Home namma chikmagalur chikamagalur ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗಿರೀಶ್
chikamagalurHomeLatest Newsnamma chikmagalur

ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗಿರೀಶ್

Share
Oplus_153223168
Share

ಚಿಕ್ಕಮಗಳೂರು: ಸುಮಾರು ೫ ವರ್ಷಗಳಿಂದ ಸಂಘಟನೆಯನ್ನು ಸಮರ್ಥವಾಗಿ ನೆಡೆಸಿಕೊಂಡು ಬಂದಿರುವ ಗಿರೀಶ್ ರವರನ್ನು ರಾಜ್ಯಾಧ್ಯಕ್ಷರ ಆದೇಶದಂತೆ ಭೀಮ್ ಆರ್ಮಿ ಜಿಲ್ಲಾ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಕಾರ್ಯದರ್ಶಿ ಮಂಜುನಾಥ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನಿಯಮದಂತೆ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆಯಲ್ಲಿ ೬ ಸದಸ್ಯರ ತಾತ್ಕಾಲಿಕ ಸಮಿತಿಯನ್ನು ರಚನೆ ಮಾಡಿ ಹೊಸ ಜಿಲ್ಲಾಧ್ಯಕ್ಷರ ನೇಮಕಾತಿ ಸೂಚಿಸಲಾಗಿತ್ತು ಆದರೆ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಚುನಾವಣೆ ಪೂರ್ವ ಮಾಹಿತಿಯನ್ನು ಎಲ್ಲಾ ಸದಸ್ಯರ ತಿಳಿಸದೆ ಕೆಲವೇ ಸದಸ್ಯರ ಗಮನಕ್ಕೆ ತಂದು ಕೇವಲ ೨೪ ಗಂಟೆಯಲ್ಲಿ ಚುನಾವಣೆ ಪ್ರಕ್ರಿಯೆ ಮಾಡಿ ಮುಗಿಸಲಾಗಿತ್ತು ಎಂದರು.

ಇದರಿಂದ ಸದಸ್ಯರು ಮತ್ತು ಕಾರ್ಯಕರ್ತರು ಮರು ಚುನಾವಣೆ ಮಾಡುವಂತೆ ರಾಜ್ಯಾಧ್ಯಕ್ಷರಿಗೆ ಅರ್ಜಿ ನೀಡಿರುತ್ತಾರೆ. ಅರ್ಜಿಯನ್ನು ಪರಿಶೀಲಿಸಿದ ಅವರು ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ಅಸಿಂಧು ಎಂದು ಪರಿಗಣಿಸಿ. ಮರು ಚುನಾವಣೆ ನಡೆಯುವವರೆಗೂ ಗಿರೀಶ್ ರವರನ್ನು ಜಿಲ್ಲಾಧ್ಯರಾಗಿ ಮುಂದುವರೆಯುವಂತೆ ತಿಳಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಭೀಮ್ ಆರ್ಮಿ, ತಾಲ್ಲೂಕು ಅಧ್ಯಕ್ಷ ರಾಕೇಶ್, ಪದಾಧಿಕಾರಿಗಳಾದ ಸುರೇಶ್, ಹರೀಶ್, ನಿಶ್ಚಲ್ ಇತರರು ಉಪಸ್ಥಿತರಿದ್ದರು.

Girish appointed as Bhim Army district president

 

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...