Home namma chikmagalur chikamagalur ಜಿಲ್ಲೆಯಲ್ಲಿ ಪಾರದರ್ಶಕವಾಗಿ ಸನ್ನದು ವಿತರಿಸಲು ಅಬಕಾರಿ ಇಲಾಖೆ ಕ್ರಮ
chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ಪಾರದರ್ಶಕವಾಗಿ ಸನ್ನದು ವಿತರಿಸಲು ಅಬಕಾರಿ ಇಲಾಖೆ ಕ್ರಮ

Share
Share

ಚಿಕ್ಕಮಗಳೂರು: ಸರ್ಕಾರದ ನಿರ್ದೇಶನದಂತೆ ಜಿಲ್ಲೆಗೆ ಅಗತ್ಯವಿರುವ ೧೨ ವಿವಿಧ ರೀತಿಯ ಸನ್ನದುಗಳನ್ನು ಸರ್ಕಾರದ ನಿಯಮಾನುಸಾರ ಜಿಲ್ಲೆಯ ವಿವಿಧ ತಾಲ್ಲೂಕುಗಳಿಗೆ ಸಮುದಾಯವಾರು ಮೀಸಲಿಟ್ಟು ಪಾರದರ್ಶಕವಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಬಿ.ಎಂ.ಅಶ್ವಿನಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಅಬಕಾರಿ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಇ-ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವ ಅರ್ಜಿದಾರರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇ-ಹರಾಜು ಜನವರಿ ೧೩ ರಂದು ಪ್ರಾರಂಭವಾಗಲಿದ್ದು, ಆಸಕ್ತಿ ಇರುವವರು ಅರ್ಜಿ ಸಲ್ಲಿಸಿ ಯಾವ ರೀತಿಯಲ್ಲಿ ಹರಾಜಿನಲ್ಲಿ ಭಾಗವಹಿಸಬೇಕು ಎಂಬ ಬಗ್ಗೆ ತರಬೇತುದಾರರು ತಿಳಿಸಿಕೊಡಲಿದ್ದಾರೆ. ಎಲ್ಲರಿಗೂ ಇದೊಂದು ಸುವರ್ಣಾವಕಾಶವಾಗಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಚಿಕ್ಕಮಗಳೂರು ಅಬಕಾರಿ ಉಪ ಆಯುಕ್ತರಾದ ಎಂ.ರೂಪ ಅವರು, ರಾಜ್ಯ ಅಬಕಾರಿ ಇಲಾಖೆ ರಾಜ್ಯದ ಎರಡನೇ ಅತೀದೊಡ್ಡ ರಾಜಸ್ವ ಸಂಗ್ರಹ ಇಲಾಖೆಯಾಗಿದೆ. ೨೦೨೬ನೇ ಸಾಲಿನಲ್ಲಿ ೪೩ ಸಾವಿರ ಕೋಟಿ ರೂ.ಗಳ ಸಂಗ್ರಹ ಗುರಿಯನ್ನು ಹೊಂದಿದೆ. ಜಿಲ್ಲೆಯಲ್ಲಿ ಒಟ್ಟಾರೆ ೨೬೭ ಸನ್ನದುಗಳು ಕಾರ್ಯ ನಿರ್ವಹಿಸುತ್ತಿವೆ. ಉಳಿದ ೧೨ ಸನ್ನದುಗಳ ಪ್ರಕ್ರಿಯೆ ಜಾರಿಯಲ್ಲಿದ್ದು, ಅಗತ್ಯ ಪ್ರಚಾರ ಕಾರ್ಯ ಕೈಗೊಳ್ಳಲಾಗಿದೆ. ವಿವಿಧ ತಾಲ್ಲೂಕುಗಳ ಅರ್ಜಿದಾರರು ಸರ್ಕಾರ ನೀಡಿರುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ಅಬಕಾರಿ ಉಪ ಆಯುಕ್ತ ವೀರೇಶ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಂಎಸ್‌ಟಿಸಿ ತಂಡದವರಾದ ಬ್ರಿಜೇಶ್ ಮತ್ತಿತರರು ತರಬೇತಿ ನೀಡಿದರು. ಕಡೂರು ವಲಯದ ಅಬಕಾರಿ ನಿರೀಕ್ಷಕರಾದ ಎಲ್.ಸಿ.ಸಂದೀಪ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮೂಡಿಗೆರೆ ಉಪವಿಭಾಗದ ಉಪ ಅಧೀಕ್ಷಕ ಕೀರ್ತಿ ಕುಮಾರ್ ವಂದಿಸಿದರು. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಅರ್ಜಿದಾರರು ಹಾಗೂ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿದ್ದರು.

Excise Department takes steps to distribute charters transparently in the district

Share

Leave a comment

Leave a Reply

Your email address will not be published. Required fields are marked *

Don't Miss

ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ ಪತ್ತೆ

ಚಿಕ್ಕಮಗಳೂರು:  ಭದ್ರಾ ಹುಲಿ ಸಂರಕ್ಷಿತ ಪ್ರದೇಶದ,ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ದಿನಾಂಕ 6ನೆ ತಾರೀಕು ಬೆಳಿಗ್ಗೆ ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ...

ಕಾಫಿ ಕಳ್ಳತನ : ಆರೋಪಿಗಳ ಸೆರೆ- 2 ಕಾರು ವಶ

ಮೂಡಿಗೆರೆ: ತಾಲೂಕಿನ ಗೋಣಿಬೀಡು ಸಮೀಪ ರಂಗಸ್ವಾಮಿ ಅವರ ಕಾಫಿ ತೋಟದಲ್ಲಿ ಕಾಫಿ ಕಳ್ಳತನ ಮಾಡಿದ್ದ ೬ ಮಂದಿ ಆರೋಪಿಗಳನ್ನು ಗೋಣಿಬೀಡು ಪೊಲೀಸರು ಬಂಧಿಸಿ, ಸುಮಾರು ೩.೫೦ ಲಕ್ಷ ರೂ ಮೌಲ್ಯದ ಕಾಫಿ...

Related Articles

ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯಲ್ಲಿ ಸಾಧಾರಣ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದ್ದು, ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ...

ಕಾಫಿನಾಡಿನ ಗಿರಿಭಾಗದಲ್ಲಿ ದಟ್ಟ ಮಂಜು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸೂರ್ಯನ ದರ್ಶನವೇ ಇಲ್ಲದಂತಾಗಿದ್ದು, ಥಂಡಿ ವಾತಾವರಣ ಉಂಟಾಗಿದ್ದು,...

ಜಿಎಸ್‌ಬಿ ಯಿಂದ ಸಂಕ್ರಾಂತಿ ಸಂಭ್ರಮ

ಚಿಕ್ಕಮಗಳೂರು: ಸಂಕ್ರಾಂತಿ ಹಿನ್ನೆಲೆಯಲ್ಲಿ ಗೌಡಸಾರಸ್ವತ ಬ್ರಾಹ್ಮಣ ಸಮಾಜದಿಂದ ನಡೆಯುವ ಕೇಳ್ ಮೇಳ್ ಸಾಂಸ್ಕೃತಿಕ ಕಾರ್ಯಕ್ರಮ ನಗರದಲ್ಲಿ...

ಗಾಳಿಪಟ ಹಾರಾಟಕ್ಕೆ ಮನಸೋತ ಜನ

ಚಿಕ್ಕಮಗಳೂರು: ಆಕಾಶದಲ್ಲಿ ಹಾರುತ್ತಿದ್ದ ಹುಲಿ, ಜಿಂಕೆ, ಆನೆ, ಸಿಂಹ, ಚಿಟ್ಟೆಗಳು, ಪಕ್ಷಿಗಳು, ಗಿಡಮರಗಳು ಸೇರಿದಂತೆ ವಿವಿಧ...