Home namma chikmagalur chikamagalur ಡಿ.ಸಿ.ಸಿ.ಬ್ಯಾಂಕ್ ಚುನಾವಣೆಯ ರಂಗೀನಾಟ
chikamagalurHomeLatest Newsnamma chikmagalur

ಡಿ.ಸಿ.ಸಿ.ಬ್ಯಾಂಕ್ ಚುನಾವಣೆಯ ರಂಗೀನಾಟ

Share
Share

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಹೈ ಡ್ರಾಮಾ ನೋಡಿದರೆ ಯಾವ ಕಡೆ ನಗಾಡ ಬೇಕೋ ತಿಳಿಯುತ್ತಿಲ್ಲಾ ಎಂದು ಹೇಳುತ್ತಿದ್ದಾರೆ.

13 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.ಈಗಾಗಲೇ ತರೀಕೆರೆ ಪತ್ತಿನ ಸಹಕಾರ ಸಂಘಗಳಿಂದ ಮಾಜಿ ಶಾಸಕ ಹಾಲಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್ ಮತ್ತು ಹಾಲಿ ನಿರ್ದೇಶಕ ಕೆ.ಆರ್.ಆನಂದಪ್ಪ ಅವಿರೋಧವಾಗಿ ಅಯ್ಕೆ ಆಗಿದ್ದಾರೆ. ಮೂಡಿಗೆರೆ ಹಳಸೆ ಶಿವಣ್ಣ,ಮತ್ತು ಎನ್.ಆರ್.ಪುರದ ಜಯಪಾಲ್ ಮತ್ತು ಅಪೆಕ್ಸ್ ಅಧ್ಯಕ್ಷರಾಗಿದ್ದ ಬೆಳ್ಳಿ ಪ್ರಕಾಶ್ ಮತ್ತು ಬಸವರಾಜಪ್ಪ ಹಾಗೂ ಸೋನಾಲ್ ಆಯ್ಕೆ ಆಗಿದ್ದಾರೆ.

ಚಿಕ್ಕಮಗಳೂರು ಕ್ಷೇತ್ರದ ಸಹಕಾರ ಸಂಘಗಳಿಂದ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಮುಖಂಡರಾದ ಸಿ.ಟಿ.ರವಿ.ಮತ್ತು ಎಸ್.ಎಲ್.ಬೋಜೇಗೌಡರಿಗೆ ಟಾಂಗ್ ಕೊಡಲು ನಿರಂಜನ ಸ್ಪರ್ಧೆ ಮಾಡಿದ್ದಾರೆ.ಅವರನ್ನು ವಾಪಸ್ ತೆಗೆಸಲು ಬೆಳ್ಳಿ ಪ್ರಕಾಶ್ ಮತ್ತು ಡಿ.ಎಸ್.ಸುರೇಶ್ ಶತ ಪ್ರಯತ್ನ ನಡೆಸಿದ್ದು ಬಿಜೆಪಿ ರಾಜ್ಯ ಅಧ್ಯಕ್ಷ ವಿಜಿಯೇಂದ್ರ ಎಂಟ್ರಿಯಾದರೂ ಜಪ್ಪಯ್ಯ ಎಂದಿಲ್ಲ.

ಶೃಂಗೇರಿಯಲ್ಲಿ ಅವಿರೋಧ ಆಯ್ಕೆಯಾಗಿದೆ, ಕೊಪ್ಪದ ಸಹಕಾರ ಸಂಘಗಳ ಕ್ಷೇತ್ರದಲ್ಲಿ ಚುನಾವಣೆ ನಡೆಯುತ್ತವೆ. ಟಿ.ಎ.ಪಿ.ಸಿ.ಎಂ.ಎಸ್.ಕ್ಷೇತ್ರದಲ್ಲಿ ಕಡೂರು ಶಾಸಕ ಆನಂದ್ ಸ್ಪರ್ಧೆ ಮಾಡಿರುವುದು ಎಲ್ಲರಿಗೂ ಬಿಸಿ ತುಪ್ಪವಾಗಿದೆ.

ಇತರೆ ಸಹಕಾರ ಸಂಘಗಳ ಕ್ಷೇತ್ರದಿಂದ ಕಳೆದ ಹತ್ತು ವರ್ಷಗಳಿಂದ ಬ್ಯಾಂಕ್ ನಲ್ಲಿ ನಯಾ ಪೈಸೆ ಲೋಪವಾಗದಂತೆ ನೋಡಿಕೊಂಡಿರುವ ಟಿ.ಎಲ್.ರಮೇಶ್ ಮತ್ತೊಮ್ಮೆ ಬ್ಯಾಂಕ್ ಸ್ವಚ್ಛ ಮಾಡಲು ಭಾರೀ ಪ್ರಯತ್ನ ನಡೆಸಿದ್ದಾರೆ.ಬ್ಯಾಂಕ್ ನಲ್ಲಿ ನಡೆದಿರುವ ಲೋಪ ದೋಷಗಳು ಬಗ್ಗೆ ರಮೇಶ್ ಅರಿತು ಕುಡಿದಿರುವುದರಿಂದ ಬಿಜೆಪಿಯವರು ಮತ್ತು ಬ್ಯಾಂಕ್ ನ ಆಡಳಿತ ಮಂಡಳಿಯವರು ರಮೇಶ್ ಗೆ ಜೈ,ಜೈ,ಎನ್ನುತ್ತಿದ್ದಾರೆ.ಇವರಿಗೆ ಸೆಡ್ಡು ಹೊಡೆಯಲು ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕಣದಲ್ಲಿ ಇದ್ದಾರೆ.

ಟಿ.ಎ.ಪಿ.ಸಿ.ಎಂ.ಎಸ್.ಮತ್ತು ಇತರೆ ಸಹಕಾರ ಸಂಘಗಳ ಕ್ಷೇತ್ರದ ಚುನಾವಣೆ ಕುತೂಹಲ ಹುಟ್ಟಿಸಿದೆ. ಉಳಿದ ‌ಐದು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ನ್ಯಾಯಾಲಯದಲ್ಲಿ ಸರ್ಕಾರಕ್ಕೆ ಸೆಡ್ಡು ಹೊಡೆದವರಿಗೆ ಚುನಾವಣಾ ಕಣ ಯಾವ ಲೆಕ್ಕ ಆದರೂ ಅವರೀವರ ಮನವೊಲಿಸಲು ಕಸರತ್ತು ನಡೆಸುವುದು ನೋಡಿದರೆ ಎಷ್ಟು ಲಾಭ ವಿರಬಹುದು ಎಂಬ ಪ್ರಶ್ನೆ ಸಹಜವಾಗಿ ಕಾಡುತ್ತದೆ.

DCC Bank election drama

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯಕ್ಕೆ ಮತ್ತೊಂದು ಅಮಾಯಕ ಜೀವ ಬಲಿ

ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಮತ್ತೆ ಮುಂದುವರಿದಿದ್ದು,ನಾಲ್ಕು ದಿನಗಳ ಅಂತರದಲ್ಲಿ ಮತ್ತೊಂದು ಅಮಾಯಕ ಜೀವ ಬಲಿಯಾಗಿದ್ದು, ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ ಮತ್ತೊಮ್ಮೆ ಬಯಲಾಗಿದೆ. ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ...

ಹಾಪ್‌ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಕುಮಾರಸ್ವಾಮಿ-ಉಪಾಧ್ಯಕ್ಷ ಹಾಲಪ್ಪ

ಚಿಕ್ಕಮಗಳೂರು: – ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನಗಳ ಮಾರಾಟ ಮತ್ತು ಸಂ ಸ್ಕರಣಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಹೆಚ್.ಕುಮಾರಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಜಿ.ಹಾಲಪ್ಪ ಸೋ ಮವಾರ ಸಂಘದ ಕಚೇರಿಯಲ್ಲಿ ಅವಿರೋಧವಾಗಿ ಆಯ್ಕೆಯಾದರು....

Related Articles

ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ ಹೆಚ್ಚಿರುವುದು ಜನರಲ್ಲಿ ಭಾರೀ ಆತಂಕ ಮೂಡಿಸಿದೆ....

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಂತ ನಾಡಿಗ್ ಗೆ ಅಭಿನಂದನ ಸಮಾರಂಭ

ತರೀಕೆರೆ: ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕತ೯ ಅನಂತ ನಾಡಿಗ್ ಗೆ ತಾಲ್ಲೂಕು ಶರಣ...

ನಾಗರೀಕ ಸೇವಾ ಪರೀಕ್ಷೆ ಎದುರಿಸಲು ಜ್ಞಾನ, ಛಲದ ಅವಶ್ಯ

ಚಿಕ್ಕಮಗಳೂರು: ನಾಗರೀಕ ಸೇವಾ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ವಿ ದ್ಯಾರ್ಥಿಗಳಿಗೆ ಆಸ್ತಿ-ಅಂತಸ್ತಿನ ಅರ್ಹತೆ ಬೇಕಿಲ್ಲ. ಅಪಾರ...

ಅಸಂಘಟಿತ ಕಾರ್ಮಿಕರಿಗಾಗಿ ಹಲವಾರು ಜನಪರ ಯೋಜನೆ

ಚಿಕ್ಕಮಗಳೂರು: ಬಡವರ ಬದುಕಿನ ಬಗ್ಗೆ ಕಾಳಜಿ ವಹಿಸುತ್ತಿರುವ ರಾಜ್ಯಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವ...