ಚಿಕ್ಕಮಗಳೂರು: ನಗರದ ಭೂಮಿಕ ಎಂಟರ್ಟೈನರ್ ವತಿಯಿಂದ ಜ.5 ರಿಂದ 12ರ ವರೆಗೆ ಸ್ವಾಮಿ ವಿವೇಕಾನಂದ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತೋತ್ಸವ ಮತ್ತು ಭೂಮಿಕಾ ಟಿವಿ ವಾರ್ಷಿಕೋತ್ಸವ ಅಂಗವಾಗಿ ಅರಣ್ಯ ಸಂರಕ್ಷಣೆ ಮಹತ್ವದ ಅರಿವು ಮೂಡಿಸಲು ವಿವಿಧ ಸಾಂಸ್ಕೃತಿಕ ಸ್ಪರ್ಧೆ, ಆರೋಗ್ಯ ಮತ್ತು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಭೂಮಿಕಾ ಟಿ.ವಿ. ಸಂಸ್ಥಾಪಕ ಅಧ್ಯಕ್ಷ ಅನಿಲ್ ಆನಂದ್ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.5 ರಂದು ನಗರದ ಅಂಬೇಡ್ಕರ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ, ಉಚಿತ ಕನ್ನಡಕ ಹಾಗೂ ಔಷಧಿ ವಿತರಣೆ, ರಕ್ತದಾನ, ದೇಹದಾನ, ನೇತ್ರದಾನ ನೋಂದಣಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.
ಜ.6 ರಂದು ಅಂಬೇಡ್ಕರ್ ಭವನದಲ್ಲಿ ಅಂಗನವಾಡಿ ಮತ್ತು ಎಲ್ಕೆಜಿ ಮಕ್ಕಳಿಗೆ ಅರಣ್ಯ ಸಂರಕ್ಷಣೆ ಬಗ್ಗೆ ವೇಷಭೂಷಣ ಸ್ಪರ್ಧೆ, ಹಿರಿಯ ನಾಗರಿಕರಿಗೆ ಮನೋರಂಜನಾ ಕ್ರೀಡೆ ಹಾಗೂ ಗೀತಾ ಗಾಯನ ಸ್ಪರ್ಧೆ ನಡೆಯಲಿದೆ ಎಂದರು.
ಜ.7 ರಂದು ಆಜಾದ್ ಪಾರ್ಕ್ ವೃತ್ತದಲ್ಲಿ ಪರಿಸರ ಸಂರಕ್ಷಣೆ ಕುರಿತು ಬೀದಿ ನಾಟಕ, ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕದಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಇಲಾಖೆ ಸಿಬ್ಬಂದಿಗಳಿಗೆ, ಶಿಕ್ಷಕರಿಗೆ, ಪರಿಸರ ಗೀತೆ, ಶಾಲೆ ಕಾಲೇಜು ವಿದ್ಯಾರ್ಥಿಗಳಿಗೆ ಅರಣ್ಯ ಸಂರಕ್ಷಣೆ ಕುರಿತು ಕಿರುನಾಟಕ ಆಯೋಜಿಸಲಾಗಿದೆ ಎಂದರು.
ಜ.8ರಂದು ಶ್ರೀರಾಮ ಗೆಸ್ಟ್ ಹೌಸ್ ಜಯನಗರದಲ್ಲಿ ಸಂಘ ಸಂಸ್ಥೆಗಳಿಗೆ ಅರಣ್ಯ ಸಂರಕ್ಷಣೆ ಬಗ್ಗೆ ವಸ್ತ್ರವಿನ್ಯಾಸ ಸ್ಪರ್ಧೆ, ಜ.9 ರಂದು ರತ್ನಗಿರಿ ಬೋರೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸ್ಥಳದಲ್ಲಿಯೇ ಚಿತ್ರ ಬರೆಯುವ ಸ್ಪರ್ಧೆ, ಪ್ರಬಂಧ ಹಾಗೂ ರಸಪ್ರಶ್ನೆ, ನಾಗರಿಕರಿಗೆ ಪದಬಂಧ ಸ್ಪರ್ಧೆ ನಡೆಯಲಿದೆ ಎಂದರು.
ಜ.10 ರಂದು ನಗರಸಭೆ ಆವರಣದಲ್ಲಿ ನಾಗರಿಕರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗಿಡ ನೆಡುವ ಕಾರ್ಯಕ್ರಮ. ವನದೇವಿ ಅಲಂಕಾರ ಸ್ಪರ್ಧೆ, ಜ.11 ರಂದು ಪಟಾಕಿ ಮೈದಾನದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ನಾಗರಿಕರಿಗೆ ಗಾಳಿಪಟ ಸ್ಪರ್ಧೆ, ಜ.12 ರಂದು ಕುವೆಂಪು ಕಲಾ ಮಂದಿರದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಂಗೀತ ಹಾಗೂ ನೃತ್ಯಸ್ಪರ್ಧೆ, ಸಂಜೆ 5-30ಕ್ಕೆ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ ಅವರು, ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೊಂದಾಯಿಸಲು ೯೪೮೦೦೦೧೦೦೯ ಮತ್ತು ೦೮೨೬೨-೨೦೦೪೦೦ ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಗುರುಮೂರ್ತಿ ನಾಡಿಗ್, ಅಕ್ಷಯ್ ಕುಮಾರ್, ತಿಲಕ್ ದತ್, ಮಲ್ಲೇಶ್ ಗೌಡ, ರಾಜಶೇಖರ್, ಪುನೀತ್, ರಘು ಮತ್ತಾವರ ಇದ್ದರು.
Awareness of the importance of forest conservation from Bhumika TV
Leave a comment