Home namma chikmagalur chikamagalur ಅಸಂಘಟಿತ ಕಾರ್ಮಿಕರಿಗಾಗಿ ಹಲವಾರು ಜನಪರ ಯೋಜನೆ
chikamagalurHomeLatest Newsnamma chikmagalur

ಅಸಂಘಟಿತ ಕಾರ್ಮಿಕರಿಗಾಗಿ ಹಲವಾರು ಜನಪರ ಯೋಜನೆ

Share
Share

ಚಿಕ್ಕಮಗಳೂರು: ಬಡವರ ಬದುಕಿನ ಬಗ್ಗೆ ಕಾಳಜಿ ವಹಿಸುತ್ತಿರುವ ರಾಜ್ಯಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

ಅವರು ಕ್ಷೇತ್ರದ ಜೋಡಿಹೋಚಿಹಳ್ಳಿ ಗ್ರಾಮದಲ್ಲಿ ಕಾರ್ಮಿಕ ಇಲಾಖೆ ಏರ್ಪಡಿಸಲಾಗಿದ್ದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡಬೇಕೆಂಬ ಉದ್ದೇಶದೊಂದಿಗೆ ಸರ್ಕಾರ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯಡಿ ಸ್ಮಾರ್ಟ್‌ಕಾರ್ಡ್ ವಿತರಣೆ ಸಮಾರಂಭದಲ್ಲಿ ಫಲಾನುಭವಿಗಳಿಗೆ ಸ್ಮಾರ್ಟ್‌ಕಾರ್ಡ್ ವಿತರಿಸಿ ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಬಡವರಿಗೆ ಬದುಕು ಕಟ್ಟಿಕೊಡುತ್ತಿರುವ ದಾಖಲೆ ಆಡಳಿತ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಡವರ ಬದುಕಿಗೆ ಪೂರಕವಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಬಡ ಕಾರ್ಮಿಕರ ಪರವಾದ ಆಟೋ ಚಾಲಕರಿಗೆ ಅಪಘಾತವಾದರೆ ನೋಂದಣಿ ಮಾಡಿಸಿದ್ದ ಕುಟುಂಬಕ್ಕೆ ೫ ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆಂದರು.

ಅಲೆಮಾರಿ ಜನಾಂಗ ಸೇರಿದಂತೆ ಸುಮಾರು ೧೦೧ ಜನಾಂಗಗಳಿದ್ದು, ಅವರಿಗೆಲ್ಲ ಡಾ. ಬಿ.ಆರ್ ಅಂಬೇಡ್ಕರ್ ಹೆಸರಿನಲ್ಲಿ ಸ್ಮಾರ್ಟ್‌ಕಾರ್ಡ್ ವಿತರಿಸಲಾಗುತ್ತಿದೆ. ಇದರಿಂದ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ನಾಮಿನಿ ಸದಸ್ಯರಿಗೆ ೧ ಲಕ್ಷ ರೂ. ಚಿಕಿತ್ಸಾ ವೆಚ್ಚಕ್ಕಾಗಿ ೫೦ ಸಾವಿರ ರೂ. ನೀಡಲಾಗುತ್ತಿದೆ ಎಂದು ಹೇಳಿದರು.

ವಯೋಸಹಜವಾಗಿ ಮೃತಪಟ್ಟವರ ಕುಟುಂಬಕ್ಕೆ ಅಂತ್ಯಕ್ರಿಯೆ ವೆಚ್ಚಕ್ಕೆಂದು ೧೦ ಸಾವಿರ ರೂ. ನೀಡಲಾಗುತ್ತಿದ್ದು, ಈ ರೀತಿ ಬಡವರ ಪರವಾದ ಚಿಂತನೆ ಮಾಡುವ ಕಾಂಗ್ರೆಸ್ ಪಕ್ಷದ ಸರ್ಕಾರ, ಬಡವರ ಪರವಾದ ಶಾಸಕರನ್ನು ಆಯ್ಕೆಮಾಡಿದ ಪರಿಣಾಮ ಹಲವು ಸೌಲಭ್ಯಗಳನ್ನು ನೀಡಲು ಮುಂದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಗಣೆಹಳ್ಳಿ ಗ್ರಾ.ಪಂ ಅಧ್ಯಕ್ಷ ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಕುಮಾರಪ್ಪ, ಗೋವಿಂದಸ್ವಾಮಿ, ಸಂತೋಷ್, ಸುರೇಶ್, ಸಣ್ಣಪ್ಪ, ಮಂಜಪ್ಪ, ನಂಜಣ್ಣ, ಅಣ್ಣಪ್ಪನಾಯ್ಕ, ಮಂಜುನಾಯ್ಕ ಸೇರಿದಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Several pro-people schemes for unorganized workers

Share

Leave a comment

Leave a Reply

Your email address will not be published. Required fields are marked *

Don't Miss

ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ ಪತ್ತೆ

ಚಿಕ್ಕಮಗಳೂರು:  ಭದ್ರಾ ಹುಲಿ ಸಂರಕ್ಷಿತ ಪ್ರದೇಶದ,ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ದಿನಾಂಕ 6ನೆ ತಾರೀಕು ಬೆಳಿಗ್ಗೆ ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ...

ಕಾಫಿ ಕಳ್ಳತನ : ಆರೋಪಿಗಳ ಸೆರೆ- 2 ಕಾರು ವಶ

ಮೂಡಿಗೆರೆ: ತಾಲೂಕಿನ ಗೋಣಿಬೀಡು ಸಮೀಪ ರಂಗಸ್ವಾಮಿ ಅವರ ಕಾಫಿ ತೋಟದಲ್ಲಿ ಕಾಫಿ ಕಳ್ಳತನ ಮಾಡಿದ್ದ ೬ ಮಂದಿ ಆರೋಪಿಗಳನ್ನು ಗೋಣಿಬೀಡು ಪೊಲೀಸರು ಬಂಧಿಸಿ, ಸುಮಾರು ೩.೫೦ ಲಕ್ಷ ರೂ ಮೌಲ್ಯದ ಕಾಫಿ...

Related Articles

ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯಲ್ಲಿ ಸಾಧಾರಣ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದ್ದು, ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ...

ಕಾಫಿನಾಡಿನ ಗಿರಿಭಾಗದಲ್ಲಿ ದಟ್ಟ ಮಂಜು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸೂರ್ಯನ ದರ್ಶನವೇ ಇಲ್ಲದಂತಾಗಿದ್ದು, ಥಂಡಿ ವಾತಾವರಣ ಉಂಟಾಗಿದ್ದು,...

ಜಿಎಸ್‌ಬಿ ಯಿಂದ ಸಂಕ್ರಾಂತಿ ಸಂಭ್ರಮ

ಚಿಕ್ಕಮಗಳೂರು: ಸಂಕ್ರಾಂತಿ ಹಿನ್ನೆಲೆಯಲ್ಲಿ ಗೌಡಸಾರಸ್ವತ ಬ್ರಾಹ್ಮಣ ಸಮಾಜದಿಂದ ನಡೆಯುವ ಕೇಳ್ ಮೇಳ್ ಸಾಂಸ್ಕೃತಿಕ ಕಾರ್ಯಕ್ರಮ ನಗರದಲ್ಲಿ...

ಗಾಳಿಪಟ ಹಾರಾಟಕ್ಕೆ ಮನಸೋತ ಜನ

ಚಿಕ್ಕಮಗಳೂರು: ಆಕಾಶದಲ್ಲಿ ಹಾರುತ್ತಿದ್ದ ಹುಲಿ, ಜಿಂಕೆ, ಆನೆ, ಸಿಂಹ, ಚಿಟ್ಟೆಗಳು, ಪಕ್ಷಿಗಳು, ಗಿಡಮರಗಳು ಸೇರಿದಂತೆ ವಿವಿಧ...