Home namma chikmagalur chikamagalur ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಂತ ನಾಡಿಗ್ ಗೆ ಅಭಿನಂದನ ಸಮಾರಂಭ
chikamagalurHomeLatest Newsnamma chikmagalur

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಂತ ನಾಡಿಗ್ ಗೆ ಅಭಿನಂದನ ಸಮಾರಂಭ

Share
Share

ತರೀಕೆರೆ: ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕತ೯ ಅನಂತ ನಾಡಿಗ್ ಗೆ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ತರೀಕೆರೆ ವತಿಯಿಂದ ಅಭಿನಂದನಾ ಸಮಾರಂಭ ನಡೆಯಿತು

ರಾಜ್ಯ ಕಾಯ೯ನಿರತ ಪತ್ರಕತ೯ರ ಸಂಘದ ಮಾಜಿ ಅಧ್ಯಕ್ಷ ಎನ್. ರಾಜು ಮಾತನಾಡಿ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಅನಂತನಾಡಿಗ್ ಭಾಜನರಾಗಿರುವುದು ಮಾಧ್ಯಮ ಕ್ಷೇತ್ರಕ್ಕೆ ಸಂಧ ಗೌರವವಾಗಿದೆ. ತಮ್ಮ ವೃತ್ತಿ ಪಾವಿತ್ರ್ಯತೆಯನ್ನು ಅನಂತ ನಾಡಿಗ್ ಕಾಪಾಡಿಕೊಂಡು ಬಂದಿದ್ದಾರೆ. ಅವರ ಕಾಯ೯ಕ್ಷಮತೆ ಉಳಿದವರಿಗೆ ಮಾದರಿಯಾಗಲಿ ಎಂದು ಹೇಳಿದರು

ಟಿ.ಎ. ಪಿ.ಸಿ ಎಂ. ಎಸ್. ಅಧ್ಯಕ್ಷ ಎಂ. ನರೇಂದ್ರ ಮಾತನಾಡಿ ಇಂದು ಮಾಧ್ಯಮ ಕ್ಷೇತ್ರ ಕಲುಷಿತ ವಾಗಿರುವ ಸಂದರ್ಭದಲ್ಲಿ ಅನಂತನಾಡಿಗ್ ರಂತಹ ಪತ್ರಕತ೯ರು ವಿರಳರಾಗಿದ್ದಾರೆ. ಪ್ರಶಸ್ತಿಯ ಘನತೆ ಹೆಚ್ಚಿದೆ ಎಂದು ಹೇಳಿದರು

ಪುರಸಭೆ ಮಾಜಿ ಅಧ್ಯಕ್ಷ ಪ್ರಕಾಶ್ ವಮಾ೯ ಮಾತನಾಡಿ ಸಮಾಜದ ತಪ್ಪನ್ನು ತಿದ್ದುವ ಕೆಲಸ ಹಾಗೂ ಸಮಾಜಕ್ಕೆ ಉಪಯೋಗವಾಗುವ ಬರಹಗಳ ಮೂಲಕ ಅನಂತ ನಾಡಿಗ್ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು

ಪುರಸಭೆ ಮಾಜಿ ಅಧ್ಯಕ್ಷ ಟಿ. ಎಸ್. ಧಮ೯ರಾಜು ಮಾತನಾಡಿ ಅನಂತ ನಾಡಿಗ್ ಸೇವೆಯನ್ನು ಗೌರವಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ನೀಡಬೇಕು ಎಂದು ಹೇಳಿದರು

ಪುರಸಭೆ ಸದಸ್ಯ ಟಿ. ಎಂ. ಭೋಜರಾಜ್ ಮಾತನಾಡಿ ಕತ೯ವ್ಯ ಪ್ರಜ್ಙೆಗೆ ಹೆಸರಾಗಿರುವ ಅನಂತ ನಾಡಿಗ್ ತಾಲ್ಲೂಕಿನ ಇತಿಹಾಸವನ್ನು ತಿಳಿದವರು ಆಗಿದ್ದಾರೆ. ಅವರ ಮಾಧ್ಯಮ ಸೇವೆ ಸಾಥ೯ಕವಾಗಿದೆ ಎಂದು ಹೇಳಿದರು

ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಟಿ.ದಾದಾಪೀರ್ ಸೇರಿದಂತೆ ವಿವಿಧ ಕ್ಷೇತ್ರಗಳ ಮುಖಂಡರಾದ ಟಿ.ಆರ್.ಶ್ರೀಧರ್ , ಮನಸುಳಿ ಮೋಹನ್ ಕುಮಾರ್, ಇಮ್ರಾನ್ ಅಹ್ಮದ್ ಬೇಗ್, ಹಷಿ೯ಣಿ. ಟಿ.ವಿ.ಶ್ರೀನಿವಾಸ್, ಆದಿಲ್ ಪಾಷಾ, ಅಬ್ಬಾಸ್, ಇಷಾ೯ದ್ , ಶರಣ ಸಾಹಿತ್ಯ ಪರಿಷತ್ತಿನ ಕಾರ್ಯಜಶಿ೯ಗಳಾದ ಟಿ.ಜಿ.ಸದಾನಂದ, ಚೇತನ್ ಕುಮಾರ್, ಟಿ.ಎಸ್.ನಾಗರಾಜು. ಸತೀಶ್, ರಾಜು, ಮುಹೀಬ್ ಇತರರು ಅಭಿನಂದನೆ ಸಲ್ಲಿಸಿದರು

Congratulation ceremony for Media Academy Awardee Anantha Nadig

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯಕ್ಕೆ ಮತ್ತೊಂದು ಅಮಾಯಕ ಜೀವ ಬಲಿ

ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಮತ್ತೆ ಮುಂದುವರಿದಿದ್ದು,ನಾಲ್ಕು ದಿನಗಳ ಅಂತರದಲ್ಲಿ ಮತ್ತೊಂದು ಅಮಾಯಕ ಜೀವ ಬಲಿಯಾಗಿದ್ದು, ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ ಮತ್ತೊಮ್ಮೆ ಬಯಲಾಗಿದೆ. ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ...

ಹಾಪ್‌ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಕುಮಾರಸ್ವಾಮಿ-ಉಪಾಧ್ಯಕ್ಷ ಹಾಲಪ್ಪ

ಚಿಕ್ಕಮಗಳೂರು: – ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನಗಳ ಮಾರಾಟ ಮತ್ತು ಸಂ ಸ್ಕರಣಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಹೆಚ್.ಕುಮಾರಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಜಿ.ಹಾಲಪ್ಪ ಸೋ ಮವಾರ ಸಂಘದ ಕಚೇರಿಯಲ್ಲಿ ಅವಿರೋಧವಾಗಿ ಆಯ್ಕೆಯಾದರು....

Related Articles

ಡಿ.ಸಿ.ಸಿ.ಬ್ಯಾಂಕ್ ಚುನಾವಣೆಯ ರಂಗೀನಾಟ

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಹೈ ಡ್ರಾಮಾ ನೋಡಿದರೆ ಯಾವ ಕಡೆ ನಗಾಡ...

ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ ಹೆಚ್ಚಿರುವುದು ಜನರಲ್ಲಿ ಭಾರೀ ಆತಂಕ ಮೂಡಿಸಿದೆ....

ನಾಗರೀಕ ಸೇವಾ ಪರೀಕ್ಷೆ ಎದುರಿಸಲು ಜ್ಞಾನ, ಛಲದ ಅವಶ್ಯ

ಚಿಕ್ಕಮಗಳೂರು: ನಾಗರೀಕ ಸೇವಾ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ವಿ ದ್ಯಾರ್ಥಿಗಳಿಗೆ ಆಸ್ತಿ-ಅಂತಸ್ತಿನ ಅರ್ಹತೆ ಬೇಕಿಲ್ಲ. ಅಪಾರ...

ಅಸಂಘಟಿತ ಕಾರ್ಮಿಕರಿಗಾಗಿ ಹಲವಾರು ಜನಪರ ಯೋಜನೆ

ಚಿಕ್ಕಮಗಳೂರು: ಬಡವರ ಬದುಕಿನ ಬಗ್ಗೆ ಕಾಳಜಿ ವಹಿಸುತ್ತಿರುವ ರಾಜ್ಯಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವ...