Home namma chikmagalur chikamagalur ವಾಟ್ಸಾಪ್ ಮೂಲಕ 5,35 ಲಕ್ಷ ರೂ ವಂಚನೆ
chikamagalurCrime NewsHomeLatest Newsnamma chikmagalur

ವಾಟ್ಸಾಪ್ ಮೂಲಕ 5,35 ಲಕ್ಷ ರೂ ವಂಚನೆ

Share
Share

ಚಿಕ್ಕಮಗಳೂರು: ನಗರದ ವ್ಯಕ್ತಿಯೊಬ್ಬರು ವಾಟ್ಸಾಪ್ ಮೂಲಕ ಕಳುಹಿಸಿದ APK ಫೈಲ್ ಅನ್ನು ಡೌನ್‌ಲೋಡ್ ಮಾಡಿದಾಗ ತಮ್ಮ ಕೆನರಾ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 5,35,000 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ.

ಈ ಸಂಬಂಧ ಜನವರಿ 8, 2026 ರಂದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರು ಇಂತಹ ವಂಚನೆಗಳ ಬಗ್ಗೆ ಎಚ್ಚರದಿಂದಿರಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

ಸಾಮಾನ್ಯವಾಗಿ ಆಂಡ್ರಾಯ್ಡ್ ಫೋನ್‌ಗಳಲ್ಲಿ ಬಳಸಲಾಗುವ APK ಫೈಲ್‌ಗಳು ಮಾಲ್‌ವೇರ್ ಅಥವಾ ಹ್ಯಾಕಿಂಗ್ ತಂತ್ರಾಂಶಗಳನ್ನು ಒಳಗೊಂಡಿರಬಹುದು.

ಇವುಗಳನ್ನು ಒಮ್ಮೆ ಇನ್‌ಸ್ಟಾಲ್ ಮಾಡಿದರೆ ಹ್ಯಾಕರ್‌ಗಳು ನಿಮ್ಮ ಫೋನ್‌ನ ಮೇಲೆ ಹಿಡಿತ ಸಾಧಿಸಿ, ಬ್ಯಾಂಕ್ ಒಟಿಪಿಗಳು, ಪಾಸ್‌ವರ್ಡ್‌ಗಳು ಮತ್ತು ನಿಮ್ಮ ಖಾಸಗಿ ಮಾಹಿತಿಯನ್ನು ಸುಲಭವಾಗಿ ಕದಿಯಬಲ್ಲರು.

ಆದ್ದರಿಂದ ಅಪರಿಚಿತ ಮೂಲಗಳಿಂದ ಬರುವ ಯಾವುದೇ ಲಿಂಕ್ ಅಥವಾ ಫೈಲ್‌ಗಳನ್ನು ಕ್ಲಿಕ್ ಮಾಡಬಾರದು. ಬ್ಯಾಂಕ್‌ಗಳು ಅಥವಾ ಸರ್ಕಾರಿ ಸಂಸ್ಥೆಗಳು ಎಂದಿಗೂ ವಾಟ್ಸಾಪ್ ಮೂಲಕ ಆಪ್‌ಗಳನ್ನು ಕಳುಹಿಸುವುದಿಲ್ಲ ಎನ್ನುವುದನ್ನು ಪ್ರತಿಯೊಬ್ಬರೂ ನೆನಪಿಡಬೇಕು.

ಒಂದು ವೇಳೆ ನೀವು ಇಂತಹ ಸೈಬರ್ ವಂಚನೆಗೆ ತುತ್ತಾದಲ್ಲಿ ತಕ್ಷಣವೇ 1930 ಸಂಖ್ಯೆಗೆ ಕರೆ ಮಾಡಿ ಅಥವಾ www.cybercrime.gov.in ವೆಬ್‌ಸೈಟ್ ಮೂಲಕ ದೂರನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.

Rs 5.35 lakh fraud through WhatsApp

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...