ ನಡುವೆ ಸ್ಥಳೀಯರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡದೇ ಹೊರರಾಜ್ಯದ ಕಾರ್ಮಿಕರಿಗೆ ಪ್ರೋತ್ಸಾಹಿಸುವುದು ತರವಲ್ಲ ಎಂದು ಹೇಳಿದರು.

ಅಲ್ಲದೇ ಹೊರರಾಜ್ಯದ ಕಾರ್ಮಿಕರು, ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಕಳಿಸದೇ ತೋ ಟದ ಕೆಲಸಕ್ಕೆ ಕರೆತಂದು ಕೆಲಸ ಮಾಡಿಸುತ್ತಿರುವುದು ಖಂಡನೀಯ. ಈ ಬಗ್ಗೆ ಸಂಬಂಧಿಸಿದ ತೋಟದ ಮಾಲೀಕರು ಹಾಗೂ ಜಿಲ್ಲಾಡಳಿತ ಸೂಕ್ತ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

Malenadu Labor Contractors Association for existence

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...