Home namma chikmagalur chikamagalur ನಾಗರೀಕ ಸೇವಾ ಪರೀಕ್ಷೆ ಎದುರಿಸಲು ಜ್ಞಾನ, ಛಲದ ಅವಶ್ಯ
chikamagalurHomeLatest Newsnamma chikmagalur

ನಾಗರೀಕ ಸೇವಾ ಪರೀಕ್ಷೆ ಎದುರಿಸಲು ಜ್ಞಾನ, ಛಲದ ಅವಶ್ಯ

Share
Share

ಚಿಕ್ಕಮಗಳೂರು: ನಾಗರೀಕ ಸೇವಾ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ವಿ ದ್ಯಾರ್ಥಿಗಳಿಗೆ ಆಸ್ತಿ-ಅಂತಸ್ತಿನ ಅರ್ಹತೆ ಬೇಕಿಲ್ಲ. ಅಪಾರ ಜ್ಞಾನ, ಸಾಧಿಸುವ ಛಲ, ಕಠಿಣ ಪರಿಶ್ರಮ ಹಾಗೂ ನಿಗಧಿತ ಗುರಿ ತಲುಪುವ ಹಠವಿರಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನಾ ಹೇಳಿದರು.

ನಗರದ ಎಐಟಿ ಕಾಲೇಜು ಬಿಜಿಎಸ್ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮ ತ್ತು ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ಧ ಕೆ.ಎ. ಎಸ್ ಮತ್ತು ಐ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಸಿದ್ದತಾ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತ ನಾಡಿದರು.

ಜೀವನದಲ್ಲಿ ಮನುಷ್ಯನಿಗೆ ಪ್ರತಿಬಾರಿ ಗೆಲುವು ತೃಪ್ತಿ ನೀಡುವುದಿಲ್ಲ. ಸೋಲಿನ ಬಳಿಕ ಗೆಲುವಿನ ನಗೆ ಬೀರುವುದು ನಿಜವಾದ ಸಾಧನೆ. ವಿದ್ಯಾರ್ಥಿದೆಸೆಯಲ್ಲಿ ಸಣ್ಣಪುಟ್ಟ ಕನಸನ್ನು ಕಾಣದೇ, ಸಮಾಜವನ್ನು ಮು ನ್ನೆಡೆಸುವ ಕೆಎಎಸ್ ಮತ್ತು ಐಎಎಸ್ ಹುದ್ದೆಗಳನ್ನು ಅಲಂಕರಿಸುವ ಬಹುದೊಡ್ಡ ಕನಸನ್ನು ಕಂಡು ಸತತ ವಾಗಿ ಈಡೇರಿಸುವ ಪ್ರಯತ್ನಕ್ಕೆ ಮುಂದಾಗಬೇಕು ಎಂದರು.

ರಾಜಧಾನಿಯಲ್ಲಿ ಉದ್ಯೋಗ, ಉದ್ಯಮಿ ಕ್ಷೇತ್ರ ಹಾಗೂ ಸರ್ಕಾರಿ ಹುದ್ದೆಗಳಲ್ಲಿ ಕನ್ನಡಿಗರ ಸಂಖ್ಯೆ ಕ್ಷೀಣಿ ಸುತ್ತಿದೆ. ಗೇಟ್ ಕಾಯುವನಿಂದ, ಲಿಫ್ಟ್ ಕೆಲಸದ ವ್ಯಕ್ತಿವರೆಗೂ ಪರಭಾಷಿಗರ ಹಾವಳಿ ಹೆಚ್ಚಾಗಿ ಕನ್ನಡ ಮಕ್ಕ ಳು ದೂರಾಗುತ್ತಿದ್ದಾರೆ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು, ನಾಡಿನ ಪ್ರತಿ ಕ್ಷೇತ್ರದಲ್ಲೂ ಕನ್ನಡಿಗರು ದೊಡ್ಡಹೆಜ್ಜೆ ಹಾಕಬೇಕು ಎಂದು ಕರೆ ನೀಡಿದರು.

ಸಾರ್ವಜನಿಕ ಸೇವಾ ಹುದ್ದೆಗಳಾದ ಕೆಎಎಸ್, ಐಎಎಸ್, ಐಪಿಎಸ್‌ನ ಒಂದು ಸಹಿಯು ಮಹತ್ವ ನಿ ರ್ಣಯ ಕೈಗೊಳ್ಳುತ್ತದೆ. ಒಂದು ಪೈಲ್‌ನಿಂದ ಲಕ್ಷಾಂತರ ಜನರ ಬದುಕಿಗೆ ಸಹಾಯವಾಗಲಿದೆ. ಅಲ್ಲದೇ ಸಾ ಮಾಜಿಕ ಪಿಡುಗು, ಬಾಲ್ಯವಿವಾಹ ಪ್ರಕರಣಗಳನ್ನು ಹೋಗಲಾಡಿಸಿ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಪೂರಕ ವಾಗಲಿದೆ ಎಂದರು.

