Home namma chikmagalur chikamagalur ಡಿಸಿಸಿ ಬ್ಯಾಂಕ್‌ ನ 13 ನಿರ್ದೇಶಕ ಸ್ಥಾನಗಳಿಗೆ 40 ನಾಮಪತ್ರ ಸಲ್ಲಿಕೆ
chikamagalurHomeLatest Newsnamma chikmagalur

ಡಿಸಿಸಿ ಬ್ಯಾಂಕ್‌ ನ 13 ನಿರ್ದೇಶಕ ಸ್ಥಾನಗಳಿಗೆ 40 ನಾಮಪತ್ರ ಸಲ್ಲಿಕೆ

Share
Share

ಚಿಕ್ಕಮಗಳೂರು: ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್ ಆಡಳಿತ ಮಂಡಳಿಯ 13 ನಿರ್ದೇಶಕ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಂತ್ಯಗೊಂಡಿದೆ

ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಇಂದು ಒಟ್ಟು 40 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಈ ಪೈಕಿ 4 ಸ್ಥಾನಗಳು ಅವಿರೋಧ ಆಯ್ಕೆಯ ಹಾದಿಯಲ್ಲಿವೆ. ಪ್ರಮುಖವಾಗಿ ಎನ್.ಆರ್. ಪುರದಿಂದ ಕೆ.ಸಿ. ಜಯಪಾಲ ಮತ್ತು ಮೂಡಿಗೆರೆಯಿಂದ ಹಳಸೆ ಶಿವಣ್ಣ ಅವರು ನಾಮಪತ್ರ ಸಲ್ಲಿಸಿದ ಏಕೈಕ ಅಭ್ಯರ್ಥಿಗಳಾಗಿದ್ದು, ಅವಿರೋಧ ಆಯ್ಕೆ ಖಚಿತಗೊಂಡಿದೆ.

ಚುನಾವಣಾ ಕಣದಲ್ಲಿ ರಾಜಕೀಯದ ಘಟಾನುಘಟಿಗಳಾದ ಮಾಜಿ ಸಚಿವ ಸಿ.ಟಿ. ರವಿ, ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಮಾಜಿ ಶಾಸಕರಾದ ಬೆಳ್ಳಿಪ್ರಕಾಶ್, ಡಿ.ಎಸ್. ಸುರೇಶ್ ಮತ್ತು ಎಂ.ಪಿ. ಕುಮಾರ್ ಸ್ವಾಮಿ ಅವರುಗಳು ವಿವಿಧ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿರುವುದು ಚುನಾವಣಾ ಕಣದ ರಂಗೇರುವಂತೆ ಮಾಡಿದೆ.

ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪರವಾಗಿ ಚಿಕ್ಕಮಗಳೂರು ಸ್ಥಾನಕ್ಕೆ 8 ನಾಮಪತ್ರಗಳು, ಕಡೂರು ತಾಲೂಕಿನ ಎರಡು ಸ್ಥಾನಗಳಿಗೆ 3 ನಾಮಪತ್ರಗಳು ಹಾಗೂ ತರೀಕೆರೆ ತಾಲೂಕಿನ ಎರಡು ಸ್ಥಾನಗಳಿಗೆ ಕೆ.ಆರ್. ಆನಂದಪ್ಪ ಮತ್ತು ಡಿ.ಎಸ್. ಸುರೇಶ್ ಕಣದಲ್ಲಿದ್ದಾರೆ.

ಇತರ ಕ್ಷೇತ್ರಗಳಲ್ಲೂ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಕೊಪ್ಪ ತಾಲೂಕಿನ ಒಂದು ಸ್ಥಾನಕ್ಕೆ ಪ್ರಜ್ವಲ್, ರವೀಂದ್ರ ಮತ್ತು ಸತೀಶ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಶೃಂಗೇರಿ ತಾಲೂಕಿನಲ್ಲಿ ದಿನೇಶ್ ಹೆಗ್ಡೆ ಮತ್ತು ಪ್ರಸನ್ನ ನಾಮಪತ್ರ ಸಲ್ಲಿಸಿದ್ದಾರೆ.

ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಟಿ.ಕೆ. ಜಗದೀಶ್ ಮತ್ತು ಎಸ್.ಡಿ. ಸೋನಾಲ್ ಸ್ಪರ್ಧಿಸುತ್ತಿದ್ದಾರೆ. ಉಳಿದಂತೆ ಜಿಲ್ಲಾ ವ್ಯವಸಾಯೋತ್ಪನ್ನ ಸಹಕಾರ ಸಂಘ ಮತ್ತು ಇತರ ಸಹಕಾರ ಸಂಘಗಳ ಕ್ಷೇತ್ರಗಳಿಗೂ ಹಿರಿಯ ಮುಖಂಡರು ನಾಮಪತ್ರ ಸಲ್ಲಿಸಿದ್ದು, ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆಯ ನಂತರ ಅಂತಿಮ ಚಿತ್ರಣ ಲಭ್ಯವಾಗಲಿದೆ.

40 nominations submitted for 13 director positions in DCC Bank

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...