Home namma chikmagalur chikamagalur ಕಾಡಾನೆಗಳ ದಾಳಿಯಿಂದ 500ಕ್ಕೂ ಹೆಚ್ಚು ಅಡಿಕೆ ಗಿಡ ನಾಶ
chikamagalurHomeLatest Newsnamma chikmagalur

ಕಾಡಾನೆಗಳ ದಾಳಿಯಿಂದ 500ಕ್ಕೂ ಹೆಚ್ಚು ಅಡಿಕೆ ಗಿಡ ನಾಶ

Share
Share

ನರಸಿಂಹರಾಜಪುರ: ತಾಲ್ಲೂಕಿನ ಮಡಬೂರು ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಅಡಿಕೆ ಗಿಡಗಳನ್ನು ಧರೆಗುರುಳಿಸಿ ನಾಶ ಮಾಡಿವೆ. ಮಡಬೂರು ಗ್ರಾಮದ ನಿವಾಸಿ ವನಮಾಲಮ್ಮ ಅವರ ಅಡಿಕೆ ತೋಟಕ್ಕೆ ಹೆಚ್ಚು ಕಾಡಾನೆಗಳ ಹಿಂಡು ದಾಳಿ ಮಾಡಿ. ೩ರಿಂದ ೪ ವರ್ಷದ ಸುಮಾರು ೫೦೦ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಧರೆಗುರುಳಿಸಿವೆ.

ಮಡಬೂರು ಗ್ರಾಮದ ವ್ಯಾಪ್ತಿಗೆ, ಆರಂಬಳ್ಳಿ ಮೀಸಲು ಅರಣ್ಯ ವ್ಯಾಪ್ತಿಗೆ ಭದ್ರಾ ವನ್ಯಜೀವಿ ವಿಭಾಗದಿಂದ ಭದ್ರಾ ಹಿನ್ನೀರು ದಾಟಿ ಐದಾರು ಅನೆಗಳು ಬಂದಿದ್ದವು. ಇಂದು ಮರಿ ಆನೆಗಳು ಸೇರಿ ಒಟ್ಟು ೧೬ ಕಾಡಾನೆಗಳು ಬಂದಿದ್ದು, ಅರಣ್ಯ ಸಿಬ್ಬಂದಿ ಹಾಗೂ ಆನೆ ಕಾರ್ಯಪಡೆ ತಂಡದ ಸಹಯೋಗದಲ್ಲಿ ಅವುಗಳನ್ನು ಅರಣ್ಯಕ್ಕೆ ಓಡಿಸುವ ಕಾರ್ಯಾಚರಣೆ ಮಾಡಲಾಗಿದೆ.

ಅಡಿಕೆ ಗಿಡ ನಾಶ ಮಾಡಿದ ತೋಟಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಗಿದೆ ಎಂದು ನರಸಿಂಹರಾಜಿಪುರ ವಲಯ ಅರಣ್ಯಾಧಿಕಾರಿ ಪ್ರವೀಣ್ ಕುಮಾರ್ ಮಾಹಿತಿ ನೀಡಿದರು. ಕಳೆದ ಹಲವು ದಿನಗಳಿಂದ ಕಡಿಮೆಯಾಗಿದ್ದ ಕಾಡಾನೆಗಳ ಹಾವಳಿ ಭದ್ರಾಹಿನ್ನೀರು ಕಡಿಮೆಯಾಗುತ್ತಿದ್ದಂತೆ ಹೆಚ್ಚಾಗಿದ್ದು, ಭದ್ರಾ ಹಿನ್ನೀರು ದಾಟಿ ಗ್ರಾಮಗಳತ್ತ ಕಾಡಾನೆಗಳು ದಾಂಗುಡಿ ಇಡುತ್ತಿರು ವುದು ರೈತರಲ್ಲಿ ಮತ್ತು ಗ್ರಾಮಸ್ಥರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಕಾಡಾನೆಗಳನ್ನು ಅಭಯಾರಣ್ಯಕ್ಕೆ ಓಡಿಸುವ ಕೆಲಸ ಅರಣ್ಯ ಇಲಾಖೆಯವರು ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

More than 500 areca nut plants destroyed by wild elephant attacks

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...