ವಿದ್ಯಾರ್ಥಿ ಜೀವನದಲ್ಲಿ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಸವಾಲುಗಳು ಸರ್ವೆಸಾ ಮಾನ್ಯ. ಕೆಎಎಸ್ ಮತ್ತು ಐಎಎಸ್ ಪರೀಕ್ಷೆಗಳನ್ನು ಎದುರಿಸಲು ಬಹಳಷ್ಟು ಶ್ರಮವಿರಬೇಕು. ಕನಿಷ್ಟ ಎರಡು ವರ್ಷಗಳ ಕಾಲ ಅಮೂಲ್ಯ ಸಮಯ ಓದಿಗೆ ಮೀಸಲಿಡಬೇಕು. ಮದ್ಯದಲ್ಲಿ ಯಾವುದೇ ಕ್ಷೇತ್ರದಲ್ಲೂ ಆಸಕ್ತಿ ತೋರದೇ ನಿರಂತರ ಅಧ್ಯಯನ ನಡೆಸಿದರೆ ಯಶಸ್ಸಿನ ಮೆಟ್ಟಿಲು ಲಭ್ಯವಾಗಲಿದೆ ಎಂದರು.

ವಿಶೇಷವಾಗಿ ಕಸಾಪವು ಸಾಹಿತ್ಯ, ಪದ್ಯ, ಕನ್ನಡ ಕಟ್ಟುವ ಕಾಯಕದ ನಡುವೆಯೂ ವಿದ್ಯಾರ್ಥಿಗಳ ಶೈಕ್ಷ ಣಿಕ ಬೆಳವಣಿಗೆಗೆ ಪರಿಣಿತರ ತಂಡದೊಂದಿಗೆ ಕಾರ್ಯಾಗಾರ ಆಯೋಜಿಸಿ ಸ್ಪಂದಿಸುತ್ತಿರುವುದು ಹೆಮ್ಮೆಯ ಸಂಗತಿ. ವಿದ್ಯಾರ್ಥಿಗಳು ಕೂಡಾ ಕಾರ್ಯಾಗಾರದ ಸಂಪೂರ್ಣ ಮಾಹಿತಿ ಪಡೆದುಕೊಂಡು ನಾಗರೀಕ ಸೇ ವಾ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ ಕಸಾಪ ಕನ್ನಡ ಸಾಹಿತ್ಯ ಚಟುವಟಿಕೆಗಳನ್ನು ಒಳಗೊಂಡಂತೆ ನಾಗರೀಕ ಸೇವಾ ಕಾರ್ಯಕ್ಕೆ ಅಣಿಗೊಳಿಸಲು ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಹಮ್ಮಿಕೊ ಂಡಿದೆ. ಸಾಧನೆ ಎಂಬುದು ಸಾಧಕನ ಸ್ವತ್ತೇ ಹೊರತು ಸೋಮಾರಿ ಸ್ವತ್ತಲ್ಲ. ಹೀಗಾಗಿ ಯುವಸಮೂಹ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ದೃತಿಗೆಡದೇ ಧೈರ್ಯದಿಂದ ಮುನ್ನುಗ್ಗಬೇಕು ಎಂದು ಹೇಳಿದರು.

ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ಸಾಧನೆ ಇಲ್ಲದೇ ಸತ್ತರೇ ಮತ್ತು ಆದರ್ಶವಿಲ್ಲದೇ ಬದುಕು ಮನುಷ್ಯನ ಜೀವನ ವ್ಯರ್ಥದಾದಂತೆ. ಕೇವಲ ಇಂಜಿನಿ ಯರ್, ಮೆಡಿಕಲ್ ಕ್ಷೇತ್ರಕ್ಕೆ ಸೀಮಿತರಾಗದೇ ನಾಗರೀಕ ಸೇವಾ ಕಾರ್ಯದಲ್ಲಿ ತೊಡಗಲು ಯುವಜನತೆ ಮುಂದಾಗಿ ಬಡವರ್ಗದ ಜನರಿಗೆ ಸ್ಪಂದಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಐಟಿ ಕಾಲೇಜು ಪ್ರಾಂಶುಪಾಲ ಡಾ|| ಸಿ.ಟಿ.ಜಯ ದೇವ್ ಯುವಜನತೆಗೆ ವಿದ್ಯಾಭ್ಯಾಸ ನೀಡುವುದು ಉತ್ತಮ ವ್ಯಕ್ತಿತ್ವ ಹಾಗೂ ರಾಷ್ಟ್ರ ನಿರ್ಮಾಣಕ್ಕೆ. ಕೇವಲ ಡಿಗ್ರಿ ಪೂರೈಸಿ ಒಂದು ಕೆಲಸಕ್ಕೆ ಸೀಮಿತವಾಗಬಾರದು. ಉನ್ನತ ಜ್ಞಾನಾರ್ಜನೆ ಪಡೆದು ಸ್ಪರ್ಧಾತ್ಮಕ ಪರೀಕ್ಷೆಗ ಳಲ್ಲಿ ಭಾಗವಹಿಸಿ ಸದೃಢ ಸಮಾಜ ಕಟ್ಟುವ ಕೆಲಸದಲ್ಲಿ ಯುವಪೀಳಿಗೆಗೆ ನಿರತರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ವಿಶೇಷ ಭೂಸ್ವಾಧಿನಾಧಿಕಾರಿ ಡಾ|| ಕಾಂತರಾಜ್, ಹಾಸನ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಎಂ.ಬಿ.ಚನ್ನಕೇಶವ, ಕಸಾಪ ತರೀಕೆರೆ ಅಧ್ಯಕ್ಷ ರವಿ ದಳವಾಯಿ, ಚಿಕ್ಕಮಗಳೂರು ತಾ ಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ, ಸಹಾಯಕ ಮುಖ್ಯ ಚುನಾವಣಾಧಿಕಾರಿ ಎ.ಹೆಚ್.ಮ ಹೇಂದ್ರ, ಸಾಹಿತಿಗಳಾದ ಡಾ|| ಮರುಳಸಿದ್ದಯ್ಯ ಪಟೇಲ್, ಕನ್ನಡ ಶ್ರೀ ಭಗವಾನ್ ಉಪಸ್ಥಿತರಿದ್ದರು.

Knowledge and determination are essential to face the civil service exam.

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯಕ್ಕೆ ಮತ್ತೊಂದು ಅಮಾಯಕ ಜೀವ ಬಲಿ

ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಮತ್ತೆ ಮುಂದುವರಿದಿದ್ದು,ನಾಲ್ಕು ದಿನಗಳ ಅಂತರದಲ್ಲಿ ಮತ್ತೊಂದು ಅಮಾಯಕ ಜೀವ ಬಲಿಯಾಗಿದ್ದು, ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ ಮತ್ತೊಮ್ಮೆ ಬಯಲಾಗಿದೆ. ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ...

ಹಾಪ್‌ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಕುಮಾರಸ್ವಾಮಿ-ಉಪಾಧ್ಯಕ್ಷ ಹಾಲಪ್ಪ

ಚಿಕ್ಕಮಗಳೂರು: – ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನಗಳ ಮಾರಾಟ ಮತ್ತು ಸಂ ಸ್ಕರಣಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಹೆಚ್.ಕುಮಾರಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಜಿ.ಹಾಲಪ್ಪ ಸೋ ಮವಾರ ಸಂಘದ ಕಚೇರಿಯಲ್ಲಿ ಅವಿರೋಧವಾಗಿ ಆಯ್ಕೆಯಾದರು....

Related Articles

ಡಿ.ಸಿ.ಸಿ.ಬ್ಯಾಂಕ್ ಚುನಾವಣೆಯ ರಂಗೀನಾಟ

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಹೈ ಡ್ರಾಮಾ ನೋಡಿದರೆ ಯಾವ ಕಡೆ ನಗಾಡ...

ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ ಹೆಚ್ಚಿರುವುದು ಜನರಲ್ಲಿ ಭಾರೀ ಆತಂಕ ಮೂಡಿಸಿದೆ....

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಂತ ನಾಡಿಗ್ ಗೆ ಅಭಿನಂದನ ಸಮಾರಂಭ

ತರೀಕೆರೆ: ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕತ೯ ಅನಂತ ನಾಡಿಗ್ ಗೆ ತಾಲ್ಲೂಕು ಶರಣ...

ಅಸಂಘಟಿತ ಕಾರ್ಮಿಕರಿಗಾಗಿ ಹಲವಾರು ಜನಪರ ಯೋಜನೆ

ಚಿಕ್ಕಮಗಳೂರು: ಬಡವರ ಬದುಕಿನ ಬಗ್ಗೆ ಕಾಳಜಿ ವಹಿಸುತ್ತಿರುವ ರಾಜ್ಯಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವ...