Home namma chikmagalur chikamagalur ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಪ್ರತಿಭಟನಾ ಸಮಾವೇಶ
chikamagalurHomeLatest Newsnamma chikmagalur

ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಪ್ರತಿಭಟನಾ ಸಮಾವೇಶ

Share
Share

ಚಿಕ್ಕಮಗಳೂರು: ಜಿಲ್ಲೆಯನ್ನು ಅತಿವೃಷ್ಟಿ ಪ್ರದೇಶವೆಂದು ಘೋಷಣೆ ಮಾಡುವಂತೆ ಅಗ್ರಹಿಸುವುದೂ ಸೇರಿದಂತೆ ಅನೇಕ ಜ್ವಲಂತ ಸಮಸ್ಯೆಗಳನ್ನು ಸರ್ಕಾರ ಪರಿಹರಿಸುವಂತೆ ಒತ್ತಾಯಿಸಲು ಜನವರಿ ಕೊನೆಯ ವಾರದಲ್ಲಿ ಪ್ರತಿಭಟನಾ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಡಿ. ಮಹೇಶ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಪ್ರತಿಭಟನಾ ಸಮಾವೇಶವನ್ನು ರಾಜ್ಯಸಮಿತಿಯ ಸಲಹೆ ಮೇರೆಗೆ ಕೈಗೊಳ್ಳಲಾಗಿದೆ. ಬಗರ್ ಹುಕ್ಕುಂ ಸಾಗುವಳಿ ಫಾರಂ ನಂ.೫೦, ೫೩, ೫೭ ಅರ್ಜಿಗಳ ಶೀಘ್ರ ವಿಲೇವಾರಿ ಪರಿಭಾವಿತ ಅರಣ್ಯ ಕಾಯ್ದೆಗೆ ತಿದ್ದುಪಡಿ ತಂದು ಕಂದಾಯ ಭೂಮಿ ಗುರ್ತಿಸಿ ಭೂರಹಿತರಿಗೆ ಹಂಚಬೇಕು ಎಂದರು.

ಬಯಲು ಭಾಗದ ಕೆರೆಗಳಿಗೆ ಭದ್ರಾ ಉಪಕಣಿವೆ ನೀರಾವರಿ ಯೋಜನೆಯಿಂದ ನೀರು ಹರಿಸುವ ಕಾಮಗಾರಿಯನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು, ಫಸಲು ಭೀಮಾ ಯೋಜನೆಯಡಿ ರೈತರಿಗೆ ಯಾವುದೇ ಪ್ರಯೋಜನವಾಗದಿದ್ದರೂ ವಿಮಾ ಕಂಪನಿಗಳ ಜೇಬು ತುಂಬಿಸುತ್ತಿರುವ ಯೋಜನೆಯನ್ನು ಕೈಬಿಡಬೇಕು. ಕೂಡಲೇ ಸರ್ಕಾರ ರೈತ ಪರವಾದ ನಿಯಮಗಳನ್ನು ರೂಪಿಸಬೇಕೆಂದು ಆಗ್ರಹಿಸಿದರು.

ಇತ್ತೀಚೆಗೆ ಸಂಘಟನೆಯಲ್ಲಿ ನಡೆದ ಅಹಿತಕರ ಘಟನೆಗಳನ್ನು ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಜಿಲ್ಲೆಗೆ ಆಗಮಿಸಿ ಕಾರ್ಯಕರ್ತರು, ಪದಾಧಿಕಾರಿಗಳೊಂದಿಗೆ ಚರ್ಚಿಸಿ ಸಂಘಟನೆಯ ಆಂತರಿಕ ವಿಚಾರಗಳನ್ನು ಪರಸ್ಪರ ಚರ್ಚಿಸಿ ಬಗೆಹರಿಸಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ ಎಂದರು.

ಸಂಘ ವಿರೋಧಿ ಚಟುವಟಿಕೆ ಪುನರಾವರ್ತನೆಯಾದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ ಅವರು, ಈಗ ಆಗಿರುವ ಅಹಿತಕರ ಘಟನೆಗಳನ್ನು ಕೈಬಿಟ್ಟು, ಸಂಘಟನೆ ಬಲಗೊಳಿಸಲು ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ತಿಳಿಸಿದ್ದಾರೆಂದರು.

ಬೇಕಾ ಬಿಟ್ಟಿ ಸದಸ್ಯತ್ವ ಮಾಡಬಾರದು, ರೈತ ಸಂಘದ ವಿಚಾರಗಳಿಗೆ ವಿರುದ್ಧವಾದವರನ್ನು ಸಂಘಟನೆ ಪ್ರವೇಶಿಸಲು ಅವಕಾಶ ನೀಡಬಾರದು, ತಾಲ್ಲೂಕು ಸಮಿತಿಗೆ ಜಿಲ್ಲಾ ಸಮಿತಿ ಸೂಕ್ತ ಸಲಹೆ ಸಹಕಾರ ನೀಡಬೇಕು. ಜಿಲ್ಲಾ ಪದಾಧಿಕಾರಿಗಳಿಲ್ಲದೆ ತಾಲ್ಲೂಕು ಸಮಿತಿ ಯಾವುದೇ ಪ್ರಮುಖ ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಅಧ್ಯಕ್ಷ ವೈ.ಸಿ ಸುನಿಲ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ ಚಂದ್ರಶೇಖರ್, ಜಿಲ್ಲಾ ಗೌರವಾಧ್ಯಕ್ಷ ಎಂ.ಸಿ. ಬಸವರಾಜು, ಹಿರಿಯ ಮುಖಂಡ ಕೆ.ಕೆ. ಕೃಷ್ಣೇಗೌಡ, ತಾಲ್ಲೂಕು ಉಪಾಧ್ಯಕ್ಷ ಬಿ.ಯು ಪರ್ವತೇಗೌಡ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಉಪಸ್ಥಿತರಿದ್ದರು.

Protest rally to draw government’s attention to burning issues in the district

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